ಬೇಡಿಕೆ ಈಡೇರಿಕೆಗೆ “ಅತಿಥಿ’ಗಳ ಬೆಳಗಾವಿ ಚಲೋ


Team Udayavani, Nov 15, 2018, 6:00 AM IST

suvarna-vidhana-soudha.jpg

ಕೊಪ್ಪಳ: ರಾಜ್ಯಾದ್ಯಂತ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ 12 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ಸೇವಾ ಭದ್ರತೆಯ ವೇದನೆ ಅರಣ್ಯ ರೋದನವಾಗಿದೆ. ಸರ್ಕಾರದ ನಡೆಗೆ ಬೇಸತ್ತು ಪ್ರಸಕ್ತ ಚಳಿಗಾಲ ಅಧಿವೇಶನದ ವೇಳೆ ಬೆಳಗಾವಿ ಚಲೋ ನಡೆಸಲು ಇವರು ಸಿದ್ಧರಾಗಿದ್ದಾರೆ.

ಹಿಂದಿನ ಯಾವುದೇ ಸರ್ಕಾರಗಳು ಅತಿಥಿ ಉಪನ್ಯಾಸಕರ ನೋವು ಆಲಿಸಿಲ್ಲ. ಸೇವೆ ಕಾಯಂ ಮಾಡಿಕೊಳ್ಳಲು ಕಾನೂನು ತೊಡಕಿದೆ ಎನ್ನುವ ಮಾತು ಹೇಳಿಕೊಂಡೇ ಎಲ್ಲ ಸರ್ಕಾರಗಳೂ ದಿನಗಳನ್ನು ಮುಂದೂಡುತ್ತ ಬಂದಿವೆ. ಸರ್ಕಾರಿ ಕಾಲೇಜುಗಳಲ್ಲಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಉಪನ್ಯಾಸಕರ ಜೀವನವೇ ಅತಂತ್ರವಾಗಿದೆ. ಸರ್ಕಾರವೂ ನೇಮಕಾತಿ ಪ್ರಕ್ರಿಯೆಯನ್ನು ವಿಳಂಬ ಮಾಡುತ್ತಿದೆ. ಇತ್ತ ಸಾವಿರಾರು ಉಪನ್ಯಾಸಕರ ವಯೋಮಿತಿಯೂ ಮುಗಿದು ಹೋಗಿದೆ. ಸರ್ಕಾರದ ಮೇಲೆ ನಂಬಿಕೆಯಿಡುತ್ತಲೇ ನಿರಂತರ ಹೋರಾಟ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಇಂದಿಗೂ ಸೇವಾ ಭದ್ರತೆಯ ಅಭದ್ರತೆ ಕಾಡುತ್ತಿದೆ.

ರಾಜ್ಯದಲ್ಲಿ ನೇಮಕಾತಿ ಹೊಂದಿದ ಉಪನ್ಯಾಸಕರಿಗಿಂತ ಅತಿಥಿ ಉಪನ್ಯಾಸಕರ ಸಂಖ್ಯೆಯೇ ಬಹುಪಾಲಿದೆ. ಅದೆಷ್ಟೋ ಕಾಲೇಜುಗಳಲ್ಲಿ ಇವರ ಸೇವೆ ಹೆಚ್ಚಿದೆ. ವಿದ್ಯಾರ್ಥಿಗಳಿಗೆ ನೀತಿ ಪಾಠ ಹೇಳುವ ನಮಗೆ ಸೇವಾ ಭದ್ರತೆ ಕೊಡಿ ಎಂದು ಅತಿಥಿ ಉಪನ್ಯಾಸಕರು ನಿರಂತರ ಸರ್ಕಾರದ ಮುಂದೆ ಮಂಡಿಯೂರಿ ಬೇಡಿಕೊಳ್ಳುತ್ತಿದ್ದಾರೆ. ಆದರೆ, ಸರ್ಕಾರ ಇವರ ಬೇಡಿಕೆಗೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ.

ಜೆಡಿಎಸ್‌ ಪ್ರಣಾಳಿಕೆಯಲ್ಲಿ ಭರವಸೆ:
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವ ಕುರಿತು ಜೆಡಿಎಸ್‌ ಪ್ರಣಾಳಿಕೆಯಲ್ಲಿ ಎಚ್‌.ಡಿ.ಕುಮಾರಸ್ವಾಮಿ ಅವರೇ ಭರವಸೆ ನೀಡಿದ್ದಾರೆ. ಆದರೆ, ರಾಜ್ಯ ಸರ್ಕಾರ ರಚನೆಯಾಗಿ ಐದು ತಿಂಗಳು ಪೂರೈಸುತ್ತಾ ಬಂದರೂ ಸ್ಪಷ್ಟ ಸಂದೇಶ ಮುಖ್ಯಮಂತ್ರಿ ಅವರಿಂದ ಸಿಗುತ್ತಿಲ್ಲ. ಪ್ರಣಾಳಿಕೆಯಲ್ಲಿ ಹೇಳಿದಂತೆ ನಡೆದುಕೊಳ್ಳಿ ಎಂದು ಉಪನ್ಯಾಸಕರು ಸಿಎಂ ಮುಂದೆ ಗೋಗರೆದಾಗ ಭರವಸೆಯ ಮಾತನ್ನಾಡಿದ್ದಾರೆ. ಆದರೆ, ಇಲಾಖೆಯ ಹಂತದಲ್ಲಿ ಯಾವುದೇ ಸಭೆಗಳು ನಡೆದಿಲ್ಲ. ನಾವು ಹೊರಗಡೆ ಕೂಲಿ ಮಾಡಿದರೆ ತಿಂಗಳಿಗೆ 15 ಸಾವಿರದಷ್ಟು ಹಣ ಸಿಗುತ್ತೆ. ಆದರೆ, ಉಪನ್ಯಾಸಕ ಸ್ಥಾನದ ಹುದ್ದೆ ಅದಕ್ಕಿಂತಲೂ ಕಡೆಯಾಗಿದೆ. ಹೆಸರಿಗಷ್ಟೇ ಗೌರವ, ಆದರೆ ಉಪಜೀವನ ನಡೆಸೋದು ಕಷ್ಟವಾಗಿದೆ ಎನ್ನುತ್ತಿದ್ದಾರೆ ಅತಿಥಿ ಉಪನ್ಯಾಸಕರು.

ಯುಜಿಸಿ ನಿಯಮವೂ ಪಾಲನೆಯಿಲ್ಲ:
ರಾಜ್ಯ ಸರ್ಕಾರ ಯುಜಿಸಿ ನಿಯಮಾವಳಿಯನ್ನೂ ಪಾಲನೆ ಮಾಡುತ್ತಿಲ್ಲ. ಒಂದು ತರಗತಿಗೆ ಸಾವಿರ ರೂ.ವೇತನ ನೀಡಬೇಕು. ಕನಿಷ್ಟ ಒಂದು ತಿಂಗಳಿಗೆ ಅತಿಥಿ ಉಪನ್ಯಾಸಕನಿಗೆ 25 ಸಾವಿರ ರೂ. ವೇತನ ನೀಡಬೇಕೆಂದು ಯುಜಿಸಿ ನಿಯಮವೇ ಹೇಳುತ್ತಿದೆ. ಆದರೆ, ಸರ್ಕಾರ ಎಂಎ, ಎಂಫಿಲ್‌ ಪದವಿ ಪೂರೈಸಿದವರಿಗೆ 11,500 ರೂ.ಹಾಗೂ ಪಿಎಚ್‌ಡಿ, ನೆಟ್‌, ಸ್ಲೆಟ್‌ ಆದವರಿಗೆ 13 ಸಾವಿರ ರೂ.ನೀಡುತ್ತಿದೆ.

ನಾಲ್ಕು ತಿಂಗಳಿಂದ ವೇತನವಿಲ್ಲ
ಅತಿಥಿ ಉಪನ್ಯಾಸಕರನ್ನು ಸರ್ಕಾರ ಸೇವೆಗೆ ತೆಗೆದುಕೊಂಡು ನಾಲ್ಕು ತಿಂಗಳು ಗತಿಸಿವೆ. ಕಳೆದ ನಾಲ್ಕು ತಿಂಗಳಿಂದ ವೇತನ ಪಾವತಿಸಿಲ್ಲ. ಪ್ರಾದೇಶಿಕ ಕಚೇರಿಗಳ ಹಂತದಲ್ಲಿ ಇನ್ನೂ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅನುಮೋದನೆಯೇ ದೊರೆತಿಲ್ಲ ಎನ್ನುವ ಮಾತು ಕೇಳಿ ಬಂದಿದೆ. ವೇತನವಿಲ್ಲದೇ ಉಪನ್ಯಾಸಕರು ಅವರಿವರ ಬಳಿ ಸಾಲ ಮಾಡಿ ಜೀವನ ನಡೆಸುವ ದು:ಸ್ಥಿತಿ ಬಂದೊದಗಿದೆ. ಇದಕ್ಕೆ ಬೇಸತ್ತು ಚಳಿಗಾಲದ ಅ ಧಿವೇಶನದ ವೇಳೆ ಬೆಳಗಾವಿ ಚಲೋ ನಡೆಸಿ ಮೈತ್ರಿ ಸರ್ಕಾರ ಎಚ್ಚರಿಸುವ ಕೆಲಸಕ್ಕೆ ಅಣಿಯಾಗುತ್ತಿದ್ದಾರೆ.

ಹಲವು ವರ್ಷದಿಂದ ನಾವು ಸರ್ಕಾರಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ನಮಗೆ ಸೇವಾ ಭದ್ರತೆ ಕೊಡುತ್ತೇವೆ ಎಂದು ಮೂರೂ ಪಕ್ಷದವರು ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಾರೆ. ಕುಮಾರಸ್ವಾಮಿ ಅವರನ್ನೂ ಭೇಟಿ ಮಾಡಿದ್ದೇವೆ. ಸರ್ಕಾರ ಅಸ್ತಿತ್ವಕ್ಕೆ ಬಂದು 4 ತಿಂಗಳಾಗಿದ್ದರೂ ಭರವಸೆ ಈಡೇರುತ್ತಿಲ್ಲ. ಇದರಿಂದ ಬೇಸತ್ತು ಬೆಳಗಾವಿ ಚಲೋ ನಡೆಸಬೇಕೆಂದಿದ್ದೇವೆ.
– ಡಾ.ಎಚ್‌. ಸೋಮಶೇಖರ ಶಿವಮೊಗ್ಗಿ, ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ.

– ದತ್ತು ಕಮ್ಮಾರ 

ಟಾಪ್ ನ್ಯೂಸ್

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.