ಶೃಂಗೇರಿ ಪೀಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ
Team Udayavani, Nov 5, 2018, 6:25 AM IST
ಶೃಂಗೇರಿ: ಶ್ರೀ ಶಾರದಾಪೀಠದ 36 ನೇ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿಗಳ ಸನ್ಯಾಸ ಸ್ವೀಕಾರ ದಿನದ ಅಂಗವಾಗಿ ಭಾನುವಾರ ಶ್ರೀ ಮಠದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು.
ಬೆಳಗ್ಗೆ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿಗಳು ಗುರುನಿವಾಸದಲ್ಲಿ ಶ್ರೀ ಚಂದ್ರಮೌಳೇಶ್ವರಸ್ವಾಮಿ, ಶ್ರೀಚಕ್ರ ಹಾಗೂ ರತ್ನಗರ್ಭ ಗಣಪತಿಗೆ ಪೂಜೆ ಸಲ್ಲಿಸಿದರು. ಶ್ರೀ ಶಾರದಾ ದೇಗುಲಕ್ಕೆ ಆಗಮಿಸಿ ಪೀಠದಲ್ಲಿರುವ ಹೊರಪ್ರಾಕಾರದ ಶ್ರೀವಿದ್ಯಾಶಂಕರ, ಶ್ರೀ ಸುಬ್ರಮಣ್ಯ ಸ್ವಾಮೀಜಿ, ಶ್ರೀ ಸುರೇಶ್ವರಾಚಾರ್ಯ, ಶ್ರೀವಾಗೀಶ್ವರಿ ದೇವಸ್ಥಾನ ಶ್ರೀ ಶಂಕರಾಚಾರ್ಯ, ಶ್ರೀ ತೋರಣಗಣಪತಿ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ಶ್ರೀ ಶಾರದಾ ಸನ್ನಿ ಧಿಯಲ್ಲಿ ದೇವೀ ಸಪ್ತಶತಿ ಪಾರಾಯಣ, ಶ್ರೀಸೂಕ್ತ, ಪುರುಷ ಸೂಕ್ತ ಪಾರಾಯಣ ಹಾಗೂ ಮಹಾಮಂಗಳಾರತಿ ನೆರವೇರಿಸಿದರು. ಇವರೊಂದಿಗೆ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು ಹಾಜರಿದ್ದರು. ಇದಕ್ಕೂ ಮೊದಲು ಭಾರತೀತೀರ್ಥರು ಗುರುಭವನದಲ್ಲಿ ಶ್ರೀ ಚಂದ್ರಶೇಖರ ಭಾರತೀ, ಶ್ರೀ ಅಭಿನವ ವಿದ್ಯಾತೀರ್ಥಸ್ವಾಮೀಜಿಗಳ ಅಧಿಷ್ಠಾನಮಂದಿರದಲ್ಲಿ ಪೂಜೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ