ದುನಿಯಾ ವಿಜಯ್ಗೆ ಸಂಕಷ್ಟಗಳ ಮೇಲೆ ಸಂಕಷ್ಟ;ಮತ್ತೊಂದು ಚಾರ್ಜ್ ಶೀಟ್
Team Udayavani, Nov 4, 2018, 12:33 PM IST
ಬೆಂಗಳೂರು: ಕುಟುಂಬ ಕಲಹದಿಂದಾಗಿ ಠಾಣೆ ಮೇಟ್ಟಿಲೇರಿ ಕಂಗಾಲಾಗಿರುವ ನಟ ದುನಿಯಾ ವಿಜಯ್ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮಾಸ್ತಿ ಗುಡಿ ಚಿತ್ರೀಕರಣ ಸಂದರ್ಭ ನಟರಿಬ್ಬರ ಸಾವಿನ ಪ್ರಕರಣದಲ್ಲಿ ನಿರ್ಮಾಪಕ ಸುಂದರ್ ಗೌಡ ಅವರು ಪರಾರಿಯಾಗಲು ಸಹಕಾರ ನೀಡಿದ ಪ್ರಕರಣದಲ್ಲಿ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು 65 ಪುಟಗಳ ಚಾರ್ಜ್ ಶೀಟ್ ಸಿದ್ಧಪಡಿಸಿ 2 ನೇ ಎಸಿಎಂಎಂ ಕೋರ್ಟ್ಗೆ ಸಲ್ಲಿಸಿದ್ದಾರೆ.
ಸುಂದರ್ಗೌಡ ಅವರು ನಟರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್ಗೆ ಹಾಜರಾಗಿರಲಿಲ್ಲ. ಸುಂದರ್ಗೌಡ ಬಂಧನಕ್ಕೆ ತೆರಳಿದ್ದ ವೇಳೆ ದುನಿಯಾ ವಿಜಯ್ ದಬ್ಬಾಳಿಕೆ ನಡೆಸಿದ್ದರು. ಕೋರ್ಟ್ ಆದೇಶ ಉಲ್ಲಂಘನೆ ಮಾಡಿ , ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ದುನಿಯಾ ವಿಜಯ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಬಳಿಕ ವಿಜಯ್ ತಲೆ ಮರೆಸಿಕೊಂಡಿದ್ದರು. ನಂತರ ಬಂಧನಕ್ಕೊಳಗಾಗಿದ್ದ ವಿಜಯ್ ಜಾಮೀನು ಪಡೆದು ಹೊರ ಬಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ