ಹಾರು ಬೂದಿ ಹೊಂಡಕ್ಕಾಗಿ 100 ಎಕರೆ ಭೂ ಸ್ವಾಧೀನ? 


Team Udayavani, Nov 9, 2018, 6:28 AM IST

47.jpg

ರಾಯಚೂರು: ಸಮೀಪದ ಯರಮರಸ್‌ ಸೂಪರ್‌ ಕ್ರಿಟಿಕಲ್‌ ಥರ್ಮಲ್‌ ಪವರ್‌ ಸ್ಟೇಶನ್‌ಗೆ (ವೈಟಿಪಿಎಸ್‌) ಪ್ರತ್ಯೇಕ ಹಾರುಬೂದಿ ಹೊಂಡ ನಿರ್ಮಿಸಲು 100 ಎಕರೆ ಭೂ ಸ್ವಾಧೀನಕ್ಕೆ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ. 1,600 ಮೆಗಾವ್ಯಾಟ್‌ ಸಾಮರ್ಥ್ಯದ ಈ ಕೇಂದ್ರದಲ್ಲಿ ಈಗ ಕೇವಲ ಒಂದು ಘಟಕ ಮಾತ್ರ ಕಾರ್ಯ ನಿರ್ವಹಿಸುತ್ತಿದೆ. ಅಗತ್ಯನುಸಾರ ಮಾತ್ರ ವಿದ್ಯುತ್‌ ಉತ್ಪಾದಿಸುತ್ತಿದ್ದು, ಹಾರುಬೂದಿ ಅಷ್ಟಾಗಿ ಉತ್ಪಾದನೆ ಆಗುತ್ತಿಲ್ಲ. ಆದರೆ, ಪೂರ್ಣ ಪ್ರಮಾಣದಲ್ಲಿ ವಿದ್ಯುತ್‌ ಉತ್ಪಾದನೆ ಮಾಡಿದ್ದೇ ಆದಲ್ಲಿ ಬೂದಿ
ವಿಲೇವಾರಿಗೆ ಪ್ರತ್ಯೇಕ ಹೊಂಡ ಬೇಕೇ ಬೇಕು. ಈ ಸಮಸ್ಯೆ ಅರಿತ ಅಧಿಕಾರಿಗಳು ವಡೂರು, ಏಗನೂರು, ಸಂಕನೂರು ಸೇರಿ ವಿವಿಧ ಭಾಗಗಳ ರೈತರೊಂದಿಗೆ ಮಾತುಕತೆ ನಡೆಸಿದ್ದು, 100 ಎಕರೆ ಜಮೀನು ನೀಡಲು ರೈತರೊಂದಿಗೆ ಒಪ್ಪಿಗೆ ಪಡೆದಿರುವ ವಿಚಾರ ಗೊತ್ತಾಗಿದೆ. ಆದರೆ, ಈ ಬಾರಿ ಸರ್ಕಾರ ಮುಂಜಾಗ್ರತೆ ವಹಿಸಿದ್ದು, ಷರತ್ತುಗಳ ಆಧಾರದಡಿ ಭೂಮಿ ಖರೀದಿಗೆ ಚಿಂತನೆ ನಡೆಸಿದೆ. ಈಗಾಗಲೇ ಸುಮಾರು 1,130 ಎಕರೆಗೂ ಅ ಧಿಕ ಪ್ರದೇಶವನ್ನು ಸ್ವಾಧೀನ ಪಡಿಸಿಕೊಂಡು ಘಟಕ ಸ್ಥಾಪಿಸಿರುವ ಸರ್ಕಾರ ಎಕರೆಗೆ ಇಂತಿಷ್ಟು ಎಂದು ಪರಿಹಾರ ನೀಡಿತ್ತು. ಅದರ ಜತೆಗೆ ಕುಟುಂಬಕ್ಕೆ ಒಂದು ಉದ್ಯೋಗ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ಕುಟುಂಬಗಳು ಬೇರೆಯಾದರೂ ಜಮೀನಿನ ಪಹಣಿಯಲ್ಲಿ ಒಂದೇ ಹೆಸರಿದೆ ಎಂಬ ಕಾರಣಕ್ಕೆ ಸಾಕಷ್ಟು ಜನರಿಗೆ ಉದ್ಯೋಗ ಸಿಕ್ಕಿರಲಿಲ್ಲ. ಹೀಗಾಗಿ ಎಲ್ಲರಿಗೂ ಉದ್ಯೋಗ ನೀಡಬೇಕೆಂಬ ಬೇಡಿಕೆಯೊಂದಿಗೆ ಇಂದಿಗೂ ಹೋರಾಟಗಳು ನಡೆಯುತ್ತಲೇ ಇವೆ.
ಇದರಿಂದ ಎಚ್ಚೆತ್ತುಕೊಂಡ ಕೆಪಿಸಿ, ಈ ಬಾರಿ ಜಮೀನು ನೀಡಿದವರಿಗೆ ಪರಿಹಾರ ಮಾತ್ರ ನೀಡಲಿದ್ದು, ಉದ್ಯೋಗ ನೀಡುವುದಿಲ್ಲ ಎಂಬ ಷರತ್ತು ಹಾಕಿದೆ ಎಂದು ತಿಳಿದು ಬಂದಿದೆ.

ಆರ್‌ಟಿಪಿಎಸ್‌ಗೆ ರವಾನೆ: ಒಂದು ಮೆಟ್ರಿಕ್‌ ಟನ್‌ ಕಲ್ಲಿದ್ದಲು ಉರಿದರೆ ಅದರಲ್ಲಿ ಶೇ.30ರಷ್ಟು ಹಾರುಬೂದಿ, ಶೇ.30ರಷ್ಟು ಒದ್ದೆಬೂದಿ ಉತ್ಪಾದನೆ ಆಗಲಿದೆ. ಇದರಿಂದ ನಿತ್ಯ ಸಾವಿರಾರು ಟನ್‌ ಹಾರುಬೂದಿ ಉತ್ಪಾದನೆ ಆಗುತ್ತಿದೆ. ಆದರೆ, ವೈಟಿಪಿಎಸ್‌ನಲ್ಲಿ ಹಾರುಬೂದಿ ಹೊಂಡ ನಿರ್ಮಿಸದ ಕಾರಣ ಆರ್‌ಟಿಪಿಎಸ್‌ 2ನೇ ಹೊಂಡದಲ್ಲಿಯೇ ವಿಲೇವಾರಿ ಮಾಡಲಾಗುತ್ತಿದೆ. ವೈಟಪಿಎಸ್‌ನ
ಎರಡು ಘಟಕಗಳಿಂದ ಆರು ಪೈಪ್‌ಗ್ಳ ಮೂಲಕ ಒದ್ದೆಬೂದಿ ಪೂರೈಸಲಾಗುತ್ತಿದೆ. ಆದರೆ, ಎರಡೂ ಘಟಕಗಳು ಕಾರ್ಯಾರಂಭ ಮಾಡಿದರೆ ಸಾಕಷ್ಟು ಪ್ರಮಾಣದಲ್ಲಿ ಹಾರುಬೂದಿ ಉತ್ಪಾದನೆ ಆಗುವುದರಿಂದ ಪ್ರತ್ಯೇಕ ಹೊಂಡ ನಿರ್ಮಾಣ ಮಾಡುವುದು ಅನಿವಾರ್ಯವಾಗಲಿದೆ.

ಹಾರುಬೂದಿಗೆ ಬೇಡಿಕೆ: ಹಾರುಬೂದಿಗೂ ಸಾಕಷ್ಟು ಬೇಡಿಕೆ ಇದೆ. ಕೆಲ ಸಿಮೆಂಟ್‌ ಕಂಪನಿಗಳು ಖರೀದಿಸುತ್ತವೆ. ಅಲ್ಲದೇ, ಸ್ಥಳೀಯವಾಗಿ 100 ಕಿ. ಮೀ. ವ್ಯಾಪ್ತಿಯಲ್ಲಿ ರಿಯಾಯಿತಿ ದರದಲ್ಲಿ ನೀಡಬೇಕೆಂಬ ನಿಯಮವೂ ಇದೆ. ಈಗಾಗಲೇ ಒಂಭತ್ತು ಕಂಪನಿಗಳು ಹಾರುಬೂದಿ ಖರೀದಿಗೆ ಮುಂದಾಗಿದ್ದು, ಅದರಲ್ಲಿ ಏಳು ಈಗಾಗಲೇ ತುಂಬಿವೆ. ಒದ್ದೆ ಬೂದಿಯನ್ನು ವಿವಿಧ ಅಭಿವೃದಿಟಛಿ
ಕೆಲಸಗಳಿಗೆ ಬಳಸಬಹುದಾಗಿದ್ದು, ಆ ಬಗ್ಗೆಯೂ ಚಿಂತನೆ ನಡೆಯುತ್ತಿದೆ ಎನ್ನುತ್ತಾರೆ ಅಧಿಕಾರಿಗಳು. ಈಗಾಗಲೇ 100 ಎಕರೆ ಭೂ ಸ್ವಾಧೀನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗ ವೈಟಿಪಿಎಸ್‌ 2ನೇ ಘಟಕ ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು, ಬೂದಿಯನ್ನು
ಆರ್‌ಟಿಪಿಎಸ್‌ ಹೊಂಡಕ್ಕೆ ಬಿಡಲಾಗುತ್ತಿದೆ. ಭವಿಷ್ಯದಲ್ಲಿ ಉತ್ಪಾದನೆ ಹೆಚ್ಚಾದರೆ ಸ್ವಂತ ಹೊಂಡ ಅಗತ್ಯವೆಂಬ ಕಾರಣಕ್ಕೆ ಈ ಕ್ರಮ
ಕೈಗೊಳ್ಳಲಾಗಿದೆ. ಅಗತ್ಯ ಎನಿಸಿದರೆ ಹೆಚ್ಚುವರಿ ಭೂಮಿ ಖರೀದಿ ಮಾಡುವ ಚಿಂತನೆಯಿದೆ.
● ಕೇಶವ ಇ. ನಾಯಕ, ಮುಖ್ಯ ಎಂಜಿನಿಯರ್‌, ವೈಟಿಪಿಎಸ್‌

ಸಿದ್ದಯ್ಯಸ್ವಾಮಿ ಕುಕುನೂರ್

ಟಾಪ್ ನ್ಯೂಸ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.