ನಾನು ದಡ್ಡ ಎಂಬುದನ್ನು ಒಪ್ಪಿಕೊಳ್ಳುವೆ: ಶ್ರೀರಾಮುಲು
Team Udayavani, Nov 2, 2018, 12:38 PM IST
ಬಳ್ಳಾರಿ: “ನಾನು ದಡ್ಡ’ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಆದರೆ, ಪ್ರತಿ 13 ಕಿ.ಮೀ.ಗೆ ಭಾಷೆ ಬದಲಾವಣೆ ಯಾಗುತ್ತದೆ ಎಂಬುದನ್ನು ಸಿದ್ದರಾಮಯ್ಯ ಅರಿಯಬೇಕು ಎಂದು ಶ್ರೀರಾಮುಲು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಸಿದ್ದರಾಮಯ್ಯನವರು ಪದೇ ಪದೇ ನನಗೆ ಕನ್ನಡ ಮಾತನಾಡಲು ಬರಲ್ಲ ಎನ್ನುತ್ತಿದ್ದಾರೆ.
ಸಿದ್ದರಾಮಯ್ಯ ವಕೀಲರಾಗಿದ್ದವರು. ಹಲವು ವರ್ಷಗಳ ಕಾಲ ಮಕ್ಕಳಿಗೆ ವ್ಯಾಕರಣ ಪಾಠ ಮಾಡಿದಂತವರು. ಅವರಂತೆ ನಾನು ಓದಿಕೊಂಡವನಲ್ಲ. “ನಾನು ದಡ್ಡ’ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಆದರೆ, ಪ್ರತಿ 13 ಕಿ.ಮೀ.ಗೆ ಭಾಷೆ ಬದಲಾವಣೆಯಾಗುತ್ತದೆ ಎಂಬುದನ್ನು ಅವರು ಅರಿಯಬೇಕು. ನನ್ನ ಭಾಷೆ ಹೀಗೆ.
ಗ್ರಾಮೀಣ ಸೊಗಡಿನಿಂದ ಕೂಡಿರುತ್ತದೆ.
ನನಗೆ ಭಾಷೆ ಬರಲ್ಲ ಎಂದು ಸಿದ್ದರಾಮಯ್ಯ, ಉತ್ತರ ಕರ್ನಾಟಕ ಭಾಗದ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ ಎಂದರು. ಅಲ್ಲದೇ, ಸಿದ್ದರಾಮಯ್ಯನವರು ನನಗೆ 371(ಜೆ) ಗೊತ್ತಿಲ್ಲ. ಗೊತ್ತಿರುವುದು 320, 420, 307 ಐಪಿಸಿ ಸೆಕ್ಷನ್ಗಳಷ್ಟೇ ಎಂದಿದ್ದಾರೆ. ಆದರೆ, ನನಗೆ ಬಾಬಾ ಸಾಹೇಬ್ ಡಾ| ಬಿ.ಆರ್. ಅಂಬೇಡ್ಕರ್ ಬರೆದಿರುವ ಸಂವಿಧಾನ ಗೊತ್ತು. ಬೇರೇನೂ ಗೊತ್ತಿಲ್ಲ. ಜತೆಗೆ, ಹಿಂದಿನ ಬಿಜೆಪಿ ಅಧಿಕಾರಾವಧಿಯಲ್ಲಿ ಜಾರಿಗೆ ತರಲಾಗಿದ್ದ 108 ಆ್ಯಂಬುಲೆನ್ಸ್ ಬಳಸುವ ಪ್ರತಿಯೊಬ್ಬರಿಗೂ ನನ್ನ ನೆನಪಿದೆ ಎಂದು ತಿರುಗೇಟು ನೀಡಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ 78 ಕ್ಷೇತ್ರಗಳಲ್ಲಿ ಜಯ ಗಳಿಸಿ ರುವ ಕಾಂಗ್ರೆಸ್ ನವರು, ಅಧಿಕಾರ ಕೈ ತಪ್ಪಲಿದೆ ಎಂಬ ಭಯದಿಂದ ಅಪ್ಪ, ಮಕ್ಕಳು (ದೇವೇಗೌಡ, ಕುಮಾರಸ್ವಾಮಿ) ಎಷ್ಟೇ ಕಾಟಕೊಟ್ಟರೂ, ಸಹಿಸಿಕೊಳ್ಳುತ್ತಿದ್ದಾರೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ