ರೈತರ ಅಂಗೈಲಿ ಜಮಿನಿನ ಸಮಗ್ರ ಚಿತ್ರಣ


Team Udayavani, Nov 18, 2018, 6:35 AM IST

websuite.jpg

ಬೆಂಗಳೂರು: ಮೊಬೈಲ್‌ನಲ್ಲಿ ದಾಖಲಾಗುವ ಕೇವಲ ಅಕ್ಷಾಂಶ-ರೇಖಾಂಶಗಳಿಂದ ರೈತರು ಈಗ ತಮ್ಮ ಜಮೀನಿನ ಮಣ್ಣಿನ ಫ‌ಲವತ್ತತೆ ಅರಿಯಬಹುದು. ಈ ಮೂಲಕ ಅನಗತ್ಯ ರಸಗೊಬ್ಬರ ಬಳಕೆಗೆ ಕಡಿವಾಣ ಬೀಳಲಿದ್ದು, ಶೇ.40ರಷ್ಟು ರಾಸಾಯನಿಕ ವೆಚ್ಚ ತಗ್ಗಿಸಬಹುದು.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಮಣ್ಣು ವಿಜ್ಞಾನ ಮತ್ತು ಕೃಷಿ ರಸಾಯನಶಾಸ್ತ್ರ ವಿಭಾಗವು ತುಮಕೂರು ಸಿದ್ಧಗಂಗಾ ತಾಂತ್ರಿಕ ಸಂಸ್ಥೆ ಸಹಯೋಗದಲ್ಲಿ “ಮಣ್ಣು ಪರೀಕ್ಷೆ ಬೆಳೆ ಸ್ಪಂದನೆ ಪ್ರಾಯೋಜನೆ’ಯಲ್ಲಿ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದು, ದೇಶದಲ್ಲಿ ಮೊಟ್ಟಮೊದಲ ಬಾರಿಗೆ ತುಮಕೂರಿನಲ್ಲಿ ಈ ತಂತ್ರಜ್ಞಾನದ ಪ್ರಯೋಗ ನಡೆಯುತ್ತಿದೆ. ಇದು ಯಶಸ್ವಿಯಾದರೆ, ದೇಶಕ್ಕೆ ಈ ತಂತ್ರಜ್ಞಾನ ಮಾದರಿ ಆಗಲಿದೆ. ಈ ನಿಟ್ಟಿನಲ್ಲಿ ಭೂಪಾಲ್‌ನ ಭಾರತೀಯ ಮಣ್ಣು ವಿಜ್ಞಾನ ಸಂಸ್ಥೆ ಆಸಕ್ತಿ ತೋರಿಸಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ರೈತರು ತಮ್ಮ ಜಮೀನಿನಲ್ಲಿ ನಿಂತು ಮೊಬೈಲ್‌ನಲ್ಲಿರುವ “ಕಂಪಾಸ್‌’ ಮೇಲೆ ಕ್ಲಿಕ್‌ ಮಾಡಿದರೆ ಸಾಕು, ಎರಡೂ ತುದಿಗಳಲ್ಲಿ ಅಕ್ಷಾಂಶ-ರೇಖಾಂಶಗಳು ಕಾಣಿಸುತ್ತವೆ. ಅದನ್ನು ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿದ “ಕೃಷಿ ಗಣಕ’ದಲ್ಲಿ ನಮೂದಿಸಿದರೆ, ಜಮೀನಿನ ಫ‌ಲವತ್ತತೆಯ ಇಡೀ ಚಿತ್ರಣ ಸಿಗುತ್ತದೆ. ಜತೆಗೆ ನೀವು ಬೆಳೆಯುವ ಬೆಳೆಗೆ ಇಳುವರಿ ಗುರಿಯನ್ನು ತಿಳಿಸಿದರೆ, ಅದಕ್ಕೆ ಅಗತ್ಯವಿರುವ ರಸಗೊಬ್ಬರದ ಮಾಹಿತಿಯನ್ನೂ ನೀಡುತ್ತದೆ. ಇದರಿಂದ ಅನಗತ್ಯ ಗೊಬ್ಬರ ಬಳಕೆ ತಪ್ಪಲಿದೆ. ವಿಜ್ಞಾನಿಗಳು ನಡೆಸಿದ ಅಧ್ಯಯನದ ಪ್ರಕಾರ ಈ ಅತ್ಯಾಧುನಿಕ ತಂತ್ರಜ್ಞಾನ ಬಳಕೆಯಿಂದ ತುಮಕೂರು ಜಿಲ್ಲೆಯಲ್ಲಿ ಒಂದೇ ಹಂಗಾಮಿನ ಕೇವಲ ಒಂದು ಬೆಳೆಯಲ್ಲಿ ಕನಿಷ್ಠ ಎರಡು ಕೋಟಿ ರೂ. ಉಳಿತಾಯ ಮಾಡಬಹುದು!

ಈಗಿರೋದು ಬೆಳೆಗೆ ತಕ್ಕಂತೆ ಗೊಬ್ಬರ
ಪ್ರಸ್ತುತ ರೈತರು ಬೆಳೆಗೆ ತಕ್ಕಂತೆ ಗೊಬ್ಬರ ಹಾಕುತ್ತಿದ್ದಾರೆ. ಆದರೆ, ಮಣ್ಣಿನ ಫ‌ಲವತ್ತತೆಗೆ ಅನುಗುಣವಾಗಿ ಬಿತ್ತನೆ ಹಾಗೂ ರಸಗೊಬ್ಬರ ಬಳಕೆ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಜಿಪಿಎಸ್‌ ಮೂಲಕ ಸುಮಾರು ಹತ್ತು ಸಾವಿರ ಮಣ್ಣಿನ ಮಾದರಿಗಳನ್ನು ಸಂಗ್ರಹಿಸಿ, ಆ ಎಲ್ಲ ದತ್ತಾಂಶಗಳನ್ನು ಜಿಐಎಸ್‌ನಲ್ಲಿ ಹಾಕಿ, ಮಣ್ಣಿನ ಫ‌ಲವತ್ತತೆ ನಕ್ಷೆ ತಯಾರಿಸಲಾಗಿದೆ. ಅದೇ ರೀತಿ, ಮತ್ತೂಂದೆಡೆ 1970ರಿಂದ ಈವರೆಗಿನ 50ಕ್ಕೂ ಹೆಚ್ಚು ಬೆಳೆಗಳ ಇಳುವರಿ ಗುರಿ ಸಮೀಕರಣಗಳನ್ನು ಮಾಡಿದ್ದು, ಆ ಮಾಹಿತಿಯನ್ನೂ ಹಾಕಲಾಗಿದೆ. ಇದರಿಂದ ರೈತರಿಗೆ ಮಣ್ಣಿನಲ್ಲಿರುವ ಪೋಷಕಾಂಶಗಳ ಪ್ರಮಾಣ ಮತ್ತು ಆ ಜಮೀನಿನ ಇಳುವರಿ ಸಾಮರ್ಥ್ಯ ಎರಡೂ ಸಿಗುತ್ತದೆ.

ಈ ಸಂಬಂಧ http://krishiganaka.sit.ac.in  ಅಭಿವೃದ್ಧಿಪಡಿಸಲಾಗಿದ್ದು, ಈ ಎಲ್ಲ ಮಾಹಿತಿಯನ್ನೂ ವೆಬ್‌ಸೈಟ್‌ನಲ್ಲಿ ಹಾಕಲಾಗಿದೆ. ರೈತರು ಮೊಬೈಲ್‌ನಲ್ಲಿ ಸಂಗ್ರಹಿಸಿದ ಅಕ್ಷಾಂಶ-ರೇಖಾಂಶಗಳನ್ನು ಹಾಕಿದ ತಕ್ಷಣ ಪಕ್ಕದ ಕಾಲಂನಲ್ಲಿ ಜಮೀನಿನ ಇಳುವರಿಯ ಸರಾಸರಿ ಸಾಮರ್ಥ್ಯ ಬರುತ್ತದೆ. ಅದರಲ್ಲಿ ಇಳುವರಿ ಗುರಿ ನಮೂದಿಸುತ್ತಿದ್ದಂತೆ ಆ ಬೆಳೆಗೆ ಬೇಕಾದ ರಸಗೊಬ್ಬರ ಪ್ರಮಾಣ ದೊರೆಯುತ್ತದೆ. ಅದನ್ನು ಆಧರಿಸಿ ರೈತರು ಬೆಳೆಯಬಹುದು ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಮಣ್ಣು ವಿಜ್ಞಾನ ಮತ್ತು ಕೃಷಿ ರಸಾಯನಶಾಸ್ತ್ರ ವಿಭಾಗದ ವಿಜ್ಞಾನಿ ಡಾ.ಪಿ.ಕೆ. ಬಸವರಾಜ ವಿವರಿಸಿದರು.

ಇಂದು ಲೋಕಾರ್ಪಣೆ
ಕೃಷಿ ಗಣಕವು ಕನ್ನಡ, ಇಂಗ್ಲಿಷ್‌, ಹಿಂದಿ, ತಮಿಳು ಸೇರಿದಂತೆ ಹತ್ತು ಭಾಷೆಗಳಲ್ಲಿ ಪರಿಚಯಿಸಲಾಗಿದೆ. ಭಾನುವಾರ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಈ ವೆಬ್‌ಸೈಟ್‌ ಅನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ಪ್ರಯೋಗ ಯಶಸ್ವಿಯಾದರೆ, ಇದೇ ಮಾದರಿಯನ್ನು ದೇಶಾದ್ಯಂತ ಅಳವಡಿಸುವ ಬಗ್ಗೆ ಭಾರತೀಯ ಮಣ್ಣು ವಿಜ್ಞಾನ ಸಂಸ್ಥೆ ಚಿಂತನೆ ನಡೆಸಿದೆ. ಈ ಸಂಬಂಧ ಈಗಾಗಲೇ ಚರ್ಚೆ ಕೂಡ ನಡೆದಿದೆ ಎಂದು ಡಾ.ಬಸವರಾಜ ಹೇಳಿದರು.

ಒಂಬತ್ತು ಜಿಲ್ಲೆಗಳು ಯಾವುವು?
ತುಮಕೂರು, ಚಿತ್ರದುರ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿನ ಸುಮಾರು 10 ಸಾವಿರ ಮಣ್ಣಿನ ಮಾದರಿ ಸಂಗ್ರಹಿಸಲಾಗಿದೆ. ಕಂದಾಯ ಗ್ರಾಮಗಳ ಸಂಖ್ಯೆ ಆಧರಿಸಿ ಖುದ್ದು ತಜ್ಞರು ಸ್ಥಳಕ್ಕೆ ತೆರಳಿ ಮಾದರಿ ಸಂಗ್ರಹಿಸಿದ್ದಾರೆ. ಈ ತಂತ್ರಜ್ಞಾನವು ಶೇ. 70ರಷ್ಟು ನಿಖರತೆಯನ್ನು ಹೊಂದಿದೆ.

ಏನು ವ್ಯತ್ಯಾಸ?
ಮಣ್ಣಿನ ಆರೋಗ್ಯ ಕಾರ್ಡ್‌ ರೈತರ ಕೈಸೇರಲು ತಿಂಗಳು ಹಿಡಿಯುತ್ತದೆ. ಅಷ್ಟೊತ್ತಿಗೆ ಬಿತ್ತನೆಯಾಗಿ, ರಸಗೊಬ್ಬರವೂ ಹಾಕಲಾಗಿರುತ್ತದೆ. ಹಾಗಾಗಿ, ನಿರೀಕ್ಷಿತ ಪ್ರಯೋಜನ ಆಗುವುದಿಲ್ಲ. ಆದರೆ, “ಕೃಷಿ ಗಣಕ’ದಲ್ಲಿ ಕೆಲವೇ ನಿಮಿಷಗಳಲ್ಲಿ ರೈತನ ಅಂಗೈನಲ್ಲಿ ಈ ಮಾಹಿತಿ ಲಭ್ಯವಾಗುವುದರಿಂದ ಸಮಯ ಉಳಿತಾಯದ ಜತೆಗೆ ಇಳುವರಿ ಗುರಿ ಆಧಾರಿತ ರಸಗೊಬ್ಬರ ಪ್ರಮಾಣ ತಿಳಿಯಬಹುದು.

– ವಿಜಯಕುಮಾರ್‌ ಚಂದರಗಿ
 

ಟಾಪ್ ನ್ಯೂಸ್

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqeqewqewq

Tennis; ಇದೇ ಕೊನೆಯ ಸೀಸನ್‌:ಡೊಮಿನಿಕ್‌ ಥೀಮ್‌

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.