ಕಂದಾಯ ಇಲಾಖೆಯಲ್ಲಿ ಕಡತ ವಿಲೇವಾರಿ ಸಪ್ತಾಹ
Team Udayavani, Nov 10, 2018, 6:00 AM IST
ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಒಂದು ವರ್ಷದಿಂದ ಇತ್ಯರ್ಥವಾಗದೇ ಉಳಿದಿರುವ ಕಡತಗಳ ವಿಲೇವಾರಿ ಮಾಡುವ ಉದ್ದೇಶದಿಂದ ನವೆಂಬರ್ 12ರಿಂದ 18 ರವರೆಗೆ ಕಡತ ವಿಲೇವಾರಿ ಸಪ್ತಾಹ ಆಚರಿಸಲು ತೀರ್ಮಾನಿಸಲಾಗಿದೆ.
ನಿಗದಿತ ಅವಧಿಯಲ್ಲಿ ವಿಲೇವಾರಿ ಆಗದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಈ ಅವಧಿಯಲ್ಲಿ ಸಾಮಾನ್ಯ ಕಡತಗಳ ಜತೆಗೆ ಸಮಸ್ಯೆ ಇರುವ ಕಡತಗಳನ್ನು ಸಹ ವಿಲೇವಾರಿ ಮಾಡಲಾಗುವುದು. ಕಡತಗಳನ್ನು ಯಾವ ರೀತಿ ವಿಲೇವಾರಿ ಮಾಡಬೇಕೆಂಬ ಬಗ್ಗೆ ಪ್ರಾದೇಶಿಕ ಆಯುಕ್ತರು, ಇಲಾಖಾ ಮುಖ್ಯಸ್ಥರು ಮತ್ತು ಜಿಲ್ಲಾಧಿಕಾರಿಗಳು ತಮ್ಮ ಅಧೀನ ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ಮಾಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಸಪ್ತಾಹದ ಕೊನೆಯ ದಿನವಾದ ನ.18 ರಂದು ಸಂಬಂಧಿಸಿದ ಎಲ್ಲ ಅಧಿಕಾರಿಗಳೂ 7 ದಿನಗಳಲ್ಲಿ ಎಷ್ಟು ಕಡತ ವಿಲೇವಾರಿ ಮಾಡಲಾಗಿದೆ. ನ.12ಕ್ಕೂ ಮುಂಚೆ ಇದ್ದ ಕಡತಗಳ ಸಂಖ್ಯೆ ಹಾಗೂ ಹಾಲಿ ವಿಲೇವಾರಿ ನಂತರ ಉಳಿದಿರುವ ಕಡತಗಳ ಸಂಖ್ಯೆ ಬಗ್ಗೆ ಸಂಪೂರ್ಣ ಮಾಹಿತಿ ಕಡ್ಡಾಯವಾಗಿ “[email protected]ಗೆ ನೀಡಬೇಕು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್