3ನೇ ವೇತನ ಪರಿಷ್ಕರಣೆ: ಶೇ.15 ಫಿಟ್‌ಮೆಂಟ್‌ನೊಂದಿಗೆ ನೀಡಿ


Team Udayavani, Nov 16, 2018, 6:30 AM IST

ban16111806medn.jpg

ಬೆಂಗಳೂರು:ಮೂರನೇ ವೇತನ  ಪರಿಷ್ಕರಣೆಯಲ್ಲಿ ಶೇ  15ರಷ್ಟು ಫಿಟ್‌ಮೆಂಟ್‌ನೊಂದಿಗೆ ಅನುಷ್ಠಾನಗೊಳಿಸುವುದು, 4ಜಿ ಸೇವೆಯನ್ನು ನೀಡುವುದು ಸೇರಿ ಹಲವು ಬೇಡಿಕೆಗಳ ಈಡೇರಿಸುವಂತೆ ಕೇಂದ್ರ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ನೌಕರರ ಒಕ್ಕೂಟಗಳ ಪರವಾಗಿ ಗುರುವಾರ ಕೇಂದ್ರದ ಟೆಲಿಕಾಂ ಖಾತೆ ರಾಜ್ಯ ಸಚಿವ  ಮನೋಜ್‌ ಕುಮಾರ್‌ ಸಿನ್ಹಾರಿಗೆ ಮನವಿ ಪತ್ರ ಸಲ್ಲಿಸಲಾಗಿದೆ.

3ನೇ ವೇತನ ಆಯೋಗದಲ್ಲಿ ಶೇ 15ರಷ್ಟು ಫಿಟ್‌ಮೆಂಟ್‌ನ್ನು 2017ರ ಜನವರಿಯಿಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು. 4ಜಿ ಸೇವೆಯನ್ನು ಬಿಎಸ್‌ಎನ್‌ಎಲ್‌ಗೆ ವಿಸ್ತರಿಸಬೇಕು. ಸದ್ಯ ನಿವೃತ್ತಿ ವೇತನ ಲಾಭಾಂಶವನ್ನು ಕೊನೆಯ ಹಂತದ ವೇತನ ಶ್ರೇಣಿಗೆ ಅನುಗುಣವಾಗುವಂತೆ ಕಡಿತಗೊಳಿಸಲಾಗುತ್ತಿದೆ. ಇದನ್ನು ತಕ್ಷಣ ನಿಲ್ಲಿಸಬೇಕು. ಬದಲಿಗೆ ಮೂಲವೇತನಕ್ಕೆ ಅನುಗುಣವಾಗಿಯೇ ನಿವೃತ್ತಿ ವೇತನ ಲಾಭಾಂಶ ಮೊತ್ತವನ್ನು ಕಡಿತಗೊಳಿಸಬೇಕು. ಅಲ್ಲದೆ, 2016ರಿಂದ ಕಡಿತಗೊಳಿಸಿರುವ ನಿವೃತ್ತಿ ವೇತನ ಲಾಭಾಂಶವನ್ನು ವಾಪಾಸ್‌ ನೀಡಬೇಕು.

ಇದಲ್ಲದೆ ನಿವೃತ್ತ ವೇತನ ಪರಿಷ್ಕರಣೆಯೂ ಮಾಡಬೇಕು, ಈ ಲಾಭ ಈಗಾಗಲೇ ನಿವೃತ್ತರಾಗಿರುವ ನೌಕರರಿಗೂ ಅನ್ವಯವಾಗುವಂತೆ ಮಾಡಬೇಕು ಎಂಬುದು ಸೇರಿ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಪತ್ರದಲ್ಲಿ ಕೋರಲಾಗಿದೆ.

ಕೇಂದ್ರದ ವಾದವೇನು?
ಅಫೋರ್‌xಬಲಿಟಿ ಕ್ಲಾಸ್‌ ವ್ಯಾಪ್ತಿಯಲ್ಲಿ ಬಿಎಸ್‌ಎನ್‌ಎಲ್‌ ನೌಕರರು ಬರುತ್ತಾರೆ.ಹೀಗಾಗಿ, ನಿವೃತ್ತಿ ವೇತನ ಪರಿಷ್ಕರಣೆ ನೀಡಲು ಬರುವುದಿಲ್ಲ ಎಂದು ಕೇಂದ್ರಸರ್ಕಾರ ಹೇಳುತ್ತಿದೆ. ಆದರೆ, ಬಿಎಸ್‌ಎನ್‌ಎಲ್‌ ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿದೆ.ಅಫ‌ರ್‌xಬಲಿಟಿ ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂಬುದು ಬಿಎಸ್‌ಎನ್‌ಎಲ್‌ ನೌಕರರು ಹೇಳುತ್ತಿದ್ದಾರೆ.

ಬಿಎಸ್‌ಎನ್‌ಎಲ್‌ಗೆ ಮಲತಾಯಿ ಧೋರಣೆ
3ನೇ ವೇತನ ಪರಿಷ್ಕರಣೆಯನ್ನು ಬಿಎಸ್‌ಎನ್‌ಎಲ್‌ಗೆ ಜಾರಿಗೊಳಿಸಲು ಕೇಂದ್ರ ಸಂವಹನ ಇಲಾಖೆ (ಡಿಓಟಿ) ಹಲವು ಕಾರಣಗಳನ್ನು ಮುಂದಿಟ್ಟಿದೆ. ಬಿಎಸ್‌ಎನ್‌ಎಲ್‌ ನಷ್ಟದಲ್ಲಿದೆ, ಕಳೆದ ಮೂರು ವಾರ್ಷಿಕ ವರ್ಷಗಳಲ್ಲಿ ಲಾಭಾಂಶವಿಲ್ಲ ಎಂದು ತಿಳಿಸುತ್ತಿದೆ. ಆದರೆ, 2017ರಲ್ಲಿ  ಟ್ರಾಯ್‌ ತನ್ನ ವರದಿಯಲ್ಲಿ, ಉಳಿದ ಖಾಸಗಿ ಟೆಲಿಕಾಂ ಸಂಸ್ಥೆಗಳಿಗಿಂತ ಎಜಿಎಆರ್‌ನಲ್ಲಿ ಜೂನ್‌ ವರ್ಷಾಂತ್ಯಕ್ಕೆ ಶೇ 6.8 ರಷ್ಟು ಏರಿಕೆ ಕಂಡಿದೆ ಎಂದು ತಿಳಿಸಿದೆ.

ಅದೇ ರೀತಿ ಡಿಓಟಿ, ಎಂಟಿಎನ್‌ಎಲ್‌ ನೌಕಕರಿಗೆ 2ನೇ ವೇತನ ಪರಿಷ್ಕರಣೆಯನ್ನು ಶೇ 30ರಷ್ಟು ಫಿಟ್‌ಮೆಂಟ್‌ನೊಂದಿಗೆ 2007ರಲ್ಲಿ ಬಗೆಹರಿಸಿದೆ. ಆದರೆ, ವಾಸ್ತವದಲ್ಲಿ ಎಂಟಿಎನ್‌ಎಲ್‌ ವೇತನ ಪರಿಷ್ಕರಣೆಗೆ ಅವಕಾಶ ಇರಲಿಲ್ಲ.ಹೀಗಾಗಿ, ಬಿಎಸ್‌ಎನ್‌ಎಲ್‌ ನೌಕರರ 3ನೇ ವೇತನ ಪರಿಷ್ಕರಣೆಯನ್ನು ಸಚಿವ ಸಂಪುಟ ಸಭೆಯಲ್ಲಿ ಇತ್ಯರ್ಥವಾಗಬೇಕು ಎಂಬುದು ಸರಿಯಿಲ್ಲ ಎಂದು ಒಕ್ಕೂಟ ಆಕ್ಷೇಪಿಸಿದೆ.

4ಜಿ ಖರೀದಿಸಲು ಸಿದ್ಧವಿದೆ
4ಜಿ ಸೇವೆಯನ್ನು ಮಾರುಕಟ್ಟೆ ದರಕ್ಕೆ ಖರೀದಿಸಲು ಬಿಎಸ್‌ಎನ್‌ಎಲ್‌ ಸಿದ್ಧವಿದೆ. ಇದರಲ್ಲಿ ಶೇ 50ರಷ್ಟು ಮೊತ್ತವನ್ನು ಬಿಎಸ್‌ಎನ್‌ಎಲ್‌ ಆಡಳಿತ ಮಂಡಳಿ ಭರಿಸಲಿದ್ದು, ಉಳಿದ ಹಣ ಸರ್ಕಾರ ಭರಿಸಲಿ ಎಂದು ಪ್ರಸ್ತಾವನೆ ಕಳುಹಿಸಿ 8 ತಿಂಗಳು ಕಳೆದಿದೆ. ಆದರೆ, ಇದುವರೆಗೂ ಯಾವುದೇ ಕ್ರಮವಾಗಿಲ್ಲ ಎಂದು ಒಕ್ಕೂಟದ ಸದಸ್ಯರೊಬ್ಬರು ತಿಳಿಸಿದರು.

ಡಿಸೆಂಬರ್‌ 3ರಿಂದ ರಾಷ್ಟ್ರವ್ಯಾಪಿ ಹೋರಾಟ
ಬೇಡಿಕೆಗಳ ಈಡೇರಿಸುವ ಕುರಿತು ಕೇಂದ್ರ ಸಚಿವರು ಸಕಾರಾತ್ಮಕ ಭರವಸೆ ನೀಡಿದ್ದಾರೆ. ಆದರೆ, ಈ ಹಿಂದೆಯೂ ಎರಡು ಬಾರಿ ನೀಡಿದ್ದ ಭರವಸೆಯನ್ನು ಈಡೇರಿಸುವಲ್ಲಿ ಸರ್ಕಾರ ವಿಫ‌ಲವಾಗಿದೆ.ಹೀಗಾಗಿ ಮುಂದಿನ 15ದಿನಗಳಲ್ಲಿ ನಮ್ಮ ಬೇಡಿಕೆಗಳು ಈಡೇರದಿದ್ದರೆ ಡಿ.3ರಿಂದ  ರಾಷ್ಟ್ರವ್ಯಾಪಿ ಬಿಎಸ್‌ಎನ್‌ಎಲ್‌ ನೌಕರರು ಹೋರಾಟ ನಡೆಸಲು ತೀರ್ಮಾನಿಸಲಾಗಿದೆ ಎಂದು ಒಕ್ಕೂಟದ ಸದಸ್ಯರು ತಿಳಿದರು.  ಈ ಎಲ್ಲ ಬೇಡಿಕೆಗಳಿಗೆ ಒತ್ತಾಯಿಸಿ ನೌಕರರು ಹಲವು ದಿನಗಳಿಂದ ಸಾಂಕೇತಿಕ ಹೋರಾಟ ಮಾಡುತ್ತಿದ್ದರು.

“ಕೇಂದ್ರಸರ್ಕಾರ ಖಾಸಗಿ ಟೆಲಿಕಾಂ ಕಂಪೆನಿಗಳಿಗೆ 5ಜಿ ಸೇವೆ ನೀಡಲು ಕ್ರಮ ವಹಿಸಿದೆ. ಇಂಡಿಯಾ ಕಾಂಗ್ರೆಸ್‌ 5ಜಿ ಸೇವೆ ನೀಡುವುದರ ಬಗ್ಗೆ ಪ್ರಸ್ತಾಪಿಸಲಾಗಿದೆ. ಬಿಎಸ್‌ಎನ್‌ಎಲ್‌ನಿಂದ ಸದ್ಯದಲ್ಲಿಯೇ 4ಜಿ ಸೇವೆ ಒದಗಿಸಲಾಗುವುದು”
– ಮನೋಜ್‌ ಕುಮಾರ್‌ ಸಿನ್ಹಾ, ಕೇಂದ್ರ ಟೆಲಿಕಾಂ ರಾಜ್ಯ ಸಚಿವ

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.