ರಾಜ್ಯದಲ್ಲಿ ಬಲ ಕಳೆದುಕೊಂಡ ರಾಹುಲ್‌ ಶಕ್ತಿ


Team Udayavani, Nov 17, 2018, 6:00 AM IST

rahul-gandhi-700.jpg

ಬೆಂಗಳೂರು: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ತಳ ಮಟ್ಟದ ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಹೊಂದುವ ಉದ್ದೇಶದಿಂದ ಶುರು ಮಾಡಲಾಗಿದ್ದ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಮಹತ್ವಾಕಾಂಕ್ಷಿ  ಶಕ್ತಿ  ಯೋಜನೆಗೆ ರಾಜ್ಯದಲ್ಲಿ ಹಿನ್ನಡೆಯಾಗಿದೆ.

ಐವತ್ತು ಲಕ್ಷ ಸದಸ್ಯತ್ವ ಗುರಿ ಇಟ್ಟುಕೊಂಡು ಜುಲೈನಲ್ಲಿ ಶಕ್ತಿ ಯೋಜನೆಗೆ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಚಾಲನೆ ನೀಡಿದ್ದರು. ಆದರೆ, ಮೂರು ತಿಂಗಳಲ್ಲಿ ಆಗಿರುವುದು ಒಂದೂವರೆ ಲಕ್ಷ ಸದಸ್ಯತ್ವ ಮಾತ್ರ. 

ಶಕ್ತಿ ಯೋಜನೆ ನಮ್ಮ ನಿರೀಕ್ಷೆಯಂತೆ ನಡೆಯುತ್ತಿದೆ. ನವೆಂಬರ್‌ 30 ರೊಳಗೆ ಯೋಜನೆ ಪೂರ್ಣಗೊಳಿಸುವ ಗುರಿಯಿದೆ. ಕೆಲವು ಕ್ಷೇತ್ರಗಳಲ್ಲಿ ಚುನಾವಣೆ ನಡೆದ ಹಿನ್ನೆಲೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ. ಮೈಸೂರು ಭಾಗದಲ್ಲಿ ಸ್ವಲ್ಪ ಕಡಿಮೆಯಾಗಿದೆ. ಆ ಕ್ಷೇತ್ರಗಳಲ್ಲಿ ವೇಗ ಹೆಚ್ಚಿಸುತ್ತೇವೆ, ಎಂದು  ಶಕ್ತಿ ಯೋಜನೆ ರಾಜ್ಯ ಸಂಯೋಜಕ ಸೂರಜ್‌ ಹೆಗಡೆ ತಿಳಿಸಿದ್ದಾರೆ.

ರಾಜ್ಯದ ಮೂವತ್ತು ಜಿಲ್ಲೆಗಳ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಸ್ವಲ್ಪ ಮಟ್ಟಿಗೆ ಪ್ರಗತಿ ಕಂಡಿದ್ದು, ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್‌ ಅಸ್ತಿತ್ವವನ್ನೇ ಪ್ರಶ್ನಿಸುವಂತೆ ಮಾಡಿದೆ. ಬೆಂಗಳೂರು ಉತ್ತರ ಜಿಲ್ಲೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 2854 ಜನರು ಸದಸ್ಯರಾಗಿದ್ದರೆ, ಮಂಡ್ಯದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೇವಲ 98 ಜನ ಸದಸ್ಯರಾಗಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ 20 ಸಾವಿರ ಸದಸ್ಯತ್ವ ನೋಂದಣಿ ಮಾಡಲಾಗಿದ್ದು, ಮಂಡ್ಯದ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಕೇವಲ 20 ಜನ ನೋಂದಣಿಯಾಗಿದ್ದಾರೆ.

ಪಕ್ಷದ ಸಂಘಟನೆಯ ದೃಷ್ಟಿಯಿಂದ ಕಾಂಗ್ರೆಸ್‌ 37 ಜಿಲ್ಲೆಗಳನ್ನಾಗಿ ವಿಂಗಡಿಸಲಾಗಿದ್ದು, ಬೆಂಗಳೂರು ಉತ್ತರ, ಹುಬ್ಬಳ್ಳಿ-ಧಾರವಾಡ, ಬೀದರ್‌, ವಿಜಯಪುರ, ಗದಗ, ಬೆಂಗಳೂರು ಕೇಂದ್ರÅ, ಮೈಸೂರು ನಗರ, ಚಿಕ್ಕಬಳ್ಳಾಪುರ ಹಾಗೂ ಧಾರವಾಡ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸಾವಿರ ಸದಸ್ಯತ್ವವನ್ನು ದಾಟಿದ್ದು ಉಳಿದ ವಿಧಾನಸಭಾ ಕ್ಷೇತ್ರಗಳಲ್ಲಿ 104 ರಿಂದ 898 ರ ವರೆಗೆ ಸದಸ್ಯತ್ವ ಮಾಡಲಾಗಿದೆ.

ನಾಯಕರ ನಿರಾಸಕ್ತಿ
ಸ್ಥಳೀಯವಾಗಿ ಕೆಳ ಹಂತದ ಕಾರ್ಯಕರ್ತರು ನೇರವಾಗಿ ರಾಹುಲ್‌ ಗಾಂಧಿಯೊಂದಿಗೆ ಸಂಪರ್ಕ ಕಲ್ಪಸಲು ಶಕ್ತಿ ಯೋಜನೆ ಜಾರಿಗೆ ತಂದಿದ್ದು, ಕಾರ್ಯಕರ್ತರು ತಮ್ಮ ಮೊಬೈಲ್‌ ನಂಬರ್‌ನಿಂದ ತಮ್ಮ ಓಟರ್‌ ಐಡಿ ನಮೂದಿಸಿ ಸಂದೇಶ ರವಾನಿಸಿದರೆ ರಾಹುಲ್‌ ಗಾಂಧಿಯಿಂದ ಧನ್ಯವಾದದ ಧ್ವನಿ ಮುದ್ರಿತ ಮಾಹಿತಿ ಬರುತ್ತದೆ. ಕೆಳ ಹಂತದ ಕಾರ್ಯಕರ್ತರು ನೇರವಾಗಿ ರಾಹುಲ್‌ ಗಾಂಧಿಯೊಂದಿಗೆ ಸಂಪರ್ಕ ಹೊಂದಿದರೆ, ತಮ್ಮನ್ನು ನಿರ್ಲಕ್ಷ್ಯ ಮಾಡುತ್ತಾರೆ. ಅಲ್ಲದೇ ಕಾರ್ಯಕರ್ತರು ತಮ್ಮ ಮಾತಿಗೆ ಬೆಲೆ ಕೊಡುವುದಿಲ್ಲ ಎನ್ನುವ ಕಾರಣಕ್ಕೆ ಈ ಯೋಜನೆಯನ್ನು ಗಂಭೀರವಾಗಿ ಪರಿಗಣಿಸದೇ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿವೆ. 

ರಾಜ್ಯ ನಾಯಕರ ಸಭೆ:
ನೋಂದಣಿ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ವಿಭಾಗವಾರು ಸಭೆ ನಡೆಸುತ್ತಿದ್ದು, ಶುಕ್ರವಾರ ಮೈಸೂರು ವಿಭಾಗದ ಪದಾಧಿಕಾರಿಗಳ ಸಭೆ ನಡೆಸಿ ಯೋಜನೆಯ ವೇಗ ಹೆಚ್ಚಿಸುವಂತೆ ಸೂಚಿಸಿದ್ದಾರೆ. ಶನಿವಾರ ಬೆಳಗಾವಿ ಹಾಗೂ ಬೆಂಗಳೂರು ವಿಭಾಗದ ಪದಾಧಿಕಾರಿಗಳ ಸಭೆ ಹಾಗೂ ನವೆಂಬರ್‌ 20 ರಂದು ಕಲಬುರಗಿ ವಿಭಾಗದ ಜಿಲ್ಲಾಧ್ಯಕ್ಷರು ಹಾಗೂ ಉಸ್ತುವಾರಿ ಪದಾಧಿಕಾರಿಗಳ ಸಭೆ ನಡೆಸಲಿದ್ದಾರೆ. 

– ಶಂಕರ ಪಾಗೋಜಿ

ಟಾಪ್ ನ್ಯೂಸ್

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.