ತಾಯಿ ಸಾಲಕ್ಕೆ ಅಪ್ರಾಪ್ತೆಗೆ ತಾಳಿ


Team Udayavani, Nov 14, 2018, 6:36 AM IST

x-31.jpg

ಬೆಂಗಳೂರು: ವಿಧವೆ ಮಹಿಳೆ ಜೀವನ ನಿರ್ವಹಣೆಗೆ ಮಾಡಿದ್ದ ಒಂದೂವರೆ ಲಕ್ಷ ರೂ. ಸಾಲದ ಹಣ ವಾಪಸ್‌ ಕೊಡದ ಅಸಹಾಯಕತೆಯನ್ನು ದುರ್ಬಳಕೆ ಮಾಡಿಕೊಂಡ 53 ವರ್ಷದ ವ್ಯಕ್ತಿ ಆಕೆಯ 13 ವರ್ಷದ ಮಗಳನ್ನೇ ವಿವಾಹವಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ತಾಯಿಯ ಸಾಲದ ಕೂಪಕ್ಕೆ 53 ವರ್ಷದ ವ್ಯಕ್ತಿಗೆ ಕೊರಳೊಡ್ಡಿ ಅರಿಶಿನ ದಾರ ಕಟ್ಟಿಸಿಕೊಂಡಿದ್ದ ಅಪ್ರಾಪ್ತೆಗೆ, ನೆರೆಮನೆಯ ಮಹಿಳೆ “ಅರಿಶಿನ ಕೊಂಬು’ ಕಟ್ಟಿಸಿಕೊಳ್ಳುವುದರ ಬಗ್ಗೆ ವಿವರಿಸಿದಾಗಲೇ ತನಗೆ ವಿವಾಹವಾಗಿದೆ ಎಂಬ ಸತ್ಯ ಅರಿವಿಗೆ ಬಂದಿದೆ.

ಮನೆಗೆ ಬರುತ್ತಿದ್ದ ಹಿರಿಯ ವ್ಯಕ್ತಿ ಹಾಗೂ ತಾಯಿಗೆ ಜ್ವರ ಬಂದಿದ್ದಕ್ಕೆ ಮಂತ್ರ ಎಂದು ನಂಬಿಸಿ ಅರಿಶಿನಕೊಂಬು ಕಟ್ಟಿಸಿದ್ದರು ಎಂಬ ವಿಚಾರವನ್ನು ಮಹಿಳೆಯ ಹತ್ತಿರ ಬಾಲಕಿ ಹೇಳಿಕೊಂಡು ಕಣ್ಣೀರಿಟ್ಟಿದ್ದಾಳೆ. ಕೂಡಲೇ, ಆಕೆ ಚೈಲ್ಡ್‌ ಲೈನ್‌ ಇಂಡಿಯಾ ಫೌಂಡೇಶನ್‌ನ ಸಹಾಯವಾಣಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಕೂಡಲೇ ಆಗಮಿಸಿದ ಚೈಲ್ಡ್‌ ಫೌಂಡೇಶನ್‌ ಕೇಂದ್ರದ ಸಿಬ್ಬಂದಿ, ಬಾಲ್ಯ ವಿವಾಹಕ್ಕೆ ಒಳಗಾಗಿದ್ದ ಬಾಲಕಿಯನ್ನು ರಕ್ಷಿಸಿದ್ದು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಬಾಲಕಿಯನ್ನು ಎನ್‌ಜಿಓ ನಡೆಸುತ್ತಿರುವ ಆಶ್ರಯ ಕೇಂದ್ರಕ್ಕೆ ಕಳುಹಿಸಿಕೊಟ್ಟಿದ್ದಾರೆ.

ಮತ್ತೂಂದೆಡೆ 13 ವರ್ಷದ ಬಾಲಕಿಯನ್ನು ವಂಚನೆಯ ಮೂಲಕ ವಿವಾಹ ಮಾಡಿಕೊಂಡ ವ್ಯಕ್ತಿಯ ವಿರುದ್ಧ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ಫೌಂಡೇಷನ್‌ನ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ. 

ಸಾಲದ ಬದಲಿಗೆ ಮಗಳನ್ನೇ ಕೇಳಿದ ಕೀಚಕ!: ರಮಾ (ಬದಲಾಯಿಸಲಾಗಿದೆ) ಅವರ ಪತಿ ಅನಾರೋಗ್ಯದಿಂದ ಹಲವು ವರ್ಷಗಳ ಹಿಂದೆ ತೀರಿಕೊಂಡಿದ್ದರು. ಹೀಗಾಗಿ 13 ವರ್ಷದ ಬಾಲಕಿ ಹಾಗೂ 4 ವರ್ಷದ ಇಬ್ಬರು ಹೆಣ್ಣುಮಕ್ಕಳ ಪೋಷಣೆ ರಮಾ ಅವರ ಹೆಗಲೇರಿತ್ತು. ಗಂಡ ತೀರಿಹೋದ ಬಳಿಕ ಬದುಕಿನ ಬಂಡಿ ದೂಡಲು, ಅವರಿವರ ಮನೆಕೆಲಸ ಮಾಡಿ ರಮಾ ಮನೆ ಬಾಡಿಗೆ, ಮಕ್ಕಳ ಶಿಕ್ಷಣ ಸೇರಿ ಜೀವನ ಸಾಗಿಸುತ್ತಿದ್ದಳು. ಮಕ್ಕಳ ಅನಾರೋಗ್ಯ ಕಾರಣದಿಂದ 53 ವರ್ಷದ ವ್ಯಕ್ತಿ ಸೇರಿ ಪರಿಚಯಸ್ಥರ
ಬಳಿ ಒಂದೂವರೆ ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಒಂದು ಲಕ್ಷ ರೂ.ನಷ್ಟು ಸಾಲ ನೀಡಿದ್ದ ಆ ವ್ಯಕ್ತಿ ಪದೇ ಪದೆ ಹಣ ಹಿಂದಿರುಗಿಸಲು ಕಿರುಕುಳ ನೀಡತೊಡಗಿದ್ದ. ಕೊಡದಿದ್ದರೆ ಮಗಳನ್ನೇ ಮದುವೆ ಮಾಡಿಕೊಡುವಂತೆ ಬೇಡಿಕೆ ಇಟ್ಟಿದ್ದ. ಆತನ ಕಿರುಕುಳಕ್ಕೆ ಬೇಸತ್ತು ಮಹಿಳೆಯೂ ಒಪ್ಪಿದ್ದರಿಂದ, 9ನೇ ತರಗತಿ ಓದುತ್ತಿರುವ ಬಾಲಕಿಗೆ ಆಕೆಯ ಅರಿವಿಗೆ ಬರದಂತೆ ಕೆಲ ತಿಂಗಳ ಹಿಂದೆ ಅರಿಶಿಣ ಕೊಂಬು ಕಟ್ಟಿ ಮದುವೆಯಾಗಿದ್ದ ಎಂದು ವಿಚಾರಣೆ ವೇಳೆ ತಿಳಿದುಬಂದಿದ್ದಾಗಿ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಘಟನೆಯಿಂದ ಆಘಾತಗೊಂಡಿದ್ದ ಸಂತ್ರಸ್ತ ಬಾಲಕಿ ಕೌನ್ಸೆಲಿಂಗ್‌ ಬಳಿಕ ಮೊದಲಿನಂತೆ ಲವಲವಿಕೆಯಿಂದ ಇದ್ದಾಳೆ. ಉನ್ನತ ವಿದ್ಯಾಭ್ಯಾಸ ಮಾಡುವ ಗುರಿ ಹೊಂದಿರುವ ಆಕೆ, ವೈದ್ಯೆ ಅಥವಾ ಇಂಜಿನಿಯರ್‌ ಆಗುವ ಕನಸು ಹೊಂದಿದ್ದಾಳೆ ಎನ್ನುತ್ತಾರೆ ಅಧಿಕಾರಿ.

ಕಳೆದ 6 ತಿಂಗಳಲ್ಲಿ ನಗರದಲ್ಲಿ 31 ಬಾಲ್ಯ ವಿವಾಹ 
ಚೈಲ್ಡ್‌ಲೈನ್‌ ಇಂಡಿಯಾ ಫೌಂಡೇಷನ್‌ನ ಬೆಂಗಳೂರು ನೋಡೆಲ್‌ ಕೇಂದ್ರ ಸಹಾಯವಾಣಿಗೆ ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಹಲವು ದೂರುಗಳು ಬಂದಿದ್ದು, ಇದೇ ವರ್ಷದ ಏಪ್ರಿಲ್‌ನಿಂದ ಸೆಪ್ಟೆಂಬರ್‌ ಅಂತ್ಯದವರೆಗೆ ಮೂವತ್ತೂಂದು ಬಾಲ್ಯ ವಿವಾಹಗಳು ಪ್ರಕರಣಗಳು ಬೆಳಕಿಗೆ ಬಂದಿವೆ.ಕೆ.ಆರ್‌.ಪುರ, ಮಾರತಹಳ್ಳಿ, ಚನ್ನಸಂದ್ರ, ಬಾಗಲೂರು ವ್ಯಾಪ್ತಿಯಲ್ಲಿ ಹೆಚ್ಚು ಬಾಲ್ಯ ವಿವಾಹಗಳು ನಡೆದಿವೆ ಎಂದು ಸಂಸ್ಥೆಯ ನಿರ್ದೇಶಕ ಡಾ.ವಾಸುದೇವ ಶರ್ಮ ಹೇಳುತ್ತಾರೆ.

ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧ. ಬಾಲ್ಯ ವಿವಾಹ ಕಾಯಿದೆ ಸಮರ್ಪಕ ಅನುಷ್ಠಾನಗೊಳಿಸುವುದು, ಪೋಷಕರು ಮಕ್ಕಳಿಗೂ ಹೆಚ್ಚು ಅರಿವು ಮೂಡಿಸುವ ಸಲುವಾಗಿ ಪೊಲೀಸ್‌ ಇಲಾಖೆ ಹಾಗೂ ಸಕ್ಷಮ ಪ್ರಾಧಿಕಾರಗಳು ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ
ಮಾಡಬೇಕು.
 ● ಸಿ.ಎನ್‌ ನಾಗಮಣಿ, ಸಂಯೋಜಕಿ, ಚೈಲ್ಡ್‌ ಲೈನ್‌ ಇಂಡಿಯಾ ಫೌಂಡೇಶನ್‌ ಬೆಂಗಳೂರು ನೋಡಲ್‌ ಕೇಂದ್ರ

●ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.