ಸಚಿವ ಸ್ಥಾನ ಕೊಟ್ಟರೆ ನಿರ್ವಹಿಸುವೆ: ಅನಿತಾ
Team Udayavani, Nov 16, 2018, 6:15 AM IST
ಬೆಂಗಳೂರು: ತಾನು ಸಚಿವಾಕಾಂಕ್ಷಿಯಲ್ಲ. ಸಚಿವ ಸ್ಥಾನಕ್ಕಾಗಿ ಯಾವುದೇ ಲಾಬಿ ಮಾಡುವುದಿಲ್ಲ. ಆದರೆ, ಸಚಿವ ಸ್ಥಾನ ನೀಡಿದರೆ ಉತ್ತಮ ಕೆಲಸ ಮಾಡುತ್ತೇನೆ ಎಂದು ರಾಮನಗರ ನೂತನ ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.
ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಸಮ್ಮುಖದಲ್ಲಿ ನೂತನ ಶಾಸಕಿಯಾಗಿ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ಅವರು, ತನಗೆ ಸಚಿವ ಸ್ಥಾನ ನೀಡುವಂತೆ ಯಾರನ್ನೂ ಕೇಳುವುದಿಲ್ಲ. ಕೊಟ್ಟರೆ ಉತ್ತಮವಾಗಿ ನಿಭಾಯಿಸುತ್ತೇನೆ ಎಂದರು.
ಮಧ್ಯಾಹ್ನ 3.30 ಕ್ಕೆ ಒಳ್ಳೆಯ ಸಮಯ ಇದೆ ಎಂದು ಜ್ಯೋತಿಷಿಗಳು ಹೇಳಿದ ಹಿನ್ನೆಲೆಯಲ್ಲಿ ಅರ್ಧಗಂಟೆ ಮೊದಲೇ ವಿಧಾನಸಭಾಧ್ಯಕ್ಷರ ಕಚೇರಿಗೆ ಆಗಮಿಸಿದ್ದರೂ, ಪ್ರಮಾಣ ವಚನ ಸ್ವೀಕರಿಸದೇ ಒಳ್ಳೆಯ ಸಮಯಕ್ಕಾಗಿ ಅನಿತಾ ಕುಮಾರಸ್ವಾಮಿ ಕಾದು ಕುಳಿತು, 3.23 ನಿಮಿಷಕ್ಕೆ ಪ್ರಮಾಣ ವಚನ ಸ್ವೀಕರಿಸಿದರು.