ಅಶ್ರುತರ್ಪಣದ ನಡುವೆ ಪಂಚಭೂತಗಳಲ್ಲಿಅನಂತ ಲೀನ


Team Udayavani, Nov 14, 2018, 6:47 AM IST

x-32.jpg

ಬೆಂಗಳೂರು: ಗಣ್ಯಾತಿಗಣ್ಯರ ಕಂಬನಿ, ಕುಟುಂಬ ಸದಸ್ಯರು- ಸಂಬಂಧಿಗಳ ಅಶ್ರುತರ್ಪಣ, ಕಾರ್ಯಕರ್ತರು, ಅಭಿಮಾನಿಗಳ ಜೈಕಾರ, ರಾಜ್ಯ ಸರ್ಕಾರಿ ಹಾಗೂ ಸೇನಾ ಗೌರವಗಳೊಂದಿಗೆ ಕೇಂದ್ರ ಸಚಿವರಾಗಿದ್ದ ಎಚ್‌.ಎನ್‌.ಅನಂತ ಕುಮಾರ್‌ ಅವರ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ ನೆರವೇರಿದ್ದು, ಪಂಚಭೂತಗಳಲ್ಲಿ ಲೀನವಾಗಿ ಅನಂತ ನೆನಪಿಗೆ ಜಾರಿದರು. ನಗರದಲ್ಲಿ ಸೋಮವಾರ ವಿಧಿವಶರಾದ ಅನಂತ ಕುಮಾರ್‌ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಬಿಜೆಪಿ ಕಾರ್ಯಾಲಯದಲ್ಲಿ ಹಾಗೂ ಬಸವನಗುಡಿಯ ನ್ಯಾಷನಲ್‌ ಹೈಸ್ಕೂಲ್‌ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಕೆಲಕಾಲ ಇರಿಸಲಾಗಿತ್ತು. ಬಳಿಕ ಸೇನಾ ಬ್ಯಾಂಡ್‌ನೊಂದಿಗೆ ಸೇನೆ ಹಾಗೂ ಪೊಲೀಸ್‌ ಗೌರವಗಳೊಂದಿಗೆ ಮೆರವಣಿಗೆಯಲ್ಲಿ ಪಾರ್ಥಿವ ಶರೀರವನ್ನು ಚಾಮರಾಜಪೇಟೆಯ ರುದ್ರಭೂಮಿಗೆ ತರಲಾಯಿತು.

ಕೇಂದ್ರ ಸರ್ಕಾರದ ಪರವಾಗಿ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌, ಡಿ.ವಿ.ಸದಾನಂದಗೌಡ ಸೇರಿ ಹಲವು ಸಚಿವರು ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ರಾಜ್ಯ ಸರ್ಕಾರದ ಪರವಾಗಿ ಸಚಿವರಾದ ಡಿ.ಕೆ.ಶಿವಕುಮಾರ್‌, ಸಾ.ರಾ. ಮಹೇಶ್‌, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌ ಅಂತಿಮ ಗೌರವ ಸಲ್ಲಿಸಿದರು. ಅನಂತ ಕುಮಾರ್‌ ಅವರ ರಾಜಕೀಯ ಗುರು ಮಾಜಿ ಉಪಪ್ರಧಾನಿ ಲಾಲ್‌ಕೃಷ್ಣ ಅಡ್ವಾಣಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ .ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌, ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಇತರರು ಅಂತಿಮ ನಮನ ಸಲ್ಲಿಸಿದರು. ವಾಯುಸೇನೆ ಹಾಗೂ ಭೂಸೇನೆಯ ಪ್ರಮುಖರು ಅಂತಿಮ ಗೌರವ ಸಲ್ಲಿಸಿದರು. ಬಳಿಕ ಪಾರ್ಥಿವ ಶರೀರದ ಮೇಲೆ ಹೊದಿಸಲಾಗಿದ್ದ ರಾಷ್ಟ್ರಧ್ವಜವನ್ನು ತೇಜಸ್ವಿನಿ ಅನಂತ ಕುಮಾರ್‌ ಅವರಿಗೆ ಯೋಧರು ಸಲ್ಲಿಸುವ ಮೂಲಕ ಪಾರ್ಥಿವ ಶರೀರವನ್ನು ಅಂತಿಮ ವಿಧಿವಿಧಾನಕ್ಕಾಗಿ ಕುಟುಂಬದವರಿಗೆ ಹಸ್ತಾಂತರಿಸಲಾಯಿತು.

ಸೇನಾ ಪಡೆ ಯೋಧರು 21 ಕುಶಾಲ ತೋಪು ಸಿಡಿಸಿ ಸೇನಾ ಗೌರವ ಅರ್ಪಿಸಿದರು. ನಂತರ ಸಹೋದರ ನಂದ ಕುಮಾರ್‌ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ವೈದಿಕ ವಿಧಿವಿಧಾನದಡಿ ಅನಂತ ಕುಮಾರ್‌ ಅವರ ಪಾರ್ಥಿವ ಶರೀರಕ್ಕೆ ನಂದ ಕುಮಾರ್‌ ಅಗ್ನಿಸ್ಪರ್ಶ ಮಾಡಿದರು. “ಅನಂತ ಕುಮಾರ್‌ ಅಮರ್‌ರಹೇ…’ ಎಂಬ ಜಯಘೋಷ, ಮಂತ್ರಘೋಷಗಳ ನಡುವೆ ಅನಂತ ನೆನಪುಗಳ ಮಧ್ಯೆ ಅನಂತ ಕುಮಾರ್‌ ಪಂಚಭೂತಗಳಲ್ಲಿ ಮರೆಯಾದರು.

ಅಗಲಿಕೆ ನೋವಲ್ಲೂ ಬಿಸಿಯೂಟ ಪೂರೈಕೆ
ಹುಬ್ಬಳ್ಳಿ: ಕೇಂದ್ರ ಸಚಿವ ಅನಂತಕುಮಾರ್‌ ಅಕಾಲಿಕ ನಿಧನದ ನಡುವೆಯೂ ಅವರ ಪ್ರಧಾನ ಪೋಷಕತ್ವದಲ್ಲಿ ನಡೆಯುತ್ತಿರುವ ಅನ್ನಪೂರ್ಣ ಯೋಜನೆಯ ಮೂಲಕ ಮಂಗಳವಾರ ಎಂದಿನಂತೆ ಮಧ್ಯಾಹ್ನದ ಬಿಸಿಯೂಟ ಪೂರೈಸಲಾಗಿದೆ. ಅದಮ್ಯ ಚೇತನ ಫೌಂಡೇಶನ್‌ ಮೂಲಕ ಅನ್ನಪೂರ್ಣ ಯೋಜನೆ ಮೂಲಕ ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಕೆಲ ತಾಲೂಕುಗಳ ಶಾಲೆಗಳಿಗೆ ನಗರದಿಂದ ಮಧ್ಯಾಹ್ನದ ಬಿಸಿಯೂಟ ಪೂರೈಸಲಾಗುತ್ತಿದೆ. ಅನಂತಕುಮಾರ್‌ ಅವರ ಅಗಲಿಕೆಯ ನಡುವೆಯೂ ಎಂದಿನಂತೆ 81 ಸಾವಿರ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ಪೂರೈಸಲಾಗಿದೆ. ನ.12ರಂದು ಅನಂತಕುಮಾರ್‌ ನಿಧನದ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಘೋಷಣೆಯಾಗುವ ಮೊದಲೇ ದೂರದ ಊರುಗಳಿಗೆ ಸರಬರಾಜು ಮಾಡುವ ಆಹಾರ ತಯಾರಿಸಲಾಗಿತ್ತು. ಸರ್ಕಾರ ಶಾಲೆಗಳಿಗೆ ರಜೆ ಘೋಷಿಸಿದ್ದರಿಂದ ತಯಾರಿಸಿದ ಆಹಾರವನ್ನು ನಗರದ ಮಠಗಳಿಗೆ ಪೂರೈಸಲಾಯಿತು ಎಂದು ಯೋಜನೆಯ ಮುಖ್ಯಸ್ಥರೊಬ್ಬರು ತಿಳಿಸಿದ್ದಾರೆ.

ಭಾವುಕರಾದ ಗಣ್ಯರು
ಸದಾ ಹಸನ್ಮುಖೀಯಾಗಿದ್ದ ಕ್ರಿಯಾಶೀಲ ಚೇತನ ನಗುಮೊಗದಿಂದಲೇ ಇಹಲೋಕ ತ್ಯಜಿಸಿದ ನೀಲಿಗಣ್ಣಿನ ಹುಡುಗನನ್ನು ನೆನೆದ ಬಿಜೆಪಿ ಭೀಷ್ಮ ಎಲ್‌.ಕೆ.ಅಡ್ವಾಣಿಯವರು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ತೇಜಸ್ವಿನಿ ಅನಂತಕುಮಾರ್‌ ಅವರ ತಲೆಯನ್ನು ಪ್ರೀತಿಯಿಂದ ನೇವರಿಸಿ, ಕೈಹಿಡಿದು ಸಾಂತ್ವನ ಹೇಳಿದ ದೃಶ್ಯ ಮನಕಲಕುವಂತಿತ್ತು. ಅಮಿತ್‌ ಶಾ ಕೂಡ ಕುಟುಂಬ ಸದಸ್ಯರಿಗೆ ಧೈರ್ಯ ಹೇಳಿದರು. ಬಹುಕಾಲದ ಒಡನಾಡಿ ಯನ್ನು ಕಳೆದುಕೊಂಡ ನೋವಿನಲ್ಲಿ ಬಿ.ಎಸ್‌. ಯಡಿಯೂರಪ್ಪ ಅಂತ್ಯ ಕ್ರಿಯೆ ಸಂದರ್ಭದಲ್ಲಿ ಕಣ್ಣೀರಿಟ್ಟರು. ಕೇಂದ್ರ ಸಚಿವರು, ರಾಜ್ಯ ಬಿಜೆಪಿ ಶಾಸಕರು, ಪಾಲಿಕೆ ಸದಸ್ಯರು ಮಾತ್ರವಲ್ಲದೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂ ರಾವ್‌, ಜೆಡಿಎಸ್‌ ಮುಖಂಡರು, ವಿವಿಧ ಧರ್ಮದ ಮುಖಂಡರು, ಅಪಾರ ಬೆಂಬಲಿಗರು, ಕಾರ್ಯ ಕರ್ತರು ಅಶ್ರುತರ್ಪಣದೊಂದಿಗೆ ವಿದಾಯ ಹೇಳಿದರು. ನ್ಯಾಷನಲ್‌ ಹೈಸ್ಕೂಲ್‌ ಮೈದಾನಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ರಾಜ್ಯಪಾಲ ವಜುಭಾಯಿ ವಾಲಾ ಅವರು ಅಂತಿಮ ದರ್ಶನ ಪಡೆದರು. ಬಳಿಕ ಕೇಂದ್ರ ಸಚಿವರ ಸಮ್ಮುಖದಲ್ಲಿ ಶಾಲಾಮಕ್ಕಳು, ಸಾರ್ವಜನಿಕರು ಸಾಮೂಹಿಕವಾಗಿ ವಂದೇ ಮಾತರಂ ಗೀತೆ ಹಾಡುವ ಮೂಲಕ ಭಾವಪೂರ್ವವಾಗಿ ಅಂತಿಮ ಯಾತ್ರೆಗೆ ಬೀಳೊಟ್ಟರು.

ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಪ್ರಮುಖರು
ಕೇಂದ್ರ ಸಚಿವರಾದ ರವಿಶಂಕರ್‌ ಪ್ರಸಾದ್‌, ಹರ್ಷವರ್ಧನ್‌, ಧರ್ಮೇಂದ್ರ ಪ್ರಧಾನ್‌, ಪಿಯೂಶ್‌ ಗೋಯೆಲ್‌, ರಾಮದಾಸ್‌ ಅಠಾವಳೆ, ರಾಮಲಾಲ್‌, ಆರ್‌ಎಸ್‌ಎಸ್‌ ಸಹಕಾರ್ಯವಾಹ ಭಯ್ನಾಜಿ ಜೋಷಿ, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ
ಇತರರು ಪಾರ್ಥಿವ ಶರೀರಕ್ಕೆ ಹೂಗುತ್ಛವಿರಿಸಿ ಅಂತಿಮ ನಮನ ಸಲ್ಲಿಸಿದರು. 

ನ. 15ರಂದು ಶ್ರದ್ಧಾಂಜಲಿ ಸಭೆ
ಅನಂತ ಕುಮಾರ್‌ ಅವರಿಗೆ ಶ್ರದ್ಧಾಂಜಲಿ ಸಭೆ ನ.15ರಂದು ಬಸವನಗುಡಿಯ ನ್ಯಾಷನಲ್‌ ಹೈಸ್ಕೂಲ್‌ ಮೈದಾನದಲ್ಲಿ ನಡೆಯಲಿದೆ. ನಾನಾ ಗಣ್ಯರು, ಪ್ರಮುಖರು ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.