ಕಾಂಗ್ರೆಸ್ನಲ್ಲಿ CM ಆಗುವ ಅರ್ಹತೆ ಹಲವು ನಾಯಕರಿಗೆ ಇದೆ:ಸಿದ್ದರಾಮಯ್ಯ
Team Udayavani, Nov 18, 2018, 10:40 AM IST
ಹುಬ್ಬಳ್ಳಿ: ಪಕ್ಷ ನಿರ್ಧರಿಸಿದರೆ ಮುಖ್ಯಮಂತ್ರಿಯಾಗಲು ನಾನು ಸಿದ್ದ ಎನ್ನುವ ಡಿಸಿಎಂ ಡಾ ಜಿ.ಪರಮೇಶ್ವರ್ ಅವರ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಆಗುವ ಅರ್ಹತೆ ಮತ್ತು ಆಕಾಂಕ್ಷೆ ಹಲವು ನಾಯಕರಿಗೆ ಇದೆ ಎಂದಿದ್ದಾರೆ.
ಭಾನುವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಪರಮೇಶ್ವರ್ ಅವರು ಅವಕಾಶ ಸಿಕ್ಕಿದ್ರೆ ಸಿಎಂ ಆಗಲು ಸಿದ್ದ ಎಂದಿದ್ದಾರೆ. ಈಗ ಮೈತ್ರಿ ಸರ್ಕಾರ ಇದೆ, ನಮಗೆ ಬಹುಮತ ಇಲ್ಲ. ಅವರು ಹೇಳಿದ್ದರಲ್ಲಿ ತಪ್ಪಿಲ್ಲ, ಕಾಂಗ್ರೆಸ್ನಲ್ಲಿ ಸಾಕಷ್ಟು ಹಿರಿಯರು ಮತ್ತು ಕಿರಿಯರು ಮುಖ್ಯಮಂತ್ರಿ ಆಗುವ ಕನಸು ಇಟ್ಟುಕೊಂಡಿದ್ದಾರೆ ಎಂದರು.
ರಾಜ್ಯ ಸಚಿವ ಸಂಪುಟ ಶೀಘ್ರದಲ್ಲಿ ವಿಸ್ತರಣೆ ಆಗಲಿದೆ.ಪಂಚ ರಾಜ್ಯಗಳ ಚುನಾವಣೆ ಹಿನ್ನಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭೇಟಿಗೆ ಸಮಯ ಸಿಕ್ಕಿಲ್ಲ. ಅವರ ಭೇಟಿಗೆ ಸಮಯ ನಿಗದಿಯಾದ ತಕ್ಷಣ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದು ಅವರು ಹೇಳಿದರು.
ಕೇಂದ್ರದಿಂದಲೇ ಸಿಬಿಐ ದುರ್ಬಳಕೆ
ಕೇಂದ್ರ ಸರ್ಕಾರವೇ ಸಿಬಿಐ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ರಾಜ್ಯ ಸರ್ಕಾರವನ್ನು ಕೇಳಿ ತನಿಖೆ ಆರಂಭಿಸಬೇಕು, ಆದರೆ ಹಾಗೆ ಮಾಡುತ್ತಿಲ್ಲ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್