ಟ್ರಾಫಿಕ್ ಠಾಣೆಗೆ ನುಗ್ಗಿದ ನಾಗರ!
Team Udayavani, Nov 9, 2018, 6:00 AM IST
ಶಿವಮೊಗ್ಗ: ನಗರದ ಪೂರ್ವ ಟ್ರಾಫಿಕ್ ಪೊಲೀಸ್ ಠಾಣೆಗೆ ಗುರುವಾರ ನಾಗರ ಹಾವೊಂದು ನುಗ್ಗಿ ಕೆಲ ಕಾಲ ಆತಂಕ ಸೃಷ್ಟಿಸಿತು. ಠಾಣೆಯಲ್ಲಿ ಕೆಲಸ ಮಾಡುವ ಕಂಪ್ಯೂಟರ್ ಆಪರೇಟರ್ ರಘುಚಂದ್ರ ಎಂಬುವರು ಮಧ್ಯಾಹ್ನ ಠಾಣೆ ಒಳಗೆ ಬರುತ್ತಿದ್ದಂತೆ ಕಂಪ್ಯೂಟರ್ ರೂಮ್ ಪಕ್ಕದ ಕೋಣೆಯಲ್ಲಿ ಕಾಣಿಸಿ ಕೊಂಡಿದೆ. ತಕ್ಷಣ ಮೇಲಧಿಕಾರಿಗಳಿಗೆ ವಿಷಯ ಮುಟ್ಟಿಸಿದರು. ಮೇಲಧಿಕಾರಿಗಳು ಉರಗ ತಜ್ಞ
ಕಿರಣ್ಗೆ ಫೋನ್ ಮಾಡಿ ಕರೆಸಿದರು. ಸ್ನೇಕ್ ಕಿರಣ್ ಆಗಮಿಸಿ ಹಾವನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟರು.
ಪೂರ್ವ ಟ್ರಾಫಿಕ್ ಪೊಲೀಸ್ ಠಾಣೆಯು ಸಂಪೂರ್ಣ ಶಿಥಿಲಗೊಂಡಿದ್ದು ಕ್ರಿಮಿಕೀಟ, ವಿಷಜಂತುಗಳ ಕಾಟ ನಿರಂತರವಾಗಿದೆ ಎನ್ನುತ್ತಾರೆ ಅಲ್ಲಿನ ಸಿಬ್ಬಂದಿ. ಈ ಹಿಂದೆ ಎರಡು ಮೂರು ಬಾರಿ ಹಾವು ಕಾಣಿಸಿಕೊಂಡಿದೆ. ಠಾಣೆಯೊಳಗೆ ಕಪ್ಪೆಗಳ ಪ್ರವೇಶ ಸಾಮಾನ್ಯವಾಗಿದ್ದು ಕಪ್ಪೆ ವಾಸನೆ ಹಿಡಿದು ಹಾವು ಬಂದಿರಬಹುದು ಎಂದು ಶಂಕಿಸಲಾಗಿದೆ. ಈ ಕಟ್ಟಡವನ್ನು ಕೆಡವಲು ಈಗಾಗಲೇ ಆದೇಶ ದೊರೆತಿದ್ದು ಪರ್ಯಾಯ ಕಟ್ಟಡಕ್ಕೆ ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ. ಎಂಆರ್ಎಸ್ ಬಳಿಯ ಬಾಡಿಗೆ ಕಟ್ಟಡಕ್ಕೆ ಠಾಣೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್