ರೆಡ್ಡಿಯಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
Team Udayavani, Nov 9, 2018, 6:00 AM IST
ಬೆಂಗಳೂರು: ಬಹುಕೋಟಿ ಮೊತ್ತದ ಡೀಲ್ ಪ್ರಕರಣದ ಆರೋಪ ಹೊತ್ತಿರುವ ಜನಾರ್ದನರೆಡ್ಡಿ ಜತೆ ಅಂತರ ಕಾಯ್ದುಕೊಳ್ಳುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಕೇಂದ್ರದ ನಾಯಕರು ಸೂಚಿಸಿದ್ದಾರೆ. ಅಷ್ಟೇ ಅಲ್ಲದೆ ಶಾಸಕ ಶ್ರೀರಾಮುಲು ಸಹ ಜನಾರ್ದನರೆಡ್ಡಿ ವಿಚಾರದಲ್ಲಿ ತೀರಾ ಬಹಿರಂಗವಾಗಿ ಕಾಣಿಸಿಕೊಳ್ಳುವುದು ಬೇಡ ಎಂದು ತಾಕೀತು ಮಾಡಿದ್ದಾರೆಂದು ಮೂಲಗಳು ತಿಳಿಸಿವೆ.
ಜನಾರ್ದನರೆಡ್ಡಿ ಬಹಿರಂಗವಾಗಿ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರಿಂದ ವಿಧಾನಸಭೆ ಚುನಾವಣೆಯಲ್ಲೂ ಹಿನ್ನಡೆಯಾಯಿತು. ಲೋಕಸಭೆ ಉಪ ಚುನಾವಣೆ ಸಂದರ್ಭದಲ್ಲೂ ಸಿದ್ದರಾಮಯ್ಯ ಅವರ ಪುತ್ರನ ಕುರಿತ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರ ಉಂಟಾಗಿ ಕ್ಷಮೆ ಕೇಳುವ ಸ್ಥಿತಿ ನಿರ್ಮಾಣವಾಯಿತು. ಈಗ ಅವರ ವಿರುದ್ಧ ಮತ್ತೂಂದು ಗಂಭೀರ ಆರೋಪ ಕೇಳಿ ಬಂದಿದೆ. ಪಕ್ಷದ ನಾಯಕರು ಅವರ ಪರ ನಿಂತರೆ ಬೇರೆ ರೀತಿಯ ಸಂದೇಶ ರವಾನೆಯಾಗಬಹುದೆಂದು ರಾಜ್ಯದ ನಾಯಕರೊಬ್ಬರು ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರಿಗೆ ಮಾಹಿತಿ ರವಾನಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯದ ನಾಯಕರಿಗೆ ಅಂತರ ಕಾಯ್ದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ಯಾರೂ ಸದ್ಯಕ್ಕೆ ಜನಾರ್ದನರೆಡ್ಡಿ ಪರ ಮಾತನಾಡುವುದು ಬೇಡ. ಪ್ರಕರಣ ತೀವ್ರತೆ ಹಾಗೂ ಮುಂದಿನ ವಿದ್ಯಮಾನ ನೋಡಿ ನಂತರ ಪ್ರತಿಕ್ರಿಯೆ ನೀಡಿ. ತಕ್ಷಣಕ್ಕೆ ಯಾರೂ ಬಹಿರಂಗವಾಗಿ ಏನೂ ಮಾತನಾಡಬಾರದು ಎಂದು ನಿರ್ದೇಶನ
ನೀಡಿದ್ದಾರೆ ಎಂದು ಹೇಳಲಾಗಿದೆ.
ಜನಾರ್ದನರೆಡ್ಡಿ ವಿರುದ್ಧದ ಆರೋಪ ಪ್ರಕರಣದ ಬಗ್ಗೆ ನನಗೆ ಮಾಹಿತಿಯಿಲ್ಲ. ವಂಚನೆ ಮಾಡಿದ ಕಂಪನಿ ವಿರುದಟಛಿದ ತನಿಖೆ ನಡೆಯುತ್ತಿದೆ. ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ತನಿಖೆಯಿಂದ ಸತ್ಯಾಂಶ ಹೊರ ಬರಲಿದೆ.
● ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ