ವೆಬ್‌ಸೈಟ್‌ ಮೂಲಕ ಮಾನವ ಕಳ್ಳಸಾಗಣೆ ಜಾಲ ಸಿಐಡಿ ಬಲೆಗೆ


Team Udayavani, Nov 18, 2018, 6:00 AM IST

ban18111801medn.jpg

ಬೆಂಗಳೂರು: ಅಮೆರಿಕಾ, ಕೆನಡಾ, ಬ್ರಿಟನ್‌ ಸೇರಿದಂತೆ ವಿದೇಶಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಬಾಂಗ್ಲಾ ಮತ್ತಿತರ ಬಡ ದೇಶಗಳಿಂದ ಯುವಕರನ್ನು ಕರೆಸಿಕೊಂಡು ನಗರದ ಹೊರವಲಯದ ಒಂಟಿ ಮನೆಗಳಲ್ಲಿ ಕೂಡಿಹಾಕಿ, ಚಿತ್ರಹಿಂಸೆ ನೀಡಿ ಲಕ್ಷಾಂತರ ರೂ. ಹಣ ವಸೂಲಿ ಮಾಡುತ್ತಿದ್ದ ಅಂತರ್‌ ರಾಜ್ಯಜಾಲವನ್ನು ಸಿಐಡಿ (ಮಾನವಕಳ್ಳ ಸಾಗಾಣಿಕೆ ವಿಭಾಗ) ಭೇದಿಸಿದೆ.

ವೆಬ್‌ಸೈಟ್‌ ಮೂಲಕ ಉದ್ಯೋಗ ಆಮಿಷವೊಡ್ಡುತ್ತಿದ್ದ ಈ ಜಾಲ ದೇಶದ ಪ್ರಮುಖ ನಗರಗಳಿಗೆ ಮಾನವ ಕಳ್ಳಸಾಗಣೆ ಮಾಡುತ್ತಿತ್ತು ಎಂಬ  ಅಂಶವೂ ವಿಚಾರಣೆ ವೇಳೆ ತಿಳಿದುಬಂದಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಐಡಿ ಹಾಗೂ ಬೆಂಗಳೂರು ಪೊಲೀಸರು ಮೂರು ಪ್ರತ್ಯೇಕ ಪ್ರಕರಣದಲ್ಲಿ ಮುಂಬೈ ಮೂಲದ ಕಿಂಗ್‌ಪಿನ್‌ ಸೇರಿ 16 ಮಂದಿಯನ್ನು ಬಂಧಿಸಿದ್ದಾರೆ.

ಕಳೆದ ವರ್ಷ ರಾಮನಗರದಲ್ಲಿ ನಡೆದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣದ ಜಾಡು ಹಿಡಿದು ಹೊರಟ ಸಿಐಡಿ ಪೊಲೀಸರಿಗೆ, ಕಟ್ಟಿಗೆಹಳ್ಳಿ- ಬಾಗಲೂರು ರಸ್ತೆಯ ಐಶಾರಾಮಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಈ ಜಾಲದ ವಂಚನೆ ಪ್ರಕರಣಗಳು ಬಯಲಿಗೆ ಬಂದಿವೆ.

ಮುಂಬಯಿ ಮೂಲದ ಕಿಂಗ್‌ಪಿನ್‌ ರೆಹಮಾನ್‌, ರಾಹುಲ್‌ ಮೆಹ್ರಾ ಹಾಗೂ ಬೆಂಗಳೂರಿನ ಅಶ್ವಾಕ್‌ನನ್ನು ರಾಮನಗರ ನ್ಯಾಯಾಲಯಕ್ಕೆ ಹಾಜರು ಪಡಿಸಿರುವ ಸಿಐಡಿ ಅಧಿಕಾರಿಗಳು 20 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಸಿಐಡಿ ಹಾಗೂ ಜಾಲಹಳ್ಳಿ ಪೊಲೀಸರು, ಮನೆಯೊಂದರಲ್ಲಿ ಕೂಡಿ ಹಾಕಿದ್ದ 8 ಮಂದಿ ಬಾಂಗ್ಲಾ ಯುವಕರನ್ನು ರಕ್ಷಿಸಿದ್ದು, ಅವರನ್ನು ಅಕ್ರಮವಾಗಿ ಕೂಡಿ ಹಾಕಿದ್ದ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ದೆಹಲಿಯ ಮೊಹಮದ್‌ ಆಸ್ಕರ್‌ ಅಲಿ, ಮೊಹಮದ್‌ ವಾಜೀದ್‌ ಹುಸೇನ್‌, ಮೊಹಮದ್‌ ಮುತಾರಂಜಾ, ಎಂ.ಡಿ ಪರ್ವೇಜ್‌, ರಾಮನಗರದ ಸೈಯದ್‌ ಖಲೀದ್‌, ಸೈಯದ್‌ ಸಾದಿಕ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಯಲಹಂಕದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ಸುನೀಲ್‌ ಕೇಜ್ರಿವಾಲ್‌ ಅಲಿಯಾಸ್‌ ಪಂಡಿತ್‌, ಜಾಫ‌ರ್‌, ಷರೀಫ್ ಸರ್ಕಾರ್‌, ರೆಹಾನ್‌ ಷರೀಫ್, ಮೊಹಮದ್‌ ಬಿಲಾಲ್‌ ಶೇಖ್‌ ಎಂಬವರನ್ನು ವಶಕ್ಕೆ ಪಡೆದು ಯಲಹಂಕ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಉಳಿದಂತೆ ರಾಮನಗರ ಕೊಲೆ ಪ್ರಕರಣ ಹಾಗೂ ಜಾಲದ ಕುರಿತ ಸಮಗ್ರ ತನಿಖೆ ಸಲುವಾಗಿ ರೆಹಮಾನ್‌ ಸೇರಿ ಮೂವರು ಆರೋಪಿಗಳನ್ನು ಸಿಐಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಉನ್ನತ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದರು.

ವೆಬ್‌ಸೈಟ್‌ ಮೂಲಕ ಯುವಕರಿಗೆ ಗಾಳ!
ಜಾಲದ ಕಿಂಗ್‌ಪಿನ್‌ ಎನ್ನಲಾದ ರಾಹುಲ್‌ ಮೆಹ್ರಾ, ಸುನೀಲ್‌ ಕೇಜ್ರಿವಾಲ್‌ ಆರೋಪಿಗಳು www.abroadjobs.com  ವೆಬ್‌ಸೈಟ್‌ ಮೂಲಕ ಅಮೆರಿಕಾ, ಕೆನಡಾ, ಬ್ರಿಟನ್‌ ದೇಶಗಳಲ್ಲಿ ಉತ್ತಮ ವೇತನದ ಕೆಲಸ ಕೊಡಿಸುತ್ತೇವೆ ಎಂದು ಜಾಹೀರಾತು ನೀಡಿದ್ದಾರೆ. ಅದನ್ನು ನಂಬುತ್ತಿದ್ದ ಭಾರತ, ಬಾಂಗ್ಲಾ ಸೇರಿ ಹಲವು ದೇಶಗಳ ಯುವಕರು ತಮ್ಮ ವಿವರಗಳನ್ನು ವೆಬ್‌ಸೈಟ್‌ನೊಂದಿಗೆ ಶೇರ್‌ ಮಾಡಿಕೊಂಡಿದ್ದಾರೆ. ಅವರು ನಮೂದಿಸಿದ್ದ ದೂರವಾಣಿ ಸಂಖ್ಯೆಗಳನ್ನು ಪಡೆದುಕೊಂಡಿರುವ ವಂಚಕ ಜಾಲದ ಸದಸ್ಯರು ಏಜೆಂಟರ ಮೂಲಕ ಅವರನ್ನು ಸಂಪರ್ಕಿಸಿ ಮೊದಲು ಬೆಂಗಳೂರು ಮತ್ತು ಮುಂಬಯಿಗೆ  ಕರೆಸಿಕೊಂಡಿದ್ದರು. ಅಲ್ಲಿ ಕರೆಸಿಕೊಂಡ ಬಳಿಕ ಅವರಿಗೆ ಪಾಸ್‌ಪೋರ್ಟ್‌ ಇನ್ನಿತರೆ  ಪ್ರಕ್ರಿಯೆಗಳು ಆಗಬೇಕು ಎಂದು ಕೆಲದಿನಗಳ ಕಾಲ ಸುತ್ತಾಡಿಸಿ ಒಂಟಿ ಮನೆಯಲ್ಲಿ ಕೂಡಿಹಾಕಿದ್ದರು. ಈಗ ಬೆಳಕಿಗೆ ಬಂದಿರುವ ಪ್ರಕರಣದಲ್ಲಿ ಚಿಕ್ಕಜಾಲದ ಕೋಳಿಪುರ ಗ್ರಾಮದ ಸಮೀಪ ಬಳಿ ಒಂಟಿ ಮನೆಗೆ ತಂದು 8 ಮಂದಿ ಬಾಂಗ್ಲಾ ಯುವಕರನ್ನು ಕೂಡಿಹಾಕಿದ್ದರು.

ಹಣ ದೋಚಲು ಪಿಸ್ತೂಲ್‌ ಬಳಕೆ
ಒಂಟಿ ಮನೆಯಲ್ಲಿ ಆರೋಪಿಗಳನ್ನು ಕೂಡಿಹಾಕಿದ ಬಳಿಕ ಅವರು ತಂದಿದ್ದ ಹಣ, ಚಿನ್ನಾಭರಣ ಪಡೆದು ಚಿತ್ರಹಿಂಸೆ ನೀಡುತ್ತಿದ್ದ ಈ ಜಾಲ, ಅವರಿಂದಲೇ ಪೋಷಕರಿಗೆ ಇಂಟರ್‌ನ್ಯಾಶನಲ್‌ ಕರೆ ಮಾಡಿಸುತ್ತಿದ್ದರು. ತಾವು ವಿದೇಶದಲ್ಲಿದ್ದು, ಒಳ್ಳೆ ಉದ್ಯೋಗ ಸಿಕ್ಕಿದೆ. ಸದ್ಯಕ್ಕೆ ಹಣದ ಅಗತ್ಯವಿದೆ ಎಂದು ನಂಬಿಸಿ ತಮ್ಮ ಅಕೌಂಟ್‌ಗಳಿಗೆ ಹಣ ಹಾಕಿಸಿಕೊಳ್ಳುತ್ತಿದ್ದರು. ಒಬ್ಬೊಬ್ಬರಿಂದಲೂ ಕನಿಷ್ಠ 5 ಲಕ್ಷ ರೂ.ಗಳಿಂದ 12 ಲಕ್ಷ ರೂ.ಗಳವರೆಗೆ ಹಣ ಹಾಕಿಸಿಕೊಂಡಿರುವುದು ಪತ್ತೆಯಾಗಿದೆ. ಪ್ರತಿರೋಧ ತೋರಿದರೆ ಮಾರಕಾಸ್ತ್ರಗಳಿಂದ ಥಳಿಸುತ್ತಿದ್ದರು. ಜತೆಗೆ, ಪಿಸ್ತೂಲ್‌ ತೋರಿಸಿ ಕೊಲ್ಲುವ ಬೆದರಿಕೆ ಒಡ್ಡುತ್ತಿದ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ವರ್ಷದ ಹಿಂದಿನ ಕೊಲೆ ಪ್ರಕರಣದಿಂದ ಸುಳಿವು!
ರಾಮನನಗರದ ಪಾದರಹಳ್ಳಿ ಸಮೀಪದ ರಸ್ತೆ ಸಮೀಪ ಕಳೆದ ವರ್ಷ ಡಿ.6ರಂದು ಅಪರಿಚಿತ ಪುರುಷನ ಶವ ಪತ್ತೆಯಾಗಿದ್ದು, ದುಷ್ಕರ್ಮಿಗಳು ಹಲ್ಲೆನಡೆಸಿ ಮುಖವನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಶವ ಬಿಸಾಡಿದ್ದರು. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳು ಬೆಂಗಳೂರಿನ ಬಾಗಲೂರಿನ ಪ್ರಿನ್ಸ್‌ ಇನ್‌ ಹೋಟೆಲ್‌ನಲ್ಲಿ ಇರುವ ಮಾಹಿತಿ ಖಚಿತಪಡಿಸಿಕೊಂಡ ಸಿಐಡಿ ಅಧಿಕಾರಿಗಳು ಅಶ್ವಾಕ್‌, ರಾಹುಲ್‌ ಮೆಹ್ರಾ, ಸುನೀಲ್‌ ಕೇಜ್ರಿವಾಲ್‌, ಜಾಫ‌ರ್‌ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಆಗ, ವಿದೇಶಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕರನ್ನು ಕರೆತಂದು ಅಕ್ರಮವಾಗಿ ಹಣ ವಸೂಲಿ ಮಾಡಲಾಗಿದೆ ಎಂದು ಬಾಯ್ಬಿಟ್ಟಿದ್ದಾರೆ.

– ಮಂಜುನಾಥ್‌ ಲಘುಮೇನಹಳ್ಳಿ
 

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.