ರೆಡ್ಡಿಯಿಂದ ಬಿಜೆಪಿಗೆ ಆರ್ಥಿಕ ನೆರವು: ಆರೋಪ
Team Udayavani, Nov 17, 2018, 6:35 AM IST
ಬೆಂಗಳೂರು: ಆ್ಯಂಬಿಡೆಂಟ್ ಪ್ರಕರಣದಲ್ಲಿ ಇಡಿಯಿಂದ ಬಚಾವ್ ಮಾಡಲು ಚಿನ್ನದ ಗಟ್ಟಿ ಲಂಚವಾಗಿ ಪಡೆದ ಆರೋಪ ಎದುರಿಸುತ್ತಿರುವ ಜನಾರ್ದನ ರೆಡ್ಡಿಯಿಂದ ಬಿಜೆಪಿ ಚುನಾವಣೆಗೆ ಆರ್ಥಿಕ ನೆರವು ಪಡೆದಿದೆ ಎಂದು ಜೆಡಿಎಸ್ ವಕ್ತಾರ ರಮೇಶ್ಬಾಬು ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಾರ್ದನರೆಡ್ಡಿ ಅವರು ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ತಮ್ಮ ಆಪ್ತರ ಬಳಿ ನಾನು ಬಿಜೆಪಿಗೆ ಎಷ್ಟೆಲ್ಲಾ ಸಹಾಯ ಮಾಡಿದರೂ ನನ್ನ ನೆರವಿಗೆ ಬರಲಿಲ್ಲ ಎಂದು ಹೇಳಿಕೊಂಡಿದ್ದರು. ಆದಾದ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಜನಾರ್ದನರೆಡ್ಡಿ ಪರ ಹೇಳಿಕೆ ನೀಡಿದ್ದಾರೆ. ಹೀಗಾಗಿ, ಜನಾರ್ದನರೆಡ್ಡಿ ಅವರಿಂದ ಬಿಜೆಪಿ ಆರ್ಥಿಕ ನೆರವು ಪಡೆದಿರುವುದು ಸ್ಪಷ್ಟ. ಈ ಬಗ್ಗೆ ಬಿಜೆಪಿ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದರು. ಆ್ಯಂಬಿಡೆಂಡ್ ಪ್ರಕರಣದಲ್ಲಿ ತಪ್ಪು ಮಾಡಿರುವವರು ಶಿಕ್ಷೆ ಅನುಭವಿಸುತ್ತಾರೆ. ಆದರೆ, ಜನಾರ್ದನ ರೆಡ್ಡಿ ಕುಮಾರಸ್ವಾಮಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.ವಿಧಾನಪರಿಷತ್ ಸದಸ್ಯ ಶ್ರೀಕಂಠೇಗೌಡ, ಪಕ್ಷದ
ಮುಖಂಡ ಪ್ರದೀಪ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ