ಮುಂದಿನ ವಾರ ಸಮನ್ವಯ ಸಮಿತಿ ಸಭೆ


Team Udayavani, Nov 18, 2018, 6:15 AM IST

congress-700.jpg

ಬೆಂಗಳೂರು: ರಾಜ್ಯ ಸಂಪುಟ ವಿಸ್ತರಣೆಗೆ ಒತ್ತಡ ಹೆಚ್ಚಾಗುತ್ತಿದ್ದು, ಆಕಾಂಕ್ಷಿಗಳು ಬೆಳಗಾವಿ ಅಧಿವೇಶನದೊಳಗೆ ಸಂಪುಟ ವಿಸ್ತರಿಸುವಂತೆ ಪಟ್ಟು ಹಿಡಿದಿದ್ದಾರೆ.

ಶನಿವಾರ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಅವರನ್ನು ಭೇಟಿ ಮಾಡಿದ‌ ಸಚಿವಾಕಾಂಕ್ಷಿಗಳಾದ ಎಂ.ಬಿ.ಪಾಟೀಲ್‌, ಬಿ.ಸಿ.ಪಾಟೀಲ್‌ ಆದಷ್ಟು ಬೇಗ ಸಂಪುಟ ವಿಸ್ತರಣೆ ಮಾಡುವಂತೆ ಮನವಿ ಮಾಡಿದರು.

ಉಪ ಚುನಾವಣೆಯಲ್ಲಿ  ಉತ್ತಮ ಫ‌ಲಿತಾಂಶ ಬಂದಿರುವುದರಿಂದ ಸಂಪುಟ ವಿಸ್ತರಣೆ ಮಾಡಬಹುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಹೇಳಲಾಗಿದೆ.
ಶುಕ್ರವಾರ ರಾತ್ರಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನಿವಾಸದಲ್ಲಿ ರಾಜ್ಯ  ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಕಾರ್ಯಾಧ್ಯಕ್ಷ  ಈಶ್ವರ್‌ ಖಂಡ್ರೆ, ಸಚಿವ ಡಿ.ಕೆ.ಶಿವಕುಮಾರ್‌ ಸಭೆ ನಡೆಸಿ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು ಎಂದು ತಿಳಿದು ಬಂದಿದೆ.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಾಗೂ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರ ಜತೆ ಚರ್ಚಿಸಿ  ಈ ಕುರಿತು ನಿರ್ಧಾರ ಕೈಗೊಂಡು ದಿನಾಂಕ ನಿಗದಿಪಡಿಸಿ ರಾಹುಲ್‌ಗಾಂಧಿಯವರ ಒಪ್ಪಿಗೆ ಪಡೆಯಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.

ಅಸಮಾಧಾನ
ಈ ನಡುವೆ, ಸಂಪುಟ ವಿಸ್ತರಣೆಯಿಂದ ಸಚಿವಾಕಾಂಕ್ಷಿಗಳು ಬೇಸರಗೊಂಡಿದ್ದಾರೆ. ಇನ್ನೂ ವಿಳಂಬವಾದರೆ ಕೆಲವು ಶಾಸಕರು ಪಕ್ಷ ಬಿಡಬಹುದು. ಹತ್ತು ಶಾಸಕರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರುವ ಸಾಧ್ಯತೆಯಿದೆ. ಹೀಗಾಗಿ, ಮತ್ತೆ ಆಪರೇಷನ್‌ ಕಮಲ ಭೀತಿಯೂ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸಮನ್ವಯ ಸಮಿತಿ ಸಭೆ
ಮುಂದಿನ ವಾರ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಸರ್ಕಾರದ ಸಮನ್ವಯ ಸಮಿತಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆಳಗಾವಿ ಅಧಿವೇಶನಕ್ಕೆ ಮೊದಲು ಮಾಡಬೇಕೋ ಅಥವಾ ನಂತರವೋ ಎಂಬುದು ತೀರ್ಮಾನವಾಗಲಿದೆ ಎಂದು ಹೇಳಲಾಗಿದೆ. ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಇದುವರೆಗೂ ಎರಡು ಸಮನ್ವಯ ಸಮಿತಿ ನಡೆದಿದೆ.

ಡಿಕೆಶಿಗೆ ತೆಲಂಗಾಣ ಉಸ್ತುವಾರಿ
ಬಳ್ಳಾರಿ ಉಪ ಚುನಾವಣೆಯಲ್ಲಿ  ಉಸ್ತುವಾರಿ ವಹಿಸಿಕೊಂಡು ಪಕ್ಷಕ್ಕೆ ಜಯ ತಂದುಕೊಟ್ಟ ಡಿ.ಕೆ.ಶಿವಕುಮಾರ್‌ ಅವರಿಗೆ ಇದೀಗ ತೆಲಂಗಾಣ ವಿಧಾನಸಭೆ ಚುನಾವಣೆ ಉಸ್ತುವಾರಿ ವಹಿಸಲಾಗಿದೆ. ಈ ಸಂಬಂಧ ಶಿವಕುಮಾರ್‌ ಅವರಿಗೆ ಎಐಸಿಸಿಯಿಂದ ಸೂಚನೆ ನೀಡಲಾಗಿದೆ. ತೆಲಂಗಾಣದ ಕೆಲ ಕ್ಷೇತ್ರಗಳ ಮೇಲುಸ್ತುವಾರಿ ನೋಡಿಕೊಳ್ಳಲು ವರಿಷ್ಠರು ನಿರ್ದೇಶಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಸೇರಿದಂತೆ ಪ್ರಮುಖರು ತೆಲಂಗಾಣ ಪ್ರಚಾರಕ್ಕೆ ತೆರಳುವ ಸಾಧ್ಯತೆಯಿದೆ.

ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್‌-ಜೆಡಿಎಸ್‌ ನಡುವೆ ಯಾವುದೇ ಗೊಂದಲವಿಲ್ಲ.  ಈ ತಿಂಗಳ ಅಂತ್ಯದಲ್ಲಿ ಈ ಪ್ರಕ್ರಿಯೆ ಕೈಗೊಳ್ಳಲಾಗುವುದು.
– ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಅಧ್ಯಕ್ಷ

ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನದ ಒಳಗೆ ಸಂಪುಟ ವಿಸ್ತರಣೆಯಾಗಲಿದೆ. ಯಾವ ಶಾಸಕರೂ ಕಾಂಗ್ರೆಸ್‌ ಬಿಟ್ಟು ಬಿಜೆಪಿಗೆ ಹೋಗುವುದಿಲ್ಲ.
– ಈಶ್ವರ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ

ಸಂಪುಟ ವಿಸ್ತರಣೆ ಬಗ್ಗೆ ತಿಳಿದಿಲ್ಲ. ನನಗೆ ಸಚಿವ ಸ್ಥಾನ ಕೊಡುವುದು ಅಥವಾ ಬಿಡುವುದು ಹೈಕಮಾಂಡ್‌ಗೆ ಬಿಟ್ಟಿದ್ದು.
– ಎಂ.ಬಿ.ಪಾಟೀಲ್‌, ಮಾಜಿ ಸಚಿವ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.