ಕಾಡಾನೆ ದಾಳಿಗೆ ಸಾಕಾನೆ ಬಲಿ
Team Udayavani, Nov 16, 2018, 6:45 AM IST
ಕಾರವಾರ: ಕಾಡಾನೆ ದಾಳಿಗೆ ಅರಣ್ಯ ಇಲಾಖೆ ಸಾಕಿದ್ದ ಸಫಾರಿ ಆನೆಯೊಂದು ಮೃತಪಟ್ಟ ಘಟನೆ ಜೋಯಿಡಾ ತಾಲೂಕಿನ ಫಣಸೋಲಿ ಅರಣ್ಯ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಪ್ರವಾಸಿಗರ ಸಫಾರಿಗೆ ಬಳಸುತ್ತಿದ್ದ ಮೂರು ಆನೆಗಳ ಪೈಕಿ ರಾಜೇಶ್ (57) ಮೇಲೆ ಎರಡು ಕಾಡಾನೆಗಳು ಬುಧವಾರ ಮಧ್ಯಾಹ್ನ ದಾಳಿ ಮಾಡಿದ್ದವು.
ಕಾಡಾನೆಗಳ ದಾಳಿಯಿಂದ ಸಾಕಾನೆ ತೀವ್ರ ಗಾಯಗೊಂಡಿತ್ತು. ಶಿವಮೊಗ್ಗದ ಆನೆ ತರಬೇತಿ ಶಿಬಿರ ಸಕ್ರೆಬೈಲ್ನಿಂದ ಪಶು ವೈದ್ಯರು ಬಂದು ಚಿಕಿತ್ಸೆ ನೀಡಿದರಾದರೂ ಫಲಕಾರಿಯಾಗಲಿಲ್ಲ. ತಡರಾತ್ರಿ ರಾಜೇಶ ಕೊನೆಯುಸಿರೆಳೆಯಿತು. ಗುರುವಾರ ಅಂತ್ಯಕ್ರಿಯೆ ನೆರವೇರಿಸಲಾಯಿತು. ಫಣಸೋಲಿ ಅರಣ್ಯ ಭಾಗದಲ್ಲಿ ಆನೆಗಳ ಮಧ್ಯೆ ಸಂಘರ್ಷ ನಡೆದದ್ದು ಇದೇ ಮೊದಲು. ದಶಕಗಳ ಹಿಂದೆ ವಿದ್ಯುತ್ ತಂತಿಗೆ ಸಿಲುಕಿ ಆನೆಯೊಂದು ಪ್ರಾಣ ಬಿಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ