ಉಪಕದನದಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿಗೆ ಜೈ, ಬಿಜೆಪಿಗೆ ಮುಖಭಂಗ


Team Udayavani, Nov 6, 2018, 1:20 PM IST

siddaramaiah.jpg

ಬೆಂಗಳೂರು/ಬಳ್ಳಾರಿ: ತೀವ್ರ ಕುತೂಹಲ ಕೆರಳಿಸಿದ್ದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಮಂಗಳವಾರ ಹೊರಬಿದ್ದಿದ್ದು, ಬಳ್ಳಾರಿ, ಮಂಡ್ಯ ಲೋಕಸಭೆ ಮತ್ತು ರಾಮನಗರ, ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಮೈತ್ರಿ ಕೂಟ ಭದ್ರವಾದಂತಾಗಿದೆ. ಮತ್ತೊಂದೆಡೆ ಭಾರತೀಯ ಜನತಾ ಪಕ್ಷ ಬೈಂದೂರು-ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಜಯಸಾಧಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರ ನಾಯಕತ್ವಕ್ಕೆ ಮತ್ತಷ್ಟು ಬಂಡಾಯದ ಬಿಸಿ ಮುಟ್ಟುವಂತಾಗಿದೆ.

ಬಳ್ಳಾರಿಯಲ್ಲಿ ವಿಎಸ್ ಉಗ್ರಪ್ಪ ಜಯದ ದಾಖಲೆ:

ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಎಸ್ ಉಗ್ರಪ್ಪ 6,20,977 ಭರ್ಜರಿ ಮತ ಪಡೆದು ಪ್ರತಿಸ್ಪರ್ಧಿ ಬಿಜೆಪಿಯ ಜೆ.ಶಾಂತಾ ಅವರು 3,79, 321ಮತ ಗಳಿಸಿ ಪರಾಜಯಗೊಂಡಿದ್ದಾರೆ. ಉಗ್ರಪ್ಪ 2,41,656 ಭಾರೀ ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಜಯಭೇರಿ:

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ನ ಶಿವರಾಮೇಗೌಡರು 5,69,302 ಮತ ಪಡೆದು, ಬಿಜೆಪಿಯ ಸಿದ್ದರಾಮಯ್ಯ 2,44,377 ಮತಗಳಿಸಿ ಹೀನಾಯವಾಗಿ ಸೋಲುಂಡಿದ್ದಾರೆ. ಜೆಡಿಎಸ್ ನ ಶಿವರಾಮೇಗೌಡ 3,24,925 ಭಾರೀ ಮತಗಳ ಅಂತರದಿಂದ ಗೆಲುವಿನ ನಗು ಬೀರಿದ್ದಾರೆ.

ಶಿವಮೊಗ್ಗ-ಬೈಂದೂರು ಲೋಕಸಭಾ ಕ್ಷೇತ್ರ ಮತ್ತೆ ಬಿಜೆಪಿ ತೆಕ್ಕೆಗೆ:

ಶಿವಮೊಗ್ಗ-ಬೈಂದೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ 5,43,306 ಮತ ಪಡೆದಿದ್ದರೆ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ 4,91,158 ಮತ ಗಳಿಸಿ ಸೋಲಿನ ರುಚಿ ಕಂಡಿದ್ದಾರೆ. ಬಿವೈ ರಾಘವೇಂದ್ರ 52,148 ಮತಗಳ ಅಂತರದಿಂದ ಗೆದ್ದಿದ್ದಾರೆ.

ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಅನಿತಾಗೆ ಸುಲಭ ಜಯ:

ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಅನಿತಾ ಕುಮಾರಸ್ವಾಮಿ 1,25,043 ಮತ ಪಡೆದಿದ್ದರೆ, ಬಿಜೆಪಿಯ(ಕಣದಿಂದ ಹಿಂದೆ ಸರಿದಿದ್ದ) ಎಲ್.ಚಂದ್ರಶೇಖರ್ 15,906 ಮತ ಪಡೆಯಲು ಶಕ್ತರಾಗಿದ್ದಾರೆ. ಅನಿತಾ ಕುಮಾರಸ್ವಾಮಿ 1,09,137 ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಜಮಖಂಡಿ ವಿಧಾನಸಭಾ ಕ್ಷೇತ್ರ ಕೈ ವಶ:

ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಆನಂದ್ ನ್ಯಾಮಗೌಡ 97017 ಮತ ಪಡೆದಿದ್ದು, ಬಿಜೆಪಿಯ ಶ್ರೀಕಾಂತ ಕುಲಕರ್ಣಿ 57,537 ಮತಗಳಿಸಿ ಪರಾಭವಗೊಂಡಿದ್ದಾರೆ. ಆನಂದ್ ನ್ಯಾಮಗೌಡ 39,476 ಮತಗಳ ಅಂತರದಿಂದ ಜಯಲಕ್ಷ್ಮಿ ಒಲಿದಿದ್ದಾಳೆ.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.