ಐದು ಕ್ಷೇತ್ರಗಳ ಭವಿಷ್ಯ ಇಂದು ನಿರ್ಧಾರ


Team Udayavani, Nov 3, 2018, 6:00 AM IST

v-9.jpg

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಐದು ಕ್ಷೇತ್ರಗಳ ಉಪ ಚುನಾವಣೆಗೆ ಶನಿವಾರ ಮತದಾನ ನಡೆಯಲಿದೆ. ರಾಜ್ಯ ರಾಜಕಾರಣದಲ್ಲಿ ಮತ್ತೂಂದು ಹಂತದ ಧ್ರುವೀಕರಣ ತರಲಿದೆ ಎಂದೇ ಬಿಂಬಿತವಾಗಿರುವ ಚುನಾವಣೆಯ ಫ‌ಲಿತಾಂಶವನ್ನು ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಹಾಗೂ ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಮತದಾನದ ಬಗ್ಗೆ ಕುತೂಹಲ ಹೆಚ್ಚಿಸಿದೆ. ಹೀಗಾಗಿ, ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರವೂ ಶುಕ್ರವಾರ ಅಭ್ಯರ್ಥಿಗಳು ಹಾಗೂ ಸ್ಥಳೀಯ ನಾಯಕರು ಮನೆ, ಮನೆಗೆ ತೆರಳಿ ಮತದಾರರ ಕೃಪೆಗಾಗಿ ಅಂತಿಮ ಹಂತದ ಕಸರತ್ತು ನಡೆಸಿದರು.

ಐದು ಕ್ಷೇತ್ರಗಳಲ್ಲಿ ಒಟ್ಟು 30 ಮಂದಿ ಕಣದಲ್ಲಿದ್ದಾರೆ. ಪ್ರಮುಖವಾಗಿ ಶಿವಮೊಗ್ಗ ಹಾಗೂ ಬಳ್ಳಾರಿ ಲೋಕಸಭೆ, ಜಮಖಂಡಿ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಹಾಗೂ ಬಿಜೆಪಿ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ. ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ, ದಿ.ಎಸ್‌. ಬಂಗಾರಪ್ಪ ಪುತ್ರ ಮಧು ಬಂಗಾರಪ್ಪ, ಬಳ್ಳಾರಿಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ವಿ.ಎಸ್‌.ಉಗ್ರಪ್ಪ, ಶಾಸಕ ಶ್ರೀರಾಮುಲು ಸಹೋದರಿ ಶಾಂತಾ, ಜಮಖಂಡಿಯಲ್ಲಿ ಮಾಜಿ ಸಚಿವ ದಿ.ಸಿದ್ದು ನ್ಯಾಮಗೌಡ ಪುತ್ರ ಆನಂದ್‌ ನ್ಯಾಮಗೌಡ, ಬಿಜೆಪಿಯ ಶ್ರೀಕಾಂತ ಕುಲಕರ್ಣಿ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ. 

ಈ ಮಧ್ಯೆ, ಯುದ್ಧ ಭೂಮಿಯಲ್ಲಿ ಶಸ್ತ್ರ ಉತ್ಯಾಗ ಎಂಬಂತೆ ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಚಂದ್ರಶೇಖರ್‌ ಅವರು ನಿವೃತ್ತಿ ಘೋಷಿಸಿದ್ದರಿಂದ ಬಿಜೆಪಿಗೆ ಹಿನ್ನಡೆಯುಂಟಾಗಿದೆ. ಅಲ್ಲಿ ಮತದಾನ “ಒನ್‌ ಸೈಡೆಡ್‌’ ಎಂಬಂತಾಗಿದೆ. ಇನ್ನು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದಿಂದ ಎಲ್‌.ಆರ್‌. ಶಿವರಾಮೇಗೌಡ ಹಾಗೂ ಬಿಜೆಪಿಯ ಸಿದ್ದರಾಮಯ್ಯ ನಡುವೆ ನೇರ ಹಣಾಹಣಿಯಿದೆ.

ಮತದಾನ ಸಮಯ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ.

ಲೋಕಸಭಾ ಕ್ಷೇತ್ರಗಳು

ಬಳ್ಳಾರಿ
ಅಭ್ಯರ್ಥಿಗಳು
ಜೆ.ಶಾಂತಾ (ಬಿಜೆಪಿ).
ವಿ.ಎಸ್‌.ಉಗ್ರಪ್ಪ (ಕಾಂಗ್ರೆಸ್‌)
ಡಾ| ಟಿ.ಆರ್‌.ಶ್ರೀನಿವಾಸ್‌,
ಪಂಪಾಪತಿ. (ಪಕ್ಷೇತರ )

ಮತದಾರರು
ಪುರುಷರು: 8,45,561
ಮಹಿಳೆಯರು: 8,54,561
ಇತರರು: 215
ಒಟ್ಟು: 1708266

ಕ್ಷೇತ್ರವ್ಯಾಪ್ತಿ
ಬಳ್ಳಾರಿ ನಗರ, ಬಳ್ಳಾರಿ
ಗ್ರಾಮಾಂತರ, ವಿಜಯನಗರ, ಕಂಪ್ಲಿ,
ಸಂಡೂರು, ಕೂಡ್ಲಿಗಿ, ಹಗರಿ
ಬೊಮ್ಮನಹಳ್ಳಿ, ಹೂವಿನಹಡಗಲಿ
ವಿಧಾನಸಭಾ ಕ್ಷೇತ್ರಗಳು

ಶಿವಮೊಗ್ಗ
ಅಭ್ಯರ್ಥಿಗಳು
ಬಿ.ವೈ.ರಾಘವೇಂದ್ರ (ಬಿಜೆಪಿ),
ಮಧು ಬಂಗಾರಪ್ಪ (ಜೆಡಿಎಸ್‌),
ಮಹಿಮಾ ಪಟೇಲ್‌ (ಜೆಡಿಯು).

ಮತದಾರರು
ಪುರುಷರು: 8,17,942
ಮಹಿಳೆಯರು: 8,27,109
ಇತರರು: 460
ಒಟ್ಟು: 16,45,511

ಕ್ಷೇತ್ರವ್ಯಾಪ್ತಿ
ಶಿವಮೊಗ್ಗ ನಗರ, ಗ್ರಾಮಾಂತರ,
ಭದ್ರಾವತಿ, ತೀರ್ಥಹಳ್ಳಿ, ಸಾಗರ,
ಸೊರಬ, ಶಿಕಾರಿಪುರ ಮತ್ತು
ಉಡುಪಿ ಜಿಲ್ಲೆಯ ಬೈಂದೂರು
ವಿಧಾನಸಭೆ ಕ್ಷೇತ್ರ.

ಮಂಡ್ಯ
ಅಭ್ಯರ್ಥಿಗಳು
ಶಿವರಾಮೇಗೌಡ- (ಜೆಡಿಎಸ್‌)
ಡಾ.ಸಿದ್ದರಾಮಯ್ಯ- (ಬಿಜೆಪಿ)
ಏಳು ಪಕ್ಷೇತರರು

ಮತದಾರರು
ಪುರುಷರು: 8,43,335
ಮಹಿಳೆಯರು: 8,40,971
ಸೇವಾ ಮತದಾರರು: 676
ಇತರರು: 140
ಒಟ್ಟು: 16,84,446

ಕ್ಷೇತ್ರವ್ಯಾಪ್ತಿ
ಮಳವಳ್ಳಿ, ಮದ್ದೂರು, ಮಂಡ್ಯ,
ನಾಗಮಂಗಲ, ಶ್ರೀರಂಗಪಟ್ಟಣ,
ಕೆ.ಆರ್‌.ಪೇಟೆ, ಮೇಲುಕೋಟೆ
ಹಾಗೂ ಕೆ.ಆರ್‌.ನಗರ ವಿಧಾನಸಭಾ

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.