ಡೀಲ್ ಕೇಸ್ ; ಜನಾರ್ದನ ರೆಡ್ಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ
Team Udayavani, Nov 11, 2018, 1:03 PM IST
ಬೆಂಗಳೂರು: ಚಿನ್ನದ ಗಟ್ಟಿ ಪಡೆದ ಆರೋಪ ಹೊತ್ತಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಭಾನುವಾರ ಮಧ್ಯಾಹ್ನ ಸಿಸಿಬಿ ಪೊಲೀಸರು ಬಂಧಿಸಿ ನ್ಯಾಯಾಧೀಶರ ಎದುರು ಹಾಜರು ಪಡಿಸಿದ್ದಾರೆ . ಗಣಿ ಧಣಿಗೆ 14 ದಿನಗಳ ಕಾಲ ನೆವೆಂಬರ್ 24 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ 1 ನೇ ಎಸಿಎಂಎಂ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
ಸಿಸಿಬಿ ಪೊಲೀಸರು ಸುದೀರ್ಘ 20 ಗಂಟೆಯ ಅವಧಿಯ ಒಳಗೆ ವಿಚಾರಣೆ ನಡೆಸಿದ ಬಳಿಕ ಬಂಧಿಸಿದ್ದರು. ರೆಡ್ಡಿ ಅವರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ,ಕೋರಮಂಗಲದಲ್ಲಿ ರುವ ಫ್ಲ್ಯಾಟ್ನಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.
ನ್ಯಾಯಾಂಗ ಬಂಧನ ಹಿನ್ನಲೆಯಲ್ಲಿ ರೆಡ್ಡಿ ಅವರನ್ನು ವ್ಯಾಪಕ ಪೊಲೀಸ್ ಭದ್ರತೆಯೊಂದಿಗೆ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ. ರೆಡ್ಡಿ ಪರ ವಕೀಲರು ನಾಳೆ ಜಾಮೀನಿಗಾಗಿ ಅರ್ಜಿ ಸಲ್ಲಿಸಲಿದ್ದಾರೆ.
ಜಾರಿ ನಿರ್ದೇಶನಾಲಯ ಪ್ರಕರಣದ ತನಿಖೆಯಲ್ಲಿ ಸಹಾಯ ಮಾಡುವುದಾಗಿ ಆ್ಯಂಬಿಡೆಂಟ್ ಕಂಪನಿಯ ಮಾಲೀಕ ಸೈಯದ್ ಅಹಮದ್ ಫರೀದ್ ಬಳಿ 57 ಕೆ.ಜಿ. ಚಿನ್ನದ ಗಟ್ಟಿ ಪಡೆದ ಆರೋಪ ಜನಾರ್ದನ ರೆಡ್ಡಿ ಅವರ ಮೇಲಿದೆ. ಈ ಪ್ರಕರಣದಲ್ಲಿ ಸುಳಿವು ನೀಡದೇ ನಾಪತ್ತೆಯಾಗಿದ್ದ ಗಾಲಿ ಜನಾರ್ದನ ರೆಡ್ಡಿ,ಶನಿವಾರ ತಾವಾಗಿಯೇ ವಕೀಲರೊಂದಿಗೆ ವಿಚಾರಣೆಗೆ ಹಾಜರಾಗಿದ್ದರು.
ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಜನಾರ್ದನ ರೆಡ್ಡಿ ಈಗಾಗಲೇ ಮೂರುವರೆ ವರ್ಷಗಳ ಕಾಲ ಜೈಲು ವಾಸ ಅನುಭವಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…