ಕಿರಿಯ ಆರೋಗ್ಯ ಸಹಾಯಕರಿಗೆ ಕತ್ತಲ ದೀಪಾವಳಿ!


Team Udayavani, Nov 9, 2018, 6:49 AM IST

50.jpg

ಮಂಡ್ಯ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಿರಿಯ ಆರೋಗ್ಯ ಮಹಿಳಾ ಸಹಾಯಕರು, ಕಿರಿಯ ಆರೋಗ್ಯ ಸಹಾಯಕರು ಹಾಗೂ ಇತರೆ ವರ್ಗದ ನೌಕರರಿಗೆ ನಾಲ್ಕು ತಿಂಗಳಿಂದ ಸಂಬಳವಾಗಿಲ್ಲ. ಇದರಿಂದ ದೀಪಾವಳಿ ಹಬ್ಬ ಅವರ ಪಾಲಿಗೆ ಕತ್ತಲು ಕವಿಯುವಂತೆ ಮಾಡಿದೆ. ಇದು ಮಂಡ್ಯ ಜಿಲ್ಲೆಯೊಂದರ ಸಮಸ್ಯೆಯಲ್ಲ. ಇಡೀ ರಾಜ್ಯದಲ್ಲೇ ಕಿರಿಯ ಆರೋಗ್ಯ ಮಹಿಳಾ ಸಹಾಯಕಿ  ಯರು, ಕಿರಿಯ ಆರೋಗ್ಯ ಸಹಾಯಕರು ಸೇರಿ ಇನ್ನಿತರ ವರ್ಗದ ನೌಕರರಿಗೆ ಆಗಸ್ಟ್‌ ತಿಂಗಳಿಂದ ಇಲ್ಲಿಯವರೆಗೆ
ವೇತನ ಪಾವತಿಯಾಗಿಲ್ಲ. ಜಿಲ್ಲೆಯೊಂದರಲ್ಲೇ ಸುಮಾರು 1.25 ಕೋಟಿ ರೂ. ಸಂಬಳವನ್ನು ನೌಕರರಿಗೆ ಪಾವತಿಸಬೇಕಿದೆ.

3 ತಿಂಗಳಿಗೊಮ್ಮೆ ಕೇಂದ್ರ ಬಿಡುಗಡೆ: ಈ ವರ್ಗದ ನೌಕರರಿಗೆ ಕೇಂದ್ರ ಸರ್ಕಾರ ಪ್ರತಿ ಮೂರು ತಿಂಗಳಿಗೊಮ್ಮೆ ವೇತನದ ಕಂತನ್ನು ಬಿಡುಗಡೆ ಮಾಡುತ್ತದೆ. ಅದರ ಖರ್ಚು ವೆಚ್ಚದ ಲೆಕ್ಕ ಶೀರ್ಷಿಕೆ ವಿವರಗಳನ್ನು  ಜಿಲ್ಲಾಮಟ್ಟದ ಅಧಿಕಾರಿಗಳು ಸಕಾಲದಲ್ಲಿ ಸಲ್ಲಿಸಿದರೆ 
ಹಣ ಶೀಘ್ರ ಬಿಡುಗಡೆಯಾಗುತ್ತದೆ. ಆದರೆ, ಲೆಕ್ಕಶೀರ್ಷಿಕೆ ವಿವರಗಳನ್ನು ಸಲ್ಲಿಸುವಲ್ಲಿ ಆಗುತ್ತಿರುವ ವಿಳಂಬವೇ ವೇತನ ಬಿಡುಗಡೆಯಾಗದಿರುವುದಕ್ಕೆ ಮುಖ್ಯ ಕಾರಣ ಎಂಬ ಆರೋಪಗಳು ಕೇಳಿಬರುತ್ತಿವೆ. ಇಡೀ ರಾಜ್ಯದ ಎಲ್ಲಾ ಜಿಲ್ಲೆಗಳು ಏಕಕಾಲಕ್ಕೆ ಲೆಕ್ಕ ಶೀರ್ಷಿಕೆ ವಿವರಗಳನ್ನು ಸಲ್ಲಿಸಬೇಕು. ಒಂದು ಜಿಲ್ಲೆಯವರು ತಡವಾಗಿ ಸಲ್ಲಿಸಿದರೂ ಇಡೀ ರಾಜ್ಯದ ಕಿರಿಯ ಆರೋಗ್ಯ ಮಹಿಳಾ ಸಹಾಯಕಿಯರು, ಕಿರಿಯ ಆರೋಗ್ಯ ಸಹಾಯಕರು ಸೇರಿ ಇತರೆ ವರ್ಗದ ನೌಕರರಿಗೆ ವೇತನ ಜಾರಿಯಾಗುವುದಿಲ್ಲ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಗಳೂ ನಡೆದಿಲ್ಲ.

ವಿಳಂಬ ಪ್ರಕ್ರಿಯೆ: ಈ ಹಿಂದಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಆಗಿದ್ದವರು ವೇತನ ಬಿಡುಗಡೆ ವಿಚಾರವಾಗಿ ಲೆಕ್ಕಶೀರ್ಷಿಕೆ ವಿವರದ ಪ್ರಕ್ರಿಯೆಗಳನ್ನು ನಡೆಸಿರಲಿಲ್ಲವಾದ ಕಾರಣ ವೇತನ ಬಿಡುಗಡೆ ವಿಳಂಬಕ್ಕೆ ಕಾರಣವಾಗಿದೆ. ಈಗ ಆ ಎಲ್ಲಾ
ಪ್ರಕ್ರಿಯೆಗಳನ್ನು ಮುಗಿಸಿ ಬೆಂಗಳೂರಿಗೆ ರವಾನಿಸಲಾಗಿದ್ದು, 2-3 ದಿನದಲ್ಲಿ ವೇತನ ಕಿರಿಯ ಆರೋಗ್ಯ ಮಹಿಳಾ ಸಹಾಯಕಿಯರು ಸೇರಿ ಇತರೆ ವರ್ಗದ ನೌಕರರ ಖಾತೆಗೆ ಜಮಾ ಮಾಡಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ನಾಗರಾಜು
“ಉದಯವಾಣಿ’ಗೆ ತಿಳಿಸಿದರು.

ಹೆಚ್ಚುತ್ತಿರುವ ಕೆಲಸದ ಹೊರೆ: ಕಿರಿಯ ಆರೋಗ್ಯ ಮಹಿಳಾ ಸಹಾಯಕಿಯರು ಹಾಗೂ ಕಿರಿಯ ಆರೋಗ್ಯ ಸಹಾಯಕರನ್ನು ಆರೋಗ್ಯ ಇಲಾಖೆಯ ಆಧಾರ ಸ್ತಂಭಗಳು ಎಂದು ಬಣ್ಣಿಸುತ್ತಾರೆ. ಆದರೆ, ಅವರಿಗೆ ಪ್ರತಿ ತಿಂಗಳು ಸರಿಯಾದ ವೇತನವನ್ನೇ ನೀಡುವುದಿಲ್ಲ. 30
ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಿವೆ. ಅವೆಲ್ಲವನ್ನೂ ಸಮರ್ಪಕವಾಗಿ ಜಾರಿ ಮಾಡಬೇಕಾದ ಹೊಣೆ ನಮ್ಮ ಮೇಲಿದೆ. ಹೊಸ ಆರೋಗ್ಯ ಕಾರ್ಯಕ್ರಮಗಳು ಜಾರಿಯಾದರೂ ಅದರ ಭಾರವೂ ನಮ್ಮ ಮೇಲೆಯೇ ಬೀಳುತ್ತದೆ. ಇಲಾಖೆಯಲ್ಲಿ ನಿಗದಿಪಡಿಸಿದಷ್ಟು
ನೌಕರರಿಲ್ಲ. ಬಹುತೇಕ ಹುದ್ದೆಗಳು ಖಾಲಿ ಇವೆ. ವರ್ಷದಿಂದ ವರ್ಷಕ್ಕೆ ಕೆಲಸದ ಹೊರೆ ಹೆಚ್ಚಾಗುತ್ತಿದೆ. ಇದರ ನಡುವೆಯೂ ಸಂಬಳವನ್ನೂ ಸರಿಯಾಗಿ ನೀಡದಿದ್ದರೆ ಕೆಲಸ ಮಾಡುವುದಾದರೂ ಹೇಗೆ ಎನ್ನುವುದು ಹೆಸರೇಳಲಿಚ್ಚಿಸದ ಕಿರಿಯ ಆರೋಗ್ಯ
ಮಹಿಳಾ ಸಹಾಯಕಿಯರೊಬ್ಬರ ಪ್ರಶ್ನೆ. 

ವೇತನ ವಿಳಂಬವಾಗುತ್ತಿರುವ ಬಗ್ಗೆ ಮೇಲಧಿಕಾರಿಗಳನ್ನು ಕೇಳಿದರೆ ಸರಿಯಾದ ಉತ್ತರವನ್ನೇ ನೀಡುವುದಿಲ್ಲ. ನಿಮ್ಮ ವೇತನವನ್ನು ಕೇಂದ್ರ ಬಿಡುಗಡೆ ಮಾಡಲಿದ್ದು, ಇದು ಅಲ್ಲಿನ ಸಮಸ್ಯೆ. ನಮ್ಮಿಂದ ಯಾವುದೇ ಸಮಸ್ಯೆಯಾಗುತ್ತಿಲ್ಲ. ನಿಮಗೆ ವೇತನ
ಬೇಕೆಂದರೆ ಸಂಘದ ಮೂಲಕ ಹೋರಾಟ ನಡೆಸಿ ಸಕಾಲದಲ್ಲಿ ಬಿಡುಗಡೆಯಾಗುವಂತೆ ಮಾಡಿಸಿಕೊಳ್ಳಿ ಎಂಬ ಹಾರಿಕೆ ಉತ್ತರ ನೀಡುತ್ತಾರೆ. ಇದಕ್ಕೊಂದು ಶಾಶ್ವತ ಪರಿಹಾರವೇ ಸಿಗದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ಹಿಂದಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ವೇತನದ ಲೆಕ್ಕ ಶೀರ್ಷಿಕೆ ವಿವರಗಳನ್ನು ಮುಖ್ಯ ಕಚೇರಿಗೆ
ಸಲ್ಲಿಸಬೇಕಿತ್ತು. ಆ ಪ್ರಕ್ರಿಯೆಗಳನ್ನು ನಡೆಸಿರದ ಕಾರಣ ವೇತನ ಬಿಡುಗಡೆಯಾಗಿರಲಿಲ್ಲ. ನಾನು ಈಗಾಗಲೇ ಆ ಪ್ರಕ್ರಿಯೆಗಳನ್ನು ತ್ವರಿತಗತಿಯಲ್ಲಿ ಪೂರೈಸಿ ವೇತನ ಬಿಡುಗಡೆ ಮಾಡಿಸಿದ್ದೇನೆ. ಮೂರು ದಿನಗಳೊಳಗೆ ನೌಕರರ ಖಾತೆಗೆ ಹಣ ಜಮೆ ಆಗಲಿದೆ.
● ಡಾ.ಕೆ.ನಾಗರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

ಸಕಾಲದಲ್ಲಿ ವೇತನಕ್ಕೆ ಸಂಬಂಧಿಸಿದ ವಿವರಗಳನ್ನು ಜಿಲ್ಲಾಮಟ್ಟದ ಅಧಿಕಾರಿಗಳು ಮುಖ್ಯ ಕಚೇರಿಗೆ ಸಲ್ಲಿಸಬೇಕು. ಸ್ಟಾಫ್ ಕೊರತೆಯಿಂದ ಅದು ಸರಿಯಾಗಿ ನಡೆಯುತ್ತಿಲ್ಲ. ಪಿಎಚ್‌ಸಿಗಳಿಂದಲೂ ಹಲವರನ್ನು ನಿಯೋಜನೆ ಮೇಲೆ ಜಿಲ್ಲಾ ಆರೋಗ್ಯ ಇಲಾಖೆಗೆ ಕರೆಸಿಕೊಳ್ಳ ಲಾಗಿದೆ. ವೇತನ ಬಿಡುಗಡೆಯಲ್ಲಿ ವಿಳಂಬ ಮುಂದುವರಿದರೆ ರಾಜ್ಯಮಟ್ಟದಲ್ಲಿ ಹೋರಾಟ ರೂಪಿಸಲಾಗುವುದು.
● ಎಂ.ಎಸ್‌.ಸೋಮಶೇಖರ್‌, ಅಧ್ಯಕ್ಷರು, ಕಿರಿಯ ಆರೋಗ್ಯ ಸಹಾಯಕರು ಮತ್ತು ಮೇಲ್ವಿಚಾರಕರ ಸಂಘ

ವೇತನ ಬಿಡುಗಡೆ ಹೇಗೆ?
ಈ ವರ್ಗದವರಿಗೆ ಕೇಂದ್ರ ಬಿಡುಗಡೆ ಮಾಡುವ ಹಣ ರಾಜ್ಯ ಆರೋಗ್ಯ ಇಲಾಖೆಗೆ ಬಂದು ನಂತರ ಜಿಪಂಗೆ ಬಿಡುಗಡೆಯಾಗುತ್ತದೆ. ಜಿಲ್ಲಾ ಪಂಚಾಯಿತಿಯವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರಿಗೆ ನೀಡಿ ನಂತರ ಖಜಾನೆ ಸೇರುತ್ತದೆ. ಅಲ್ಲಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಮಹಿಳಾ ಸಹಾಯಕಿ ಯರು, ಕಿರಿಯ ಆರೋಗ್ಯ ಸಹಾಯಕರು ಇತರೆ ನೌಕರರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.