ಹಾಸನಾಂಬಾ ಜಾತ್ರೆಗೆ ವಿಧ್ಯುಕ್ತ ತೆರೆ, ಕೀಲಿ ಜಿಲ್ಲಾಡಳಿತ ವಶ; watch
Team Udayavani, Nov 9, 2018, 4:09 PM IST
ಹಾಸನ: ಕಳೆದ 8 ದಿನಗಳಿಂದ ನಡೆದ ಈ ವರ್ಷದ ಹಾಸನಾಂಬಾ ಜಾತ್ರಾ ಮಹೋತ್ಸವಕ್ಕೆ ಶುಕ್ರವಾರ ವಿಧ್ಯುಕ್ತವಾಗಿ ತೆರೆ ಬಿದ್ದಿದೆ.ಪ್ರತಿವರ್ಷ ಅಶ್ವಿàಜ ಮಾಸದ ಹುಣ್ಣಿಮೆಯ ನಂತರ ಬರುವ ಗುರುವಾರ ಹಾಸನಾಂಬ ದೇವಾಲಯದ ಬಾಗಿಲು ತೆರೆದು
ಬಲಿಪಾಡ್ಯಮಿಯ ಮರುದಿನ ಬಾಗಿಲು ಮುಚ್ಚುವ ಸಂಪ್ರದಾಯ ನಡೆದುಕೊಂಡು ಬರುತ್ತಿದ್ದು, ಈ ವರ್ಷ ನ.1ರಂದು ಬಾಗಿಲು ತೆರೆದು ಕಳೆದ 8 ದಿನಗಳ ಕಾಲ ಭಕ್ತರಿಗೆ ದರ್ಶನ ನೀಡಿದ ಹಾಸನಾಂಬೆಯ ಬಾಗಿಲು ನ.9ರಂದು ಮಧ್ಯಾಹ್ನ ಮುಚ್ಚಿದೆ.
ಗುರುವಾರ ರಾತ್ರಿ ಹಾಸನಾಂಬಾ ದೇಗುಲದ ಆವರಣದಿಂದ ಶ್ರೀಸಿದ್ದೇಶ್ವರ ದೇವರ ಉತ್ಸವ ಮೂರ್ತಿಯ ಮೆರವಣಿಗೆ ಆರಂಭವಾಗಿತ್ತು, ಇಡೀ ರಾತ್ರಿ ಹಾಸನದ ಪ್ರಮುಖ ಬೀದಿಗಳಲ್ಲಿ ಉತ್ಸವದ ಮೆರವಣಿಗೆ ನಂತರ ಶುಕ್ರವಾರ ಮುಂಜಾನೆ ಹಾಸನಾಂಬಾ ದೇವಾಲಯದ ಆವರಣ ಸೇರುವರೆಗೂ ಹಾಸನಾಂಬೆಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ಆನಂತರ ಹಾಸನಾಂಬೆಗೆ ಈ ವರ್ಷದ ಕೊನೆಯ ಪೂಜಾ ವಿಧಿವಿಧಾನಗಳು ನಡೆಯಿತು. ಮಧ್ಯಾಹ್ನ ವೇಳೆಗೆ ದೇವಾಲಯದ ಬಾಗಿಲು ಮುಚ್ಚಿ ಜಿಲ್ಲಾಡಳಿತವು ದೇವಾಲಯದ ಬಾಗಿಲ ಕೀಲಿಯನ್ನು ತನ್ನ ವಶಕ್ಕೆ ಪಡೆದಿದೆ.
ವರ್ಷಕ್ಕೊಮ್ಮೆ ಮಾತ್ರ ದೇವಾಲಯದ ಬಾಗಿಲು ತೆರೆದು ದರ್ಶನ ನೀಡುವ ಹಾಸನಾಂಬೆಯ ದರ್ಶನಕ್ಕೆ ಕಳೆದ 8 ದಿನಗಳಲ್ಲಿ ರಾಜ್ಯದ ವಿವಿಧೆಡೆಯಿಂದ ಬಂದಿದ್ದ 2 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಕಳೆದ ವರ್ಷ 11 ದಿನ ಹಾಸನಾಂಬೆಯ ಜಾತ್ರಾ ಮಹೋತ್ಸವ ನಡೆದಿತ್ತು. ಆದರೆ ಈ ವರ್ಷ 9 ದಿನ ಮಾತ್ರ ಜಾತ್ರಾ ಮಹೋತ್ಸವ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್