ಸಿಎಂ ಭೇಟಿ ಮಾಡಿದ ಲೀಲಾವತಿ
Team Udayavani, Nov 18, 2018, 6:55 AM IST
ಬೆಂಗಳೂರು: ಹಿರಿಯ ನಟಿ ಲೀಲಾವತಿ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಸೋಲದೇವನಹಳ್ಳಿಯಲ್ಲಿರುವ ತಮ್ಮ ಜಮೀನು ಅರಣ್ಯ ಪ್ರದೇಶ ವ್ಯಾಪ್ತಿಯಿಂದ ತೆಗೆಯುವಂತೆ ಮನವಿ ಮಾಡಿದರು.
ಸುಮಾರು 900 ಎಕರೆ ಪ್ರದೇಶ ಅರಣ್ಯ ಎಂದು ಘೋಷಣೆ ಮಾಡಲಾಗಿದೆ. ಇದರಿಂದ 650 ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ದಿನ ನಿತ್ಯ ಕಾಡು ಪ್ರಾಣಿಗಳಿಂದ ತೊಂದರೆಯಾಗುತ್ತಿದೆ. ನಾವು ಆ ಹಳ್ಳಿ ವ್ಯಾಪ್ತಿಯಲ್ಲಿದದೇವೆ. ನನಗೆ 83 ವರ್ಷ ವಯಸ್ಸಾಗಿದೆ. ದಯವಿಟ್ಟು ಸಹಾಯ ಮಾಡಿ ಎಂದು ಕೋರಿದರು. ಲೀಲಾವತಿಯವರ ಮನವಿ ಆಲಿಸಿದ ಮುಖ್ಯಮಂತ್ರಿಯವರು ಅಧಿಕಾರಿಗಳ ಜತೆ ಚರ್ಚಿಸುವುದಾಗಿ ಭರವಸೆ ನೀಡಿದರು.