ಟಿಪ್ಪು ಜಯಂತಿ ಶಾಂತಿ ಸಭೆಯಲ್ಲಿ ವಾಗ್ವಾದ 


Team Udayavani, Nov 9, 2018, 7:00 AM IST

52.jpg

ಮಂಡ್ಯ: ಟಿಪ್ಪು ಜಯಂತಿಗೆ ರಾಜ್ಯಮಟ್ಟದಲ್ಲಿ ಬಿಜೆಪಿಯಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ನಗರದಲ್ಲೂ ಇದೇ ವಿಚಾರವಾಗಿ ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಗುರುವಾರ ಕರೆದಿದ್ದ ಶಾಂತಿ ಸಭೆಯಲ್ಲಿ ಅಶಾಂತಿ ಸೃಷ್ಟಿಯಾಯಿತು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಶಿವಪ್ರಕಾಶ್‌ ಅಧ್ಯಕ್ಷತೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರವಾಗಿ ಹಿಂದೂ ಹಾಗೂ ಮುಸ್ಲಿಂ ಪರ ಸಂಘಟನೆಗಳ ಕಾರ್ಯಕರ್ತರಿಂದ ಪರ-ವಿರೋಧ ಚರ್ಚೆಗಳು ನಡೆದವು. ಸಭೆಯಲ್ಲಿದ್ದ ಉಭಯ ಗುಂಪಿನ ಕೆಲವು ಕಾರ್ಯಕರ್ತರು ಮಾತಿನ ಚಕಮಕಿ ನಡೆಸಿದರು. 

ಸಭೆ ಗದ್ದಲದಲ್ಲಿ ಮುಳುಗಿತು. ಶಾಂತಿ ಸಭೆಯಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗಿ ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಸನ್ನಿವೇಶ ಸೃಷ್ಟಿಯಾಯಿತು. ಇದರಿಂದ ಕೋಪಗೊಂಡ ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಿ.ಶಿವಪ್ರಕಾಶ್‌, “ಜಗಳವಾಡುವುದಕ್ಕೋಸ್ಕರ ನಿಮ್ಮನ್ನು ಇಲ್ಲಿಗೆ ಕರೆದಿಲ್ಲ. ಪೊಲೀಸರ ಎದುರು ಜಗಳವಾಡುವ ಉದ್ದೇಶವೇನಾದರೂ ನಿಮಗೆ ಇದ್ದರೆ ಅಂಥವರು
ಮೇಲೆದ್ದು ನಿಲ್ಲಿ, ಎಸ್‌ಪಿ ಕಚೇರಿಗೆ ಬಂದು ಕೂಗಾಡಿದರೆ ಪೊಲೀಸರ ಬೆಲೆ ಏನೆಂದು ತಿಳಿಸಬೇಕಾಗುತ್ತದೆ’ ಎಂದು ಗದ್ದಲ ನಡೆಸುತ್ತಿದ್ದವರಿಗೆ ಖಡಕ್‌ ಎಚ್ಚರಿಕೆ ನೀಡಿದರು. ಸಭೆಯ ನಡುವೆ ಮುಖಂಡ ಮೊಹಮದ್‌ ತಾಹೀರ್‌ ಮಾತನಾಡಿ, ರಾಜ್ಯಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನೀಡಿದೆ. ಶಾಂತಿಯುತವಾಗಿ ಜಯಂತಿ ಆಚರಣೆ ಕುರಿತು ಮಾತಾಡಬೇಕೆ ವಿನಃ ನಿಮ್ಮ ನಿಲುವು ತಿಳಿಸುವ ವೇದಿಕೆಯಲ್ಲ ಎಂದು ಹರಿಹಾಯ್ದರು.

ಈ ಎರಡೂ ಸಂಘಟನೆಗಳ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು. ಇದು ಎರಡೂ ಸಮುದಾಯಗಳ ಮುಖಂಡರ ಕೋಪ ಹೆಚ್ಚಿಸಿ ಗದ್ದಲಕ್ಕೆ ಕಾರಣವಾಯಿತು. ವಾಗ್ವಾದ ನಡೆಸುತ್ತಿದ್ದ ಮುಖಂಡರನ್ನು ಸಮಾಧಾನ ಪಡಿಸಲು ಪೊಲೀಸರು ಮತ್ತು ಸಭೆಯಲ್ಲಿದ್ದ ಕೆಲವರು ತೊಡಗಿದ್ದರೂ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಲಿಲ್ಲ. ಉಭಯ ಸಮುದಾಯದ ಮುಖಂಡರ ವರ್ತನೆ ಕಂಡು
ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಿ.ಶಿವಪ್ರಕಾಶ್‌ ಕೋಪೋದ್ರಿಕ್ತರಾದರು. “ಕೂಗಾಡುವುದಕ್ಕೆ ಇದೇನು ಸಂತೆಯಲ್ಲ. ಶಾಂತಿ ಸಭೆ. ಇಲ್ಲಿ ಪ್ರತಿಯೊಬ್ಬರಿಗೂ ಮಾತನಾಡಲು ಅವಕಾಶವಿದೆ. ಎಲ್ಲರ ಅಭಿಪ್ರಾಯವನ್ನು ಕಲೆ ಹಾಕಲಾಗುತ್ತದೆ. ಕೂಗಾಡುವುದರಿಂದ ಏನೂ
ಪ್ರಯೋಜನವಿಲ್ಲ. ಸಭೆಯಲ್ಲಿರುವವರು ಶಾಂತಿಯುತ ವಾಗಿ ಮಾತನಾಡಿ ಗೌರವದಿಂದ ನಡೆದುಕೊಳ್ಳಬೇಕು. ಸಭೆಗೊಂದು ಅರ್ಥ ನೀಡಬೇಕು. ಅದನ್ನೂ ಮೀರಿ ವರ್ತಿಸಿದರೆ ಅಂಥವರಿಗೆ ಪೊಲೀಸರ ಮೌಲ್ಯ ಏನೆಂದು ತಿಳಿಸಬೇಕಾಗುತ್ತದೆ. ಸಮಾಧಾನದಿಂದ ಮಾತನಾಡಲು ಇಷ್ಟವಿಲ್ಲದವರು ಸಭೆಯಿಂದ ಹೊರ ನಡೆಯಿರಿ ಎಂದು ಖಡಕ್‌ ಸೂಚನೆ ನೀಡಿದರು.

ಕೊಡಗು ಜಿಲ್ಲೆಯಾದ್ಯಂತ ನಿಷೇಧಾಜ್ಞೆ
ಮಡಿಕೇರಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನ.9ರ ಸಂಜೆ 6 ಗಂಟೆಯಿಂದ ನ.11 ಬೆಳಗ್ಗೆ 6 ಗಂಟೆವರೆಗೆ ಕೊಡಗು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ. ನ.8ರ ಮಧ್ಯರಾತ್ರಿ 12 ಗಂಟೆಯಿಂದ ನ. 11ರ ಬೆಳಗ್ಗೆ 8 ಗಂಟೆಯ ವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ನ.10ರಂದು ಟಿಪ್ಪು ಜಯಂತಿ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಹಾಗೂ ಮುಂಜಾಗ್ರತೆ ಕ್ರಮವಾಗಿ ನ.9 ಮತ್ತು 10ರಂದು ಹೋಬಳಿ ಕೇಂದ್ರಗಳಲ್ಲಿ ಕರ್ತವ್ಯ
ನಿರ್ವಹಿಸಲು ವಿಶೇಷ ಕಾರ್ಯ ನಿರ್ವಾಹಕ ದಂಡಾಧಿಕಾರಿಗಳನ್ನು ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.