ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಕುಮಾರ ಬಂಗಾರಪ್ಪ
Team Udayavani, Nov 4, 2018, 6:25 AM IST
ಸೊರಬ: ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಮಾಡಿದ ಮೀ ಟೂ ಆರೋಪಕ್ಕೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಕುಮಾರ ಬಂಗಾರಪ್ಪ ತಿಳಿಸಿದರು.
ತಾಲೂಕಿನ ಕುಬಟೂರಿನಲ್ಲಿ ಮತದಾನ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬದ ಬಗ್ಗೆ ಮುಖ್ಯಮಂತ್ರಿ ಸ್ಥಾನದಲ್ಲಿದ್ದು ಕುಮಾರಸ್ವಾಮಿ ಮಾತನಾಡಿದ್ದು ಎಷ್ಟರ ಮಟ್ಟಿಗೆ ಸರಿ? ಕಾಲವೇ ಇದಕ್ಕೆ ಉತ್ತರ ನೀಡಲಿದೆ. ಅವರ ವಿರುದ್ಧ ತಾವು ಮಾಡಿದ ಆರೋಪಕ್ಕೆ ಕ್ಷಮೆ ಕೋರುವುದಿಲ್ಲ ಎಂದರು.