ಬೆಳಗಾವಿ:ಕಬ್ಬು ಬೆಳೆಗಾರರ ಹೋರಾಟ ಉಗ್ರ ಸ್ವರೂಪಕ್ಕೆ,ಆಕ್ರೋಶ
Team Udayavani, Nov 18, 2018, 1:26 PM IST
ಬೆಳಗಾವಿ: ಕಬ್ಬಿನ ಬಾಕಿ ಹಣ ನೀಡಲು ಹಿಂದೇಟು ಹಾಕುತ್ತಿರುವುದನ್ನು ಖಂಡಿಸಿ ರೈತರು ಜಿಲ್ಲಾಧ್ಯಂತ ಕಳೆದ ಕೆಲ ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆ ಭಾನುವಾರ ಉಗ್ರ ಸ್ವರೂಪಕ್ಕೆ ತಿರುಗಿದ್ದು , ಸುವರ್ಣ ಸೌಧದ ಆವರಣಕ್ಕೆ ಕಬ್ಬು ತುಂಬಿದ್ದ ಲಾರಿಗಳನ್ನು ನುಗ್ಗಿಸಿ ರೈತರು ಆಕ್ರೋಶ ಹೊರ ಹಾಕಿದ್ದಾರೆ.
ಸುವರ್ಣ ಸೌಧದ ಒಳಗೆ ಕಬ್ಬು ತುಂಬಿದ ಲಾರಿಗಳನ್ನು ನುಗ್ಗಿಸಿ ರೈತರು ತೀವ್ರ ಆಕ್ರೋಶ ಹೊರ ಹಾಕಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಜಾರಕಿಹೊಳಿ, ಜಿಲ್ಲಾಧಿಕಾರಿ ಮತ್ತು ಪೊಲೀಸರ ವಿರುದ್ಧ ಧಿಕ್ಕಾರ ಕೂಗಿದರು.
ನೂರಾರು ರೈತ ಮಹಿಳೆಯರು ಬಿದಿಗಿಳಿದು ಹೋರಾಟ ನಡೆಸುತ್ತಿದ್ದು, ಸರ್ಕಾರದ ಧೋರಣೆ ವಿರುದ್ದ ಧಿಕ್ಕಾರ ಕೂಗಿದ್ದಾರೆ.
ಪ್ರತಿಭಟನೆ ನಡೆಸುತ್ತಿದ್ದ ಹಲವು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ರೈತರ ಬಂಧನದಿಂದ ಇದೀಗ ಹೋರಾಟ ನಿರತರ ಆಕ್ರೋಶ ಇನ್ನೂ ಹೆಚ್ಚಾಗಿದ್ದು ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’