ಎಸ್ಸಿ, ಎಸ್ಟಿ ಬಡ್ತಿ: ಸಿದ್ದು ಜತೆ ನೌಕರರ ಚರ್ಚೆ
Team Udayavani, Nov 18, 2018, 6:55 AM IST
ಬೆಂಗಳೂರು :ಎಸ್-ಎಸ್ಟಿ ಬಡ್ತಿ ಮೀಸಲಾತಿ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ನೌಕರರ ಸಂಘದ ಪದಾಧಿಕಾರಿಗಳು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ರಾಷ್ಟ್ರಪತಿಗಳಿಂದ ಅಂಗೀಕಾರಗೊಂಡ ಎಸ್ಸಿ-ಎಸ್ಟಿ ಬಡ್ತಿ ಮೀಸಲಾತಿ ವಿಧೇಯಕವನ್ನು ಕೂಡಲೇ ಜಾರಿ ಮಾಡಬೇಕು. ಬಡ್ತಿ ಮೀಸಲಾತಿ ವಿಧೇಯಕ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಿ ವಿಧೇಯಕ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ನೌಕರರ ಸಂಘದ ಅಧ್ಯಕ್ಷ ಶಿವಶಂಕರ, ಮೀಸಲಾತಿ ವಿಧೇಯಕ ಜಾರಿಗೆ ಸಚಿವ ಎಚ್.ಡಿ.ರೇವಣ್ಣ ಅಡ್ಡಗಾಲು ಹಾಕಿದ್ದಾರೆ. ಅವರ ಇಲಾಖೆಯಲ್ಲಿಯೇ ಎಸ್ಸಿ-ಎಸ್ಟಿ ನೌಕರರ ಶೋಷಣೆ ನಡೆಯುತ್ತಿದೆ. ಮುಂಬಡ್ತಿ ಇದ್ದಂತ ನೌಕರರಿಗೆ ಹಿಂಬಡ್ತಿ ನೀಡಿ ವೇತನ ಕಡಿತಗೊಳಿಸಲಾಗಿದೆ ಎಂದು ದೂರಿದರು.
ಎಸ್ಸಿ-ಎಸ್ಟಿ ವಿಧೇಯಕ ಜಾರಿಗೊಳಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಎಚ್.ಡಿ.ರೇವಣ್ಣ ಬಿಡುತ್ತಿಲ್ಲ.ಹೀಗಾಗಿ, ನಾವು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ ಎಂದು ಹೇಳಿದರು.