ಟ್ರಾಫಿಕ್ ಠಾಣೆಗೆ ನುಗ್ಗಿದ ನಾಗರ!
Team Udayavani, Nov 9, 2018, 6:00 AM IST
ಶಿವಮೊಗ್ಗ: ನಗರದ ಪೂರ್ವ ಟ್ರಾಫಿಕ್ ಪೊಲೀಸ್ ಠಾಣೆಗೆ ಗುರುವಾರ ನಾಗರ ಹಾವೊಂದು ನುಗ್ಗಿ ಕೆಲ ಕಾಲ ಆತಂಕ ಸೃಷ್ಟಿಸಿತು. ಠಾಣೆಯಲ್ಲಿ ಕೆಲಸ ಮಾಡುವ ಕಂಪ್ಯೂಟರ್ ಆಪರೇಟರ್ ರಘುಚಂದ್ರ ಎಂಬುವರು ಮಧ್ಯಾಹ್ನ ಠಾಣೆ ಒಳಗೆ ಬರುತ್ತಿದ್ದಂತೆ ಕಂಪ್ಯೂಟರ್ ರೂಮ್ ಪಕ್ಕದ ಕೋಣೆಯಲ್ಲಿ ಕಾಣಿಸಿ ಕೊಂಡಿದೆ. ತಕ್ಷಣ ಮೇಲಧಿಕಾರಿಗಳಿಗೆ ವಿಷಯ ಮುಟ್ಟಿಸಿದರು. ಮೇಲಧಿಕಾರಿಗಳು ಉರಗ ತಜ್ಞ
ಕಿರಣ್ಗೆ ಫೋನ್ ಮಾಡಿ ಕರೆಸಿದರು. ಸ್ನೇಕ್ ಕಿರಣ್ ಆಗಮಿಸಿ ಹಾವನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟರು.
ಪೂರ್ವ ಟ್ರಾಫಿಕ್ ಪೊಲೀಸ್ ಠಾಣೆಯು ಸಂಪೂರ್ಣ ಶಿಥಿಲಗೊಂಡಿದ್ದು ಕ್ರಿಮಿಕೀಟ, ವಿಷಜಂತುಗಳ ಕಾಟ ನಿರಂತರವಾಗಿದೆ ಎನ್ನುತ್ತಾರೆ ಅಲ್ಲಿನ ಸಿಬ್ಬಂದಿ. ಈ ಹಿಂದೆ ಎರಡು ಮೂರು ಬಾರಿ ಹಾವು ಕಾಣಿಸಿಕೊಂಡಿದೆ. ಠಾಣೆಯೊಳಗೆ ಕಪ್ಪೆಗಳ ಪ್ರವೇಶ ಸಾಮಾನ್ಯವಾಗಿದ್ದು ಕಪ್ಪೆ ವಾಸನೆ ಹಿಡಿದು ಹಾವು ಬಂದಿರಬಹುದು ಎಂದು ಶಂಕಿಸಲಾಗಿದೆ. ಈ ಕಟ್ಟಡವನ್ನು ಕೆಡವಲು ಈಗಾಗಲೇ ಆದೇಶ ದೊರೆತಿದ್ದು ಪರ್ಯಾಯ ಕಟ್ಟಡಕ್ಕೆ ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ. ಎಂಆರ್ಎಸ್ ಬಳಿಯ ಬಾಡಿಗೆ ಕಟ್ಟಡಕ್ಕೆ ಠಾಣೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ