ಟಿಪ್ಪು ಜಯಂತಿ ಶಾಂತಿ ಸಭೆಯಲ್ಲಿ ವಾಗ್ವಾದ 


Team Udayavani, Nov 9, 2018, 7:00 AM IST

52.jpg

ಮಂಡ್ಯ: ಟಿಪ್ಪು ಜಯಂತಿಗೆ ರಾಜ್ಯಮಟ್ಟದಲ್ಲಿ ಬಿಜೆಪಿಯಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ನಗರದಲ್ಲೂ ಇದೇ ವಿಚಾರವಾಗಿ ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಗುರುವಾರ ಕರೆದಿದ್ದ ಶಾಂತಿ ಸಭೆಯಲ್ಲಿ ಅಶಾಂತಿ ಸೃಷ್ಟಿಯಾಯಿತು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಶಿವಪ್ರಕಾಶ್‌ ಅಧ್ಯಕ್ಷತೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರವಾಗಿ ಹಿಂದೂ ಹಾಗೂ ಮುಸ್ಲಿಂ ಪರ ಸಂಘಟನೆಗಳ ಕಾರ್ಯಕರ್ತರಿಂದ ಪರ-ವಿರೋಧ ಚರ್ಚೆಗಳು ನಡೆದವು. ಸಭೆಯಲ್ಲಿದ್ದ ಉಭಯ ಗುಂಪಿನ ಕೆಲವು ಕಾರ್ಯಕರ್ತರು ಮಾತಿನ ಚಕಮಕಿ ನಡೆಸಿದರು. 

ಸಭೆ ಗದ್ದಲದಲ್ಲಿ ಮುಳುಗಿತು. ಶಾಂತಿ ಸಭೆಯಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗಿ ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಸನ್ನಿವೇಶ ಸೃಷ್ಟಿಯಾಯಿತು. ಇದರಿಂದ ಕೋಪಗೊಂಡ ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಿ.ಶಿವಪ್ರಕಾಶ್‌, “ಜಗಳವಾಡುವುದಕ್ಕೋಸ್ಕರ ನಿಮ್ಮನ್ನು ಇಲ್ಲಿಗೆ ಕರೆದಿಲ್ಲ. ಪೊಲೀಸರ ಎದುರು ಜಗಳವಾಡುವ ಉದ್ದೇಶವೇನಾದರೂ ನಿಮಗೆ ಇದ್ದರೆ ಅಂಥವರು
ಮೇಲೆದ್ದು ನಿಲ್ಲಿ, ಎಸ್‌ಪಿ ಕಚೇರಿಗೆ ಬಂದು ಕೂಗಾಡಿದರೆ ಪೊಲೀಸರ ಬೆಲೆ ಏನೆಂದು ತಿಳಿಸಬೇಕಾಗುತ್ತದೆ’ ಎಂದು ಗದ್ದಲ ನಡೆಸುತ್ತಿದ್ದವರಿಗೆ ಖಡಕ್‌ ಎಚ್ಚರಿಕೆ ನೀಡಿದರು. ಸಭೆಯ ನಡುವೆ ಮುಖಂಡ ಮೊಹಮದ್‌ ತಾಹೀರ್‌ ಮಾತನಾಡಿ, ರಾಜ್ಯಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನೀಡಿದೆ. ಶಾಂತಿಯುತವಾಗಿ ಜಯಂತಿ ಆಚರಣೆ ಕುರಿತು ಮಾತಾಡಬೇಕೆ ವಿನಃ ನಿಮ್ಮ ನಿಲುವು ತಿಳಿಸುವ ವೇದಿಕೆಯಲ್ಲ ಎಂದು ಹರಿಹಾಯ್ದರು.

ಈ ಎರಡೂ ಸಂಘಟನೆಗಳ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು. ಇದು ಎರಡೂ ಸಮುದಾಯಗಳ ಮುಖಂಡರ ಕೋಪ ಹೆಚ್ಚಿಸಿ ಗದ್ದಲಕ್ಕೆ ಕಾರಣವಾಯಿತು. ವಾಗ್ವಾದ ನಡೆಸುತ್ತಿದ್ದ ಮುಖಂಡರನ್ನು ಸಮಾಧಾನ ಪಡಿಸಲು ಪೊಲೀಸರು ಮತ್ತು ಸಭೆಯಲ್ಲಿದ್ದ ಕೆಲವರು ತೊಡಗಿದ್ದರೂ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಲಿಲ್ಲ. ಉಭಯ ಸಮುದಾಯದ ಮುಖಂಡರ ವರ್ತನೆ ಕಂಡು
ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಿ.ಶಿವಪ್ರಕಾಶ್‌ ಕೋಪೋದ್ರಿಕ್ತರಾದರು. “ಕೂಗಾಡುವುದಕ್ಕೆ ಇದೇನು ಸಂತೆಯಲ್ಲ. ಶಾಂತಿ ಸಭೆ. ಇಲ್ಲಿ ಪ್ರತಿಯೊಬ್ಬರಿಗೂ ಮಾತನಾಡಲು ಅವಕಾಶವಿದೆ. ಎಲ್ಲರ ಅಭಿಪ್ರಾಯವನ್ನು ಕಲೆ ಹಾಕಲಾಗುತ್ತದೆ. ಕೂಗಾಡುವುದರಿಂದ ಏನೂ
ಪ್ರಯೋಜನವಿಲ್ಲ. ಸಭೆಯಲ್ಲಿರುವವರು ಶಾಂತಿಯುತ ವಾಗಿ ಮಾತನಾಡಿ ಗೌರವದಿಂದ ನಡೆದುಕೊಳ್ಳಬೇಕು. ಸಭೆಗೊಂದು ಅರ್ಥ ನೀಡಬೇಕು. ಅದನ್ನೂ ಮೀರಿ ವರ್ತಿಸಿದರೆ ಅಂಥವರಿಗೆ ಪೊಲೀಸರ ಮೌಲ್ಯ ಏನೆಂದು ತಿಳಿಸಬೇಕಾಗುತ್ತದೆ. ಸಮಾಧಾನದಿಂದ ಮಾತನಾಡಲು ಇಷ್ಟವಿಲ್ಲದವರು ಸಭೆಯಿಂದ ಹೊರ ನಡೆಯಿರಿ ಎಂದು ಖಡಕ್‌ ಸೂಚನೆ ನೀಡಿದರು.

ಕೊಡಗು ಜಿಲ್ಲೆಯಾದ್ಯಂತ ನಿಷೇಧಾಜ್ಞೆ
ಮಡಿಕೇರಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನ.9ರ ಸಂಜೆ 6 ಗಂಟೆಯಿಂದ ನ.11 ಬೆಳಗ್ಗೆ 6 ಗಂಟೆವರೆಗೆ ಕೊಡಗು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ. ನ.8ರ ಮಧ್ಯರಾತ್ರಿ 12 ಗಂಟೆಯಿಂದ ನ. 11ರ ಬೆಳಗ್ಗೆ 8 ಗಂಟೆಯ ವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ನ.10ರಂದು ಟಿಪ್ಪು ಜಯಂತಿ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಹಾಗೂ ಮುಂಜಾಗ್ರತೆ ಕ್ರಮವಾಗಿ ನ.9 ಮತ್ತು 10ರಂದು ಹೋಬಳಿ ಕೇಂದ್ರಗಳಲ್ಲಿ ಕರ್ತವ್ಯ
ನಿರ್ವಹಿಸಲು ವಿಶೇಷ ಕಾರ್ಯ ನಿರ್ವಾಹಕ ದಂಡಾಧಿಕಾರಿಗಳನ್ನು ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.