ಪಶ್ಚಿಮವಾಹಿನಿಯಲ್ಲಿ ಅನಂತ್ ಅಸ್ಥಿ ವಿಸರ್ಜನೆ
Team Udayavani, Nov 15, 2018, 6:05 AM IST
ಶ್ರೀರಂಗಪಟ್ಟಣ: ಸೋಮವಾರ ಮೃತಪಟ್ಟ ದಿ.ಅನಂತಕುಮಾರ್ ಅವರ ಚಿತಾಭಸ್ಮವನ್ನು ಕಾವೇರಿ ನದಿ ತೀರದ ಪಶ್ಚಿಮ ವಾಹಿನಿಯಲ್ಲಿ ಬುಧವಾರ ವಿಸರ್ಜನೆ ಮಾಡಲಾಯಿತು.
ಮಧ್ಯಾಹ್ನ 2 ಗಂಟೆ ಸುಮಾರಿಗೆ ಕುಟುಂಬಸ್ಥರು ಹಾಗೂ ಬಿಜೆಪಿ ನಾಯಕರೊಂದಿಗೆ ಪಶ್ಚಿಮವಾಹಿನಿಗೆ ಆಗಮಿಸಿದ ಅನಂತ್ಕುಮಾರ್ ಸಹೋದರ ನಂದಕುಮಾರ್, ಅಸ್ಥಿ ವಿಸರ್ಜನೆ ಕಾರ್ಯ ನಡೆಸಿದರು. ಜ್ಯೋತಿಷಿ ಭಾನುಪ್ರಕಾಶ್ ನೇತೃತ್ವದ ವೈದಿಕರ ತಂಡ ಧಾರ್ಮಿಕ ವಿಧಿ-ವಿಧಾನ ಪೂರೈಸಿತು.
ಸಂಸದ ಪ್ರಹ್ಲಾದ್ ಜೋಶಿ, ಶಾಸಕ ರಾಮದಾಸ್, ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ ಹಾಗೂ ಸ್ಥಳೀಯ ಬಿಜೆಪಿ
ಮುಖಂಡರು ಹಾಜರಿದ್ದರು. ಇದಕ್ಕೂ ಮೊದಲು ಬೆಂಗಳೂರಿನಿಂದ ಶ್ರೀರಂಗಪಟ್ಟಣದವರೆಗೆ ಕಾರಿನಲ್ಲಿ ಚಿತಾಭಸ್ಮ ತರಲಾಯಿತು. ದಾರಿಯುದ್ದಕ್ಕೂ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಮನ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…