ವೆಬ್‌ಸೈಟ್‌ ಮೂಲಕ ಮಾನವ ಕಳ್ಳಸಾಗಣೆ ಜಾಲ ಸಿಐಡಿ ಬಲೆಗೆ


Team Udayavani, Nov 18, 2018, 6:00 AM IST

ban18111801medn.jpg

ಬೆಂಗಳೂರು: ಅಮೆರಿಕಾ, ಕೆನಡಾ, ಬ್ರಿಟನ್‌ ಸೇರಿದಂತೆ ವಿದೇಶಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಬಾಂಗ್ಲಾ ಮತ್ತಿತರ ಬಡ ದೇಶಗಳಿಂದ ಯುವಕರನ್ನು ಕರೆಸಿಕೊಂಡು ನಗರದ ಹೊರವಲಯದ ಒಂಟಿ ಮನೆಗಳಲ್ಲಿ ಕೂಡಿಹಾಕಿ, ಚಿತ್ರಹಿಂಸೆ ನೀಡಿ ಲಕ್ಷಾಂತರ ರೂ. ಹಣ ವಸೂಲಿ ಮಾಡುತ್ತಿದ್ದ ಅಂತರ್‌ ರಾಜ್ಯಜಾಲವನ್ನು ಸಿಐಡಿ (ಮಾನವಕಳ್ಳ ಸಾಗಾಣಿಕೆ ವಿಭಾಗ) ಭೇದಿಸಿದೆ.

ವೆಬ್‌ಸೈಟ್‌ ಮೂಲಕ ಉದ್ಯೋಗ ಆಮಿಷವೊಡ್ಡುತ್ತಿದ್ದ ಈ ಜಾಲ ದೇಶದ ಪ್ರಮುಖ ನಗರಗಳಿಗೆ ಮಾನವ ಕಳ್ಳಸಾಗಣೆ ಮಾಡುತ್ತಿತ್ತು ಎಂಬ  ಅಂಶವೂ ವಿಚಾರಣೆ ವೇಳೆ ತಿಳಿದುಬಂದಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಐಡಿ ಹಾಗೂ ಬೆಂಗಳೂರು ಪೊಲೀಸರು ಮೂರು ಪ್ರತ್ಯೇಕ ಪ್ರಕರಣದಲ್ಲಿ ಮುಂಬೈ ಮೂಲದ ಕಿಂಗ್‌ಪಿನ್‌ ಸೇರಿ 16 ಮಂದಿಯನ್ನು ಬಂಧಿಸಿದ್ದಾರೆ.

ಕಳೆದ ವರ್ಷ ರಾಮನಗರದಲ್ಲಿ ನಡೆದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣದ ಜಾಡು ಹಿಡಿದು ಹೊರಟ ಸಿಐಡಿ ಪೊಲೀಸರಿಗೆ, ಕಟ್ಟಿಗೆಹಳ್ಳಿ- ಬಾಗಲೂರು ರಸ್ತೆಯ ಐಶಾರಾಮಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಈ ಜಾಲದ ವಂಚನೆ ಪ್ರಕರಣಗಳು ಬಯಲಿಗೆ ಬಂದಿವೆ.

ಮುಂಬಯಿ ಮೂಲದ ಕಿಂಗ್‌ಪಿನ್‌ ರೆಹಮಾನ್‌, ರಾಹುಲ್‌ ಮೆಹ್ರಾ ಹಾಗೂ ಬೆಂಗಳೂರಿನ ಅಶ್ವಾಕ್‌ನನ್ನು ರಾಮನಗರ ನ್ಯಾಯಾಲಯಕ್ಕೆ ಹಾಜರು ಪಡಿಸಿರುವ ಸಿಐಡಿ ಅಧಿಕಾರಿಗಳು 20 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಸಿಐಡಿ ಹಾಗೂ ಜಾಲಹಳ್ಳಿ ಪೊಲೀಸರು, ಮನೆಯೊಂದರಲ್ಲಿ ಕೂಡಿ ಹಾಕಿದ್ದ 8 ಮಂದಿ ಬಾಂಗ್ಲಾ ಯುವಕರನ್ನು ರಕ್ಷಿಸಿದ್ದು, ಅವರನ್ನು ಅಕ್ರಮವಾಗಿ ಕೂಡಿ ಹಾಕಿದ್ದ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ದೆಹಲಿಯ ಮೊಹಮದ್‌ ಆಸ್ಕರ್‌ ಅಲಿ, ಮೊಹಮದ್‌ ವಾಜೀದ್‌ ಹುಸೇನ್‌, ಮೊಹಮದ್‌ ಮುತಾರಂಜಾ, ಎಂ.ಡಿ ಪರ್ವೇಜ್‌, ರಾಮನಗರದ ಸೈಯದ್‌ ಖಲೀದ್‌, ಸೈಯದ್‌ ಸಾದಿಕ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಯಲಹಂಕದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ಸುನೀಲ್‌ ಕೇಜ್ರಿವಾಲ್‌ ಅಲಿಯಾಸ್‌ ಪಂಡಿತ್‌, ಜಾಫ‌ರ್‌, ಷರೀಫ್ ಸರ್ಕಾರ್‌, ರೆಹಾನ್‌ ಷರೀಫ್, ಮೊಹಮದ್‌ ಬಿಲಾಲ್‌ ಶೇಖ್‌ ಎಂಬವರನ್ನು ವಶಕ್ಕೆ ಪಡೆದು ಯಲಹಂಕ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಉಳಿದಂತೆ ರಾಮನಗರ ಕೊಲೆ ಪ್ರಕರಣ ಹಾಗೂ ಜಾಲದ ಕುರಿತ ಸಮಗ್ರ ತನಿಖೆ ಸಲುವಾಗಿ ರೆಹಮಾನ್‌ ಸೇರಿ ಮೂವರು ಆರೋಪಿಗಳನ್ನು ಸಿಐಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಉನ್ನತ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದರು.

ವೆಬ್‌ಸೈಟ್‌ ಮೂಲಕ ಯುವಕರಿಗೆ ಗಾಳ!
ಜಾಲದ ಕಿಂಗ್‌ಪಿನ್‌ ಎನ್ನಲಾದ ರಾಹುಲ್‌ ಮೆಹ್ರಾ, ಸುನೀಲ್‌ ಕೇಜ್ರಿವಾಲ್‌ ಆರೋಪಿಗಳು www.abroadjobs.com  ವೆಬ್‌ಸೈಟ್‌ ಮೂಲಕ ಅಮೆರಿಕಾ, ಕೆನಡಾ, ಬ್ರಿಟನ್‌ ದೇಶಗಳಲ್ಲಿ ಉತ್ತಮ ವೇತನದ ಕೆಲಸ ಕೊಡಿಸುತ್ತೇವೆ ಎಂದು ಜಾಹೀರಾತು ನೀಡಿದ್ದಾರೆ. ಅದನ್ನು ನಂಬುತ್ತಿದ್ದ ಭಾರತ, ಬಾಂಗ್ಲಾ ಸೇರಿ ಹಲವು ದೇಶಗಳ ಯುವಕರು ತಮ್ಮ ವಿವರಗಳನ್ನು ವೆಬ್‌ಸೈಟ್‌ನೊಂದಿಗೆ ಶೇರ್‌ ಮಾಡಿಕೊಂಡಿದ್ದಾರೆ. ಅವರು ನಮೂದಿಸಿದ್ದ ದೂರವಾಣಿ ಸಂಖ್ಯೆಗಳನ್ನು ಪಡೆದುಕೊಂಡಿರುವ ವಂಚಕ ಜಾಲದ ಸದಸ್ಯರು ಏಜೆಂಟರ ಮೂಲಕ ಅವರನ್ನು ಸಂಪರ್ಕಿಸಿ ಮೊದಲು ಬೆಂಗಳೂರು ಮತ್ತು ಮುಂಬಯಿಗೆ  ಕರೆಸಿಕೊಂಡಿದ್ದರು. ಅಲ್ಲಿ ಕರೆಸಿಕೊಂಡ ಬಳಿಕ ಅವರಿಗೆ ಪಾಸ್‌ಪೋರ್ಟ್‌ ಇನ್ನಿತರೆ  ಪ್ರಕ್ರಿಯೆಗಳು ಆಗಬೇಕು ಎಂದು ಕೆಲದಿನಗಳ ಕಾಲ ಸುತ್ತಾಡಿಸಿ ಒಂಟಿ ಮನೆಯಲ್ಲಿ ಕೂಡಿಹಾಕಿದ್ದರು. ಈಗ ಬೆಳಕಿಗೆ ಬಂದಿರುವ ಪ್ರಕರಣದಲ್ಲಿ ಚಿಕ್ಕಜಾಲದ ಕೋಳಿಪುರ ಗ್ರಾಮದ ಸಮೀಪ ಬಳಿ ಒಂಟಿ ಮನೆಗೆ ತಂದು 8 ಮಂದಿ ಬಾಂಗ್ಲಾ ಯುವಕರನ್ನು ಕೂಡಿಹಾಕಿದ್ದರು.

ಹಣ ದೋಚಲು ಪಿಸ್ತೂಲ್‌ ಬಳಕೆ
ಒಂಟಿ ಮನೆಯಲ್ಲಿ ಆರೋಪಿಗಳನ್ನು ಕೂಡಿಹಾಕಿದ ಬಳಿಕ ಅವರು ತಂದಿದ್ದ ಹಣ, ಚಿನ್ನಾಭರಣ ಪಡೆದು ಚಿತ್ರಹಿಂಸೆ ನೀಡುತ್ತಿದ್ದ ಈ ಜಾಲ, ಅವರಿಂದಲೇ ಪೋಷಕರಿಗೆ ಇಂಟರ್‌ನ್ಯಾಶನಲ್‌ ಕರೆ ಮಾಡಿಸುತ್ತಿದ್ದರು. ತಾವು ವಿದೇಶದಲ್ಲಿದ್ದು, ಒಳ್ಳೆ ಉದ್ಯೋಗ ಸಿಕ್ಕಿದೆ. ಸದ್ಯಕ್ಕೆ ಹಣದ ಅಗತ್ಯವಿದೆ ಎಂದು ನಂಬಿಸಿ ತಮ್ಮ ಅಕೌಂಟ್‌ಗಳಿಗೆ ಹಣ ಹಾಕಿಸಿಕೊಳ್ಳುತ್ತಿದ್ದರು. ಒಬ್ಬೊಬ್ಬರಿಂದಲೂ ಕನಿಷ್ಠ 5 ಲಕ್ಷ ರೂ.ಗಳಿಂದ 12 ಲಕ್ಷ ರೂ.ಗಳವರೆಗೆ ಹಣ ಹಾಕಿಸಿಕೊಂಡಿರುವುದು ಪತ್ತೆಯಾಗಿದೆ. ಪ್ರತಿರೋಧ ತೋರಿದರೆ ಮಾರಕಾಸ್ತ್ರಗಳಿಂದ ಥಳಿಸುತ್ತಿದ್ದರು. ಜತೆಗೆ, ಪಿಸ್ತೂಲ್‌ ತೋರಿಸಿ ಕೊಲ್ಲುವ ಬೆದರಿಕೆ ಒಡ್ಡುತ್ತಿದ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ವರ್ಷದ ಹಿಂದಿನ ಕೊಲೆ ಪ್ರಕರಣದಿಂದ ಸುಳಿವು!
ರಾಮನನಗರದ ಪಾದರಹಳ್ಳಿ ಸಮೀಪದ ರಸ್ತೆ ಸಮೀಪ ಕಳೆದ ವರ್ಷ ಡಿ.6ರಂದು ಅಪರಿಚಿತ ಪುರುಷನ ಶವ ಪತ್ತೆಯಾಗಿದ್ದು, ದುಷ್ಕರ್ಮಿಗಳು ಹಲ್ಲೆನಡೆಸಿ ಮುಖವನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಶವ ಬಿಸಾಡಿದ್ದರು. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳು ಬೆಂಗಳೂರಿನ ಬಾಗಲೂರಿನ ಪ್ರಿನ್ಸ್‌ ಇನ್‌ ಹೋಟೆಲ್‌ನಲ್ಲಿ ಇರುವ ಮಾಹಿತಿ ಖಚಿತಪಡಿಸಿಕೊಂಡ ಸಿಐಡಿ ಅಧಿಕಾರಿಗಳು ಅಶ್ವಾಕ್‌, ರಾಹುಲ್‌ ಮೆಹ್ರಾ, ಸುನೀಲ್‌ ಕೇಜ್ರಿವಾಲ್‌, ಜಾಫ‌ರ್‌ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಆಗ, ವಿದೇಶಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕರನ್ನು ಕರೆತಂದು ಅಕ್ರಮವಾಗಿ ಹಣ ವಸೂಲಿ ಮಾಡಲಾಗಿದೆ ಎಂದು ಬಾಯ್ಬಿಟ್ಟಿದ್ದಾರೆ.

– ಮಂಜುನಾಥ್‌ ಲಘುಮೇನಹಳ್ಳಿ
 

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.