ಪತ್ನಿ ಗರ್ಭಿಣಿಯಾಗಿದ್ದಕ್ಕೆ ಮನೆ ಬಿಟ್ಟು ಹೋದ!
Team Udayavani, Nov 6, 2018, 7:00 AM IST
ಮಧುಗಿರಿ: ಹೆಂಡತಿ ಗರ್ಭಿಣಿಯಾಗಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಪತಿ ಮನೆ ಬಿಟ್ಟು ಪರಾರಿಯಾದ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬುಳ್ಳಸಂದ್ರದಲ್ಲಿ ನಡೆದಿದೆ.
ತಾಲೂಕಿನ ದೊಡ್ಡೇರಿ ಹೋಬಳಿಯ ಬುಳ್ಳಸಂದ್ರದ ಸಿದ್ದಲಿಂಗಪ್ಪ ಪರಾರಿಯಾದ ಪತಿರಾಯ. ಈತ 2 ವರ್ಷದ ಹಿಂದೆ
ಫೇಸ್ಬುಕ್ನಲ್ಲಿ ಪರಿಚಯವಾಗಿದ್ದ ಚನ್ನಪಟ್ಟಣದ ಸರಸ್ವತಿ ಎಂಬಾಕೆಯನ್ನು ಮದುವೆಯಾಗಿದ್ದ. ಬೆಂಗಳೂರಲ್ಲಿ ಕೆಲಸ ಮಾಡುವಾಗ ಫೇಸ್ಬುಕ್ನಲ್ಲಿ ಆಕೆಯನ್ನು ಪರಿಚಯ ಮಾಡಿಕೊಂಡು, ಪ್ರೀತಿಸಿ, ಆಕೆಗೆ ನಿಗದಿಯಾಗಿದ್ದ ಮದುವೆಯನ್ನು ರದ್ದು ಪಡಿಸಿ, ತಾನೇ ವಿವಾಹವಾಗಿದ್ದ. ಕೆಲ ಕಾಲ ಬೆಂಗಳೂರಿನ ಹೆಗ್ಗೆರೆಯಲ್ಲಿ ವಾಸವಿದ್ದ. ಪತ್ನಿ, ಸರಸ್ವತಿ ಗರ್ಭಿಣಿಯಾದಾಗ ಆಕೆಯನ್ನು ಮಧುಗಿರಿಗೆ ಕರೆ ತಂದು ಗರ್ಭಪಾತಕ್ಕೆ ಒತ್ತಾಯಿಸಿದ. ಇದಕ್ಕೆ ಆಕೆ ಆಕ್ಷೇಪ ವ್ಯಕ್ತಪಡಿಸಿ ಗಲಾಟೆ ಮಾಡಿದಳು.
ಇದರಿಂದ ಬೇಸರ ಗೊಂಡು ಸಿದ್ದಲಿಂಗ ಪರಾರಿಯಾಗಿದ್ದಾನೆ. ಈ ಸಂಬಂಧ ಆಕೆ ಬಡವನಹಳ್ಳಿ ಹಾಗೂ ಬೆಂಗಳೂರಿನ ಅಕ್ಕೂರು ಪೋಲಿಸ್ ಠಾಣೆ ಗಳಿಗೆ ದೂರು ನೀಡಿದ್ದಾಳೆ. ಕಳೆದ ತಿಂಗಳಿಂದಲೂ ಬೆಂಗಳೂರಿನಲ್ಲಿನ ಕೆಲಸಕ್ಕೂ ಹಾಜರಾ ಗದ ಪತಿ, ನನಗೆ ಅನ್ಯಾಯ ಮಾಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾಳೆ. ಅಲ್ಲದೆ, ಬುಳ್ಳಸಂದ್ರದ ಪತಿ ಮನೆಯ ಮುಂದೆ ನ್ಯಾಯಕ್ಕಾಗಿ ಧರಣಿ ಕುಳಿತಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ