ಎಂಎಲ್‌ಸಿ, ಸಚಿವ ಸ್ಥಾನ ಒಪ್ಪಿಕೊಳ್ಳಲ್ಲ: ಕಾಗೋಡು


Team Udayavani, Nov 12, 2018, 6:15 AM IST

kagodu-thimmappa-800.jpg

ಸಾಗರ: ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಪರಿಷತ್‌ ಸದಸ್ಯ ಸ್ಥಾನವನ್ನು ನಿರಾಕರಿಸಿದ್ದಾರೆ. 
ಕಾಗೋಡು ತಿಮ್ಮಪ್ಪ ಅವರನ್ನು ಎಂಎಲ್‌ಸಿಯಾಗಿ ನಾಮಕರಣ ಮಾಡಿ ಸಮ್ಮಿಶ್ರ ಸರಕಾರದ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗುವುದು ಎಂದು ಎರಡು ದಿನಗಳ ಹಿಂದೆ ಸಚಿವ ಎಚ್‌.ಡಿ.ರೇವಣ್ಣ ಹೇಳಿದ್ದರು. ಆದರೆ, ಈ ಆಫ‌ರ್‌ನ್ನು ಕಾಗೋಡು ನಿರಾಕರಿಸಿದ್ದಾರೆ.

ಭಾನುವಾರ ಈ ಕುರಿತು ಮಾತನಾಡಿ, “ಈಗಾಗಲೇ ಒಂದು ಸಲ ವಿಧಾನ ಪರಿಷತ್‌ ಸದಸ್ಯನಾಗಿ ಬಹಳ ವ್ಯಥೆ ಪಟ್ಟಿದ್ದೇನೆ. ಹೀಗಾಗಿ ಮತ್ತೂಮ್ಮೆ ಅಂತಹ ಅವಕಾಶ ಬಂದರೆ ಒಪ್ಪಿಕೊಳ್ಳುವ ಮನಸ್ಥಿತಿ ನನಗಿಲ್ಲ. ನನ್ನ ನಂಬಿಕೆ, ಸಿದ್ಧಾಂತಗಳಿಗೆ ವಿರುದ್ಧವಾಗಿ ನಡೆದುಕೊಂಡು ಈ ವಯಸ್ಸಿನಲ್ಲಿ ಪರಿತಪಿಸಲು ನನಗೆ ಇಷ್ಟವಿಲ್ಲ. ಯಾರು ಏನೇ ಹೇಳಿದರೂ ಮತ್ತೂಮ್ಮೆ ನಾನು ನೋವು ಅನುಭವಿಸಲು ಸಿದ್ಧನಿಲ್ಲ’ ಎಂದರು.

ಗುಂಡೂರಾವ್‌ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಾನು ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದೆ. ಆಗ ಬಲವಂತವಾಗಿ ನನ್ನನ್ನು ಎಂಎಲ್‌ಸಿ ಮಾಡಿದ್ದರು. ಲೋಹಿಯಾ ವಾದದಲ್ಲಿ ಬಲವಾದ ನಂಬಿಕೆ ಇದ್ದ ಕಾರಣ ನಾನು ಎಂಎಲ್‌ಸಿ ಆಗುವುದಿಲ್ಲ ಎಂದು ನೇರವಾಗಿ ಗುಂಡೂರಾವ್‌ ಅವರಿಗೆ ತಿಳಿಸಿದ್ದೆ. ಆದರೆ, ಭದ್ರಾವತಿ, ಶಿವಮೊಗ್ಗದ ಕೆಲ ನಾಯಕರು, ಎಫ್‌.ಎಂ.ಖಾನ್‌ ಮುಂತಾದವರು ಸೇರಿ ಒತ್ತಾಯ ಮಾಡಿ ನಾನು ಎಂಎಲ್‌ಸಿ ಆಗುವಂತೆ ಮಾಡಿದ್ದರು. ಸಮಾಜ ಕಲ್ಯಾಣ ಇಲಾಖೆಯ ಮಂತ್ರಿ ಸ್ಥಾನ ಸಹ ನೀಡಿದ್ದರೆಂದು ನೆನಪಿಸಿಕೊಂಡರು.

ಆ ಸಂದರ್ಭ ಅಧಿವೇಶನದಲ್ಲಿ ವಿರೋಧ ಪಕ್ಷದ ಎ.ಕೆ.ಸುಬ್ಬಯ್ಯ ಅವರು “ಹಿಂದಿನ ಬಾಗಿಲಿನಿಂದ ಬಂದವರು’ ಎನ್ನುವ ಮೂಲಕ ನನ್ನನ್ನು ಆಡಿಕೊಂಡರು. ಆಗ ಬಹಳ ಬೇಸರವಾಗಿ ಕಣ್ಣೀರು ಹಾಕಿದ್ದೆ. ಮರಕ ಗೋವಿಂದ ರೆಡ್ಡಿ ಎಂಬುವರು ಎಂಎಲ್‌ಸಿ ಆದ ಕಾರಣಕ್ಕಾಗಿ ಲೋಹಿಯಾ ರೆಡ್ಡಿ ಅವರನ್ನು ಪಕ್ಷದಿಂದ ಹೊರಹಾಕಿದ್ದರು. ನಂತರ ರೆಡ್ಡಿಯವರು ಕಾಂಗ್ರೆಸ್‌ ಸೇರಿಕೊಂಡರು. ಮುಖ್ಯಮಂತ್ರಿ ಕುಮಾರಸ್ವಾಮಿ ಹೇ‚ಳಿದರೆಂದು ಈ ವಯಸ್ಸಿನಲ್ಲಿ ನಾನು ನನ್ನ ತತ್ವ- ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದಿಲ್ಲ. ಈಚೆಗೆ ರೇವಣ್ಣ ಸಹ ಭೇಟಿಯಾಗಿದ್ದು, ನನ್ನನ್ನು ಮಂತ್ರಿಯನ್ನಾಗಿಸುವ ಮಾತುಗಳನ್ನಾಡಿದ್ದಾರೆ. ಆದರೆ ನನಗೆ ಅದು ಇಷ್ಟವಿಲ್ಲ ಎಂದರು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.