ಕಾಡಿನಿಂದ ನಾಡಿಗೆ ಬರುತ್ತಿರುವ ಚಂಗಡಿ


Team Udayavani, Nov 19, 2018, 6:00 AM IST

wildlife-sanctuary.jpg

ಚಾಮರಾಜನಗರ ಜಿಲ್ಲೆಯ ಅಭಯಾರಣ್ಯ ವ್ಯಾಪ್ತಿಯ ವಿವಿಧ ವನ್ಯಜೀವಿ ಮೀಸಲು ಅರಣ್ಯಗಳಲ್ಲಿ ಪ್ರಾಣಿ ಹಾಗೂ ಮಾನವ ಸಂಘರ್ಷ ತಪ್ಪಿಸಲು ಅರಣ್ಯ ಇಲಾಖೆ ನಿರಂತರ ಪ್ರಯತ್ನದಲ್ಲಿದೆ. ಇದೇ ವೇಳೆ, ತಮ್ಮ ಮೂಲ ನೆಲೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾಡಿನ ನಿವಾಸಿಗಳ ಹೋರಾಟ ಮುಂದುವರಿಯುತ್ತಿದೆ. ಈ ಮಧ್ಯೆ, ಪ್ಲಾಸ್ಟಿಕ್‌ ಹೆಮ್ಮಾರಿಗೆ ಮೂಕ ಪ್ರಾಣಿಗಳು ಬಲಿಯಾಗುತ್ತಿವೆ. ಕಾನನ ಕಾಯುವ ರಕ್ಷಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ಬೆಳಕು ಚೆಲ್ಲುವ ಪ್ರಯತ್ನ “ಉದಯವಾಣಿ’ ಯದು.

ಬೆಂಗಳೂರು: ಕಾಡಿನ ಪ್ರಾಣಿಗಳೊಂದಿಗಿನ ಮಾನವ ಸಂಘರ್ಷ ತಪ್ಪಿಸಲು ಸ್ವಯಂಪ್ರೇರಿತವಾಗಿ ಇಡೀ ಗ್ರಾಮವೊಂದು ಕಾಡಿನಿಂದ ನಾಡಿನೆಡೆಗೆ ಹೆಜ್ಜೆಯಿಡುತ್ತಿದೆ. ಆ ಮೂಲಕ  ಕಾಡಿನ ವಾಸಿಗಳನ್ನು ನಾಡಿಗೆ ಬರುವಂತೆ ಪ್ರೇರಿಸುತ್ತಿದೆ.

ಪ್ರಾಣಿ ಹಾಗೂ ಮಾನವ ನಡುವಿನ ಸಂಘರ್ಷ ತಪ್ಪಿಸುವ ಉದ್ದೇಶದಿಂದ ಅರಣ್ಯ ಇಲಾಖೆ ಕಾಡಿನೊಳಗಿನ ಗ್ರಾಮಗಳೊಂದಿಗೆ ಸಂಧಾನಕ್ಕೆ ಮುಂದಾಗಿದ್ದು, ಕಾಡು ಬಿಟ್ಟು ನಾಡಿಗೆ ಬರುವವರಿಗೆ “ಪುನರ್ವಸತಿ ಯೋಜನೆ’ಯ ಸೌಲಭ್ಯವನ್ನು ಕಲ್ಪಿಸಿದೆ. ಇಲಾಖೆಗೆ ಪ್ರಸ್ತಾವನೆ ಒಪ್ಪಿದ ಮೊದಲ ಗ್ರಾಮ ಎಂಬ ಹೆಗ್ಗಳಿಕೆಗೆ ಮಲೆಮಹದೇಶ್ವರ ವನ್ಯಜೀವನ ಧಾಮದ ಚಂಗಡಿ ಗ್ರಾಮ ಪಾತ್ರವಾಗಿದೆ.

ಬಂಡೀಪುರ, ಬಿಳಿಗಿರಿ ರಂಗನಬೆಟ್ಟ, ಮಲೇ ಮಹದೇಶ್ವರ ಹಾಗೂ ಕಾವೇರಿ ಅಭಯಾರಣ್ಯ ಒಳಗೊಂಡಿರುವ ಚಾಮರಾಜನಗರವು ಕರ್ನಾಟಕದ ವನ್ಯಜೀವಿ ಜಾಲದ ಗಣಿ ಎಂದೇ ಹೆಸರುವಾಸಿಯಾಗಿದೆ. ಇಲ್ಲಿನ ಸುಮಾರು ಎರಡೂವರೆ ಲಕ್ಷ ಹೆಕ್ಟೇರ್‌ ಅರಣ್ಯದಲ್ಲಿ ಪ್ರಾಣಿಗಳ ಜತೆಗೆ ಒಂದಿಷ್ಟು ಗ್ರಾಮಗಳು, ಕಾಡುವಾಸಿ ಸಮುದಾಯಗಳು ಪುರಾತನ ಕಾಲದಿಂದ ನೆಲೆಸಿವೆ.

ಇತ್ತೀಚಿನ ದಿನಗಳಲ್ಲಿ ಗ್ರಾಮಸ್ಥರ ಅನಧಿಕೃತ ಚಟುವಟಿಕೆಗಳಿಂದ ಕಾಡು ಪ್ರಾಣಿಗಳಿಗೆ ತೊಂದರೆಯಾಗುತ್ತಿದೆ. ಅದೇ ರೀತಿ ವನ್ಯಪ್ರಾಣಿಗಳಿಂದಲೂ ಕಾಡುವಾಸಿಗಳ ಹೊಲ, ಮನೆ ಹಾಗೂ ಜೀವಕ್ಕೆ ಹಾನಿಯಾಗುತ್ತಿದೆ. ಜತೆಗೆ ಕಾಡಿನೊಳಗೆ ಜನರ ವಾಸದಿಂದ ಪ್ರಾಣಿಗಳ ಸಂತತಿ ಬೆಳವಣಿಗೆಯಾಗುತ್ತಿಲ್ಲ ಎಂಬ ದೂರುಗಳಿವೆ. ಅದಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಅರಣ್ಯ ಇಲಾಖೆ ಪುನರ್ವಸತಿ ಯೋಜನೆ ರೂಪಿಸಿದೆ.

ಮಲೆ ಮಹಾದೇಶ್ವರ ಬೆಟ್ಟದ ಸುತ್ತಮುತ್ತಲು ಚಂಗಡಿ, ಕೊಕಬರೆ, ತೋಕರೆ, ದೊಡ್ಡಾಣೆ, ಹನೂರು, ತುಳಸಿ ಕೆರೆ, ಮೆದಗಾಣೆ, ನಾಗಮಲೆ ಸೇರಿ ಹಲವು ಗ್ರಾಮಗಳಿವೆ. ಪ್ರಾಣಿಗಳ ಜತೆಗಿನ ಸಂಘರ್ಷ ತಪ್ಪಿಸಲು ಮೊದಲ ಹಂತದಲ್ಲಿ ಅರಣ್ಯ ಸಿಬ್ಬಂದಿ ಗ್ರಾಮಸ್ಥರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ಜನರು ಪೂರ್ವಜರು ಬಾಳಿದ ನೆಲ ತೊರೆದು, ಬೇರೆಡೆ ಹೋದರೆ ನಮಗೆ ಜೀವನ ನಿರ್ವಹಣೆ ಕಷ್ಟ ಎಂಬ ಕಾರಣಕೊಟ್ಟು ಕಾಡಿನಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ.

ಈ ವಿಚಾರದಲ್ಲಿ ಹಲವಾರು ದಿನಗಳಿಂದ ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯುತ್ತಿದ್ದು, ಈ ನಡುವೆ ಚಂಗಡಿ ಗ್ರಾಮಸ್ಥರು ಕಾಡು ತೊರೆದು ನಾಡಿಗೆ ಬರಲು ಸಮ್ಮತಿಸಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ಪುನರ್ವಸತಿ ಹೇಗೆ?
ಕಾಡು ಬಿಟ್ಟು ಬರುವ ಪ್ರತಿ ಕುಟುಂಬಕ್ಕೆ ಸರ್ಕಾರ 15 ಲಕ್ಷ ರೂ.ಗಳಲ್ಲಿ ಪುನರ್ವಸತಿ ಅಥವಾ ಪರಿಹಾರ ನೀಡುತ್ತದೆ. ಅದರಂತೆ ಗ್ರಾಮಸ್ಥರು ನೇರವಾಗಿ 15 ಲಕ್ಷ ರೂ. ಪರಿಹಾರ ಹಣ ಅಥವಾ ಅದೇ ಹಣದಲ್ಲಿ ಸರ್ಕಾರ ವ್ಯಾಪ್ತಿಯ ಜಾಗದಲ್ಲಿ ಮನೆ, ಹೊಲ ಹಾಗೂ ಮೂಲ ಸೌಕರ್ಯ ಕಲ್ಪಿಸಿಕೊಡಲಾಗುತ್ತದೆ. ಪ್ರಸ್ತುತ ಚಂಗಡಿ ಗ್ರಾಮಸ್ಥರು ಪುನರ್ವಸತಿಗೆ ಸಮ್ಮತಿಸಿದ್ದು, 15 ಲಕ್ಷ ರೂ. ನಲ್ಲಿ 5 ಎಕರೆ ಭೂಮಿ, ಒಂದು ಮನೆ, ಉಳಿದ ಹಣವನ್ನು ಗ್ರಾಮಸ್ಥರಿಗೆ ನೀಡಲಾಗುತ್ತಿದೆ.

ಸಮೀಪದ ಹೊಸ ತಾಲೂಕು ಕೇಂದ್ರ ಅನೂರಿನ ಕೊಚ್ಚನೂರು ಗ್ರಾಮಪಂಚಾಯ್ತಿ ಬಳಿ 1,600 ಹೆಕ್ಟರ್‌ ಡೀಮ್ಡ್ ಅರಣ್ಯದಲ್ಲಿ ಜಾಗ ಗುರುತಿಸಿದ್ದು, ಗ್ರಾಮಸ್ಥರು ಖುದ್ದು ಭೇಟಿ ನೀಡಿ ಪರಿಶೀಲಿಸಿ ಒಪ್ಪಿಗೆ ಸೂಚಿಸಿದ್ದಾರೆ. ಇದರೊಂದಿಗೆ ಮುಂದಿನ ದಿನಗಳಲ್ಲಿ ಅವರಿಗೆ ಇತರೆ ಇಲಾಖೆಗಳ ಸಹಾಯದಿಂದ ಅವರಿಗೆ ಸಮರ್ಪಕವಾಗಿ ಪುನರ್ವಸತಿ ಕಲ್ಪಿಸುತ್ತೇವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸಮಾನತೆ ಸಾಮರಸ್ಯ
ಚಂಗಡಿ ಗ್ರಾಮದಲ್ಲಿ 720 ಜನಸಂಖ್ಯೆಯಿದ್ದು, 326 ಮತಗಳಿವೆ. ಎಲ್ಲರೂ ಸಂಪೂರ್ಣ ಕೃಷಿಯನ್ನೇ ಆಧರಿಸಿದ್ದಾರೆ. ಹದಿನೈದು ಇಪ್ಪತ್ತು ಎಕರೆ ಭೂಮಿ, ದೊಡ್ಡ ಮನೆ ಹೊಂದಿರುವವರು ಇದ್ದಾರೆ, ಚಿಕ್ಕ ಗುಡಿಸಲಿನ ಕೂಲಿ ಕೂಲಿ ಮಾಡುವವರೂ ಇದ್ದಾರೆ. ಆದರೆ, ಇವರೆಲ್ಲರೂ ಪುನರ್ವಸತಿ ಯೋಜನೆಯಡಿ ಸಮಾನವಾದ ಭೂಮಿ, ಮನೆಯನ್ನು ಪಡೆಯುವ ಮೂಲಕ ಬಡವ ಶ್ರೀಮಂತ ಎಂಬ ತಾರತಮ್ಯ ಮಾಡದೆ ಸಮಾನವಾಗಿ ಯೋಜನೆಯ ಸೌಲಭ್ಯ ಪಡೆಯಲು ಮುಂದಾಗುತ್ತಿರುದ್ದಾರೆ.

ಗ್ರಾಮದಲ್ಲಿ ಕಾಡುಪ್ರಾಣಿಗಳ ದಾಳಿ ಸಾಮಾನ್ಯ. ಜತೆಗೆ ರಸ್ತೆ ಸೇರಿ ಯಾವುದೇ ಮೂಲಸೌಕರ್ಯಗಳಿಲ್ಲ. ಮಕ್ಕಳು ಶಾಲೆಗೆ ಕಾಡುದಾರಿಯಲ್ಲಿಯೇ 15-20 ಕಿ.ಮೀ ನಡೆದು ಹೋಗಬೇಕಿದೆ. ಕಾಡನ್ನು ನಾವು ದೇವರು ಎಂದು ಭಾವಿಸುತ್ತೇವೆ. ಹೀಗಾಗಿ ಕಾಡು ಹಾಗೂ ಕಾಡಿನ ಪ್ರಾಣಿಗಳನ್ನು ಸಂರಕ್ಷಿಸುವುದು ಕಾಡ ಮಕ್ಕಳಾಗಿ ನಮ್ಮ ಕರ್ತವ್ಯ. ಹೀಗಾಗಿ ಉಳಿದ ಗ್ರಾಮಗಳನ್ನು ನಮ್ಮ ಜತೆ ಬರುವಂತೆ ಮನವೊಲಿಸುತ್ತಿದ್ದೇವೆ.
– ಜಿ.ಕರಿಯಪ್ಪ, ಚಂಗಡಿ ಗ್ರಾಮದ ನಿವಾಸಿ

ವನ್ಯಜೀವ ಹಾಗೂ ಮಾನವ ಸಂಘರ್ಷ ಪರಿಹಾರಕ್ಕಾಗಿ ಅರಣ್ಯ ಇಲಾಖೆ ಪುನರ್ವಸತಿ ಯೋಜನೆ ರೂಪಿಸಿದೆ. ವನ್ಯಜೀವಿ ಸಂರಕ್ಷಣೆಯ ದೃಷ್ಟಿಯಿಂದ ಅರಣ್ಯ ಪ್ರದೇಶದಲ್ಲಿನ ಗ್ರಾಮಗಳನ್ನು ಮತ್ತೂಂದೆಡೆ ವರ್ಗಾಹಿಸುವುದು ಅನಿವಾರ್ಯವಾಗಿದೆ. ಆದರೆ, ಗ್ರಾಮಸ್ಥರು ಪೂರ್ವಜರ ಸ್ಥಳಗಳನ್ನು ಬಿಟ್ಟುಬರಲು ಸಾಕಷ್ಟು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ ಚಂಗಡಿ ಗ್ರಾಮಸ್ಥರ ಮುಂದೆ ಬಂದು ಒಪ್ಪಿಗೆ ಸೂಚಿಸಿದ್ದು, ಈ ಗ್ರಾಮ ಎಲ್ಲರಿಗೂ ಆದರ್ಶವಾಗಲಿದೆ.
-ಏಡುಕೊಂಡಲು, ಉಪ ಅರಣ್ಯ ಸಂರಕ್ಷಣಾಧಿಕಾರಿ, ಮಲೇ ಮಹದೇಶ್ವರ ವನ್ಯಜೀವಿ ಅರಣ್ಯ ವಲಯ.

– ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.