ಗೆಳೆತನಕ್ಕೆ ಪಕ್ಷಬೇಧವಿಲ್ಲ


Team Udayavani, Nov 13, 2018, 6:40 AM IST

ban13111802.jpg

ಬಿಜೆಪಿ ಅಷ್ಟೇ ಅಲ್ಲದೆ ಅನಂತಕುಮಾರ್‌ ಕಾಂಗ್ರೆಸ್‌ ಸೇರಿದಂತೆ ಇತರೆ ಪಕ್ಷಗಳ ಪ್ರಮುಖ ನಾಯಕರ ಜತೆಯೂ ಉತ್ತಮ ಸಂಬಂಧ ಹೊಂದಿದ್ದರು. ಜನತಾಪರಿವಾರದ ರಾಮಕೃಷ್ಣ ಹೆಗಡೆ, ಎಸ್‌.ಆರ್‌. ಬೊಮ್ಮಾಯಿ, ಜೆ.ಎಚ್‌.ಪಟೇಲ್‌, ಎಚ್‌.ಡಿ.ದೇವೇಗೌಡ, ಸಿದ್ದರಾಮಯ್ಯ, ಎಸ್‌.ಎಂ. ಕೃಷ್ಣ, ಧರಂಸಿಂಗ್‌, ಬಂಗಾರಪ್ಪ, ಜಾಫ‌ರ್‌ ಷರೀಫ್ ಅವರೊಂದಿಗೆ ಉತ್ತಮ ಬಾಂಧವ್ಯ ಇತ್ತು.

ನರೇಂದ್ರಮೋದಿ ಅವರು ರಾಜ್ಯ ಪ್ರವಾಸಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ವಿಮಾನ ನಿಲ್ದಾಣದಲ್ಲಿ ಒಮ್ಮೆ, ರೀ ಅನಂತಕುಮಾರ್‌ ನಾವೇ ಗೆಲ್ಲೋದು.

ಪ್ರಧಾನಿಯವರಿಗೆ ಏನೇನೋ ಹೇಳಿಕೊಡಬೇಡಪ್ಪಾ ಎಂದು ತಮಾಷೆ ಮಾಡಿದ್ದರು. ಹೀಗೆ ಎಲ್ಲ ರಾಜಕಾರಣಿಗಳ ಜತೆ ವೈಯಕ್ತಿಕವಾಗಿ ಉತ್ತಮ ಗೆಳೆತನ ಹೊಂದಿದ್ದರು. ರಾಜಕೀಯವಾಗಿ ಹೋರಾಟ ಇದ್ದರೂ ವೈಯಕ್ತಿಕ ಸಂಬಂಧ ಹಾಗೂ ರಾಜ್ಯದ ವಿಚಾರಗಳಲ್ಲಿ ಕೇಂದ್ರ ಸರ್ಕಾರದ ಮಧ್ಯಪ್ರವೇಶ ಸಂದರ್ಭಗಳಲ್ಲಿ ಎಂದೂ ಹಿಂದೇಟು ಹಾಕುತ್ತಿರಲಿಲ್ಲ. ಹೀಗಾಗಿ, ರಾಜ್ಯದ ನಾಯಕರಿಗೆ ಅನಂತಕುಮಾರ್‌ ಇಷ್ಟವಾಗುತ್ತಿದ್ದರು.

ಒಮ್ಮೆ ಕಾವೇರಿ ವಿಚಾರದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ವಿಧಾನಸೌಧ-ವಿಕಾಸಸೌಧ ನಡುವಿನ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹಕ್ಕೆ ಕುಳಿತಾಗ ತಕ್ಷಣ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಮಾತನಾಡಿ ಅವರಿಂದ ದೇವೇಗೌಡರಿಗೆ ದೂರವಾಣಿ ಕರೆ ಮಾಡಿಸಿ ಉಪವಾಸ ಸತ್ಯಾಗ್ರಹ ವಾಪಸ್‌ ಪಡೆಯುವಂತೆ ಮಾಡಿದ್ದರು.

ಸುವರ್ಣ ಚತುಷ್ಪಥ ಯೋಜನೆಗೆ ಸೇರ್ಪಡೆ 
ಕೇಂದ್ರ ಸರ್ಕಾರದ ಸುವರ್ಣ ಚತುಷ್ಪಥ ಯೋಜನೆಯಡಿ ಬೆಂಗಳೂರನ್ನು ಸೇರ್ಪಡೆ ಮಾಡುವಲ್ಲಿಯೂ ಅನಂತ ಕುಮಾರ್‌
ಅವರ ಪಾತ್ರ ಮಹತ್ವದ್ದಾಗಿತ್ತು. ಈ ಯೋಜನೆ ವ್ಯಾಪ್ತಿಗೆ ಬೆಂಗಳೂರು ಸೇರಿಸಿದ್ದರ ಫ‌ಲವಾಗಿ ರಾಜಧಾನಿಯೊಂದಿಗೆ ಇತರ ನಗರಗಳು ಉತ್ತಮ ಸಂಪರ್ಕ ಪಡೆಯಲು ಅನುಕೂಲವಾಯಿತು.

ಹಾಗಾಗಿ ಸರಕು- ಸೇವೆ ಸಾಗಣೆಗೆ ಸೂಕ್ತ ವ್ಯವಸ್ಥೆ ದೊರೆತಂತಾಗಿದ್ದು, ಕೃಷಿ ಸಂಬಂಧಿತ ಉದ್ಯಮಗಳು ಸೇರಿದಂತೆ ಇತರೆ ವ್ಯವಹಾರಕ್ಕೆ ಕರ್ನಾಟಕದ ಇತರೆ ಭಾಗ ಸೇರಿದಂತೆ ದೇಶಾದ್ಯಂತ ವಿತರಣೆ ಗೊಳ್ಳಲು ಸಹಾಯಕವಾಗಲಿವೆ.

ವಾಂಬೆ ಆವಾಸ್‌ ಯೋಜನಾ
ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದ ಅನಂತ ಕುಮಾರ್‌ ಅವರು ಆರ್ಥಿಕವಾಗಿ ಹಿಂದುಳಿದ ಹಾಗೂ ವಸತಿ ಹೀನರಿಗೆ ಶಾಶ್ವತ ಸೂರು ಕಲ್ಪಿಸಿಕೊಡುವಲ್ಲಿಯೂ ಸಾಕಷ್ಟು ಕೊಡುಗೆ ನೀಡಿದ್ದಾರೆ. ಮುಖ್ಯವಾಗಿ ನಗರ ಪ್ರದೇಶದ ಬಡವರಿಗೆ ಸೂರು ಕಲ್ಪಿಸಲು “ವಾಂಬೆ’ (ವಾಲ್ಮೀಕಿ- ಅಂಬೇಡ್ಕರ್‌ ಆವಾಸ್‌ ಯೋಜನೆ) ಜಾರಿಗೊಳಿಸಿದ್ದರು. ಈ ಯೋಜನೆಯಡಿ ಬೆಂಗಳೂರಿನಲ್ಲೂ ಸಾಕಷ್ಟು ಬಡವರು ಸೂರು ಪಡೆಯುವಂತಾಯಿತು. ಜತೆಗೆ ನಗರದ ಸ್ವತ್ಛತೆಗೆ ಆದ್ಯತೆ ಹಾಗೂ ಬಡಜನತೆಗೆ ಸೂರು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದನ್ನು ಇಂದಿಗೂ ನಗರದ ಹಲವು ಭಾಗದ ಬಡವರು ಸ್ಮರಿಸುತ್ತಾರೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.