ಶಬರಿಮಲೆಗೆ ಮಹಿಳೆಯರ ಪ್ರವೇಶದ ಬಗ್ಗೆ ಋತುಚಕ್ರ ಎಂಬ ಕುತರ್ಕ ಯಾಕೆ?


Team Udayavani, Nov 16, 2018, 3:51 PM IST

mallika-s-ghanti.jpg

ಮೂಡುಬಿದಿರೆ: ಯಾವುದೋ ಕಾಲದಲ್ಲಿ ಹುಟ್ಟಿಕೊಂಡ ನಂಬಿಕೆ ಆಚಾರಗಳು ಎಲ್ಲಾ ಕಾಲಕ್ಕೂ ನಿಯಂತ್ರಕಗಳಾಗಿ ನಿಲ್ಲುವುದರ ಹಿಂದೆ ಬಹುದೊಡ್ಡ ರಾಜಕಾರಣವಿರುತ್ತದೆ. ಅದು ಲಿಂಗರಾಜಕಾರಣವೂ ಹೌದು ಧಾರ್ಮಿಕ ರಾಜಕಾರಣವೂ ಆಗಿರುತ್ತದೆ. ಇದಕ್ಕೆ ಪ್ರಭುತ್ವದ ಸಮ್ಮತಿಯಿರುತ್ತದೆ ಎಂದು ಆಳ್ವಾಸ್ ನುಡಿಸಿರಿಯ ಸಮ್ಮೇಳನಾಧ್ಯಕ್ಷೆ ಡಾ.ಮಲ್ಲಿಕಾ ಎಸ್. ಘಂಟಿ ಹೇಳಿದರು.

ಅವರು ಶುಕ್ರವಾರ ಮೂಡುಬಿದಿರೆ ವಿದ್ಯಾಗಿರಿಯ ಶ್ರೀಮತಿ ಸುಂದರಿ ಆನಂದ ಆಳ್ವ ಆವರಣದಲ್ಲಿ ಆಳ್ವಾಸ್ ನುಡಿಸಿರಿಯ ಉದ್ಘಾಟನಾ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷರಾಗಿ ಮಾತನಾಡಿದರು.

ಎಲ್ಲ ಕಾಲದ ಎಲ್ಲ ಪ್ರಭುತ್ವಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳುವುದಕ್ಕಾಗಿ ನಿರಂತರ ಸಮಾಜದಲ್ಲಿ ಏನಾದರೂ ನಡೆಯುವಂತೆ ಮತ್ತು ಜನರು ಅದರ ಕುರಿತು ಗಮನಕೇಂದ್ರೀಕರಿಸುವಂತೆ ಪಿತೂರಿ ಮಾಡಿರುವುದನ್ನು ಚರಿತ್ರೆಯಲ್ಲಿ ಕಾಣಬಹುದು ಎಂದರು.

ಶಬರಿಮಲೆಗೆ ಮಹಿಳೆಯರ ಪ್ರವೇಶ; ಋತುಚಕ್ರ ಗೌರವಿಸಬೇಕು

ಮಕ್ಕಳು ಮತ್ತು ಋತುಚಕ್ರ ನಿಂತ ಮಹಿಳೆಯರಿಗೆ ಮಾತ್ರ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಪ್ರವೇಶವೆಂಬುದು ಕುತರ್ಕದ್ದು, ಋತುಚಕ್ರದೊಳಗಿನ ಮಹಿಳೆಯರು ದೇವಾಲಯ ಪ್ರವೇಶ ಮಾಡುವುದರಿಂದ ಪಾವಿತ್ರ್ಯತೆ ನಾಶವಾಗುತ್ತದೆ ಎಂದು ಇದನ್ನು ವಿರೋಧಿಸುವವರು ಹೇಳುತ್ತಿರುವ ಮಾತುಗಳಿಗೆ ಯಾವುದೇ ತಾತ್ವಿಕ, ತಾರ್ಕಿಕತೆಯಿಲ್ಲ. ಈ ನೆಲೆಯಲ್ಲಿ 10ರಿಂದ 50ವರ್ಷದವರೆಗಿನ ಮಹಿಳೆಯರಿಗೆ ಪ್ರವೇಶ ಬೇಡ ಎಂದಾದ ಮೇಲೆ ಪುರುಷರು ಈ ವಯೋಮಿತಿಯಲ್ಲಿ ಮಹಿಳೆಯರನ್ನು ಸೇರಬಾರದು ಎಂದು ಅಭಿಪ್ರಾಯವ್ಯಕ್ತಪಡಿಸಿದರು.

ಈ ಪ್ರತಿರೋಧವನ್ನು ತಾತ್ವಿಕವಾಗಿ, ತಾರ್ಕಿಕವಾಗಿ ನಮ್ಮ ಜನಸಮುದಾಯದ ಅರಿವಿನಂತಿದ್ದ ಆಚಾರದಂತಿದ್ದ ತತ್ವಪದಕಾರರು ನೂರಾರು ವರ್ಷಗಳ ಹಿಂದೆಯೇ ಪ್ರಶ್ನಿಸಿದ್ದಾರೆ. ಕಡಕೋಳ ಮಡಿವಾಳಪ್ಪ ಎಂಬ ತತ್ವಪದಕಾರ ಎತ್ತಿರುವ ಮೈಲಿಗೆ ಮುಡಚೆಟ್ಟಿನ ಪ್ರಶ್ನೆ ಈ ಕಾಲದಲ್ಲಿ ಮುನ್ನೆಲೆಗೆ ಬಂದು ಚರ್ಚೆಗೆ ಒಳಗಾಗಿರುವುದು ದುರಂತವೇ ಸರಿ.

ಜಗತ್ತು ವಿಸ್ಮಯಗೊಳ್ಳುವ ಹಾಗೆ ವಿಜ್ಞಾನದ ಬೆಳವಣಿಗೆಯಲ್ಲಿ, ಆವಿಷ್ಕಾರದಲ್ಲಿ ತೊಡಗಿರುವ ದೇಶದಲ್ಲಿ ಉದ್ಭವಿಸಿರುವ ಬಿಕ್ಕಟ್ಟನ್ನು ನೋಡಿದರೆ ನಾವು ನಿಂತ ನೆಲದಲ್ಲಿ ಚಲಿಸಿಯೆ ಇಲ್ಲ ಎನಿಸುತ್ತದೆ. ಮನುಷ್ಯನ ಹುಟ್ಟಿಗೆ ಸಂಬಂಧಿಸಿ ಕಡಕೋಳ ಮಡಿವಾಳಪ್ಪನವರು ಹಾಕುವ ಪ್ರಶ್ನೆ ಇಡೀ ಪ್ರಸಂಗವನ್ನು ಪ್ರಶ್ನಿಸಿರುವಂತಿರುವ ರೀತಿ ಹೀಗಿದೆ…

“ಮುಡಚಟ್ಟಿನೊಳು ಬಂದು ಮುಟ್ಟೀ ತಟ್ಟೀ ಅಂತೀರಿ

ಮುಡಚೆಟ್ಟು ಎಲ್ಲ್ಯಾದೆ ಹೇಳಣ್ಣ

ಮುಟ್ಟಾದ ಮೂರು ದಿನಕೆ ಹುಟ್ಟಿ ಬಂದೀರಿ ನೀವು

ಮುಡಚಟ್ಟು ಎಲ್ಲ್ಯಾದೆ ಹೇಳಣ್ಣ”

ಚಂದ್ರಲೋಕ ಮಂಗಳಲೋಕದ ಕುರಿತು ಮಾತನಾಡುವ ಈ ಕಾಲದಲ್ಲಿ ನೂರಾರು ವರ್ಷಗಳ ಹಿಂದೆ ನಮ್ಮ ತತ್ವಪದಕಾರ ಅನುಭವದ, ಆಧ್ಯಾತ್ಮದ ನೆಲೆಯಿಂದ ಕೇಳಿದ ಪ್ರಶ್ನೆಯಲ್ಲಿ ತರ್ಕವಿದೆ, ವಿಜ್ಞಾನವಿದೆ ಎಂದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.