ಸುಪ್ರೀಂ ಆದೇಶ ಪ್ರಶ್ನಿಸಿ ಮೇಲ್ಮನವಿಗೆ ಸರ್ಕಾರ ನಿರ್ಧಾರ
Team Udayavani, Nov 15, 2018, 6:00 AM IST
ಬೆಂಗಳೂರು: ಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತು ಗಣಿ ಮತ್ತು ಮುಜರಾಯಿ ಸಚಿವ ರಾಜಶೇಖರ ಪಾಟೀಲ್ ಸಿಎಂ ಕುಮಾರಸ್ವಾಮಿಯೊಂದಿಗೆ ಮಾತುಕತೆ ನಡೆಸಿ
ನಂತರ ಸುದ್ದಿಗಾರರ ಜತೆ ಮಾತನಾಡಿ,ಗೋಕರ್ಣ ದೇವಸ್ಥಾನವನ್ನು ಸರ್ಕಾರದ ಸುಪರ್ದಿಗೆ ಪಡೆಯಲಾಗಿತ್ತು. ಆದರೆ, ಸುಪ್ರೀಂ ಕೋರ್ಟ್ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸುವಂತೆ ಆದೇಶ ನೀಡಿರುವುದರಿಂದ ಮಠಕ್ಕೆ ಹಸ್ತಾಂತರಿಸಲಾಗಿದೆ. ಆದರೆ, ಸರ್ಕಾರ ಸುಪ್ರೀಂ ಕೋರ್ಟ್ನ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದರು.
ಕೆಆರ್ಎಸ್ ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆ ಯನ್ನು ನಿಷೇಧಿಸಲಾಗಿದೆ.ಆದರೆ, ಅಕ್ರಮ ಗಣಿಗಾರಿಕೆ ಕುರಿತು ಮಾಧ್ಯಮ ವರದಿಗಳು ಸರ್ಕಾರದ ಗಮನಕ್ಕೆ ಬಂದಿವೆ. ಈ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ.ವರದಿ ಬಳಿಕ ಕ್ರಮ ಕೈಗೊಳ್ಳಲಾಗುವುದು.
– ರಾಜಶೇಖರ ಪಾಟೀಲ್, ಗಣಿ,
ಮುಜರಾಯಿ ಸಚಿವ