ಇವರು ರೈತರಲ್ಲ ಗೂಂಡಾಗಳು


Team Udayavani, Nov 19, 2018, 6:00 AM IST

181118kpn96.jpg

ಬೆಂಗಳೂರು:  ಬೆಳಗಾವಿಯಲ್ಲಿ ರೈತರ ಹೆಸರಿನಲ್ಲಿ ಪ್ರತಿಭಟನೆ ಮಾಡುವವರು ಗೂಂಡಾಗಳು ಎಂದು ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಸುವರ್ಣಸೌಧ ಗೇಟಿನ ಬೀಗ ಒಡೆದವರು ರೈತರಲ್ಲ. ರೈತರು ಶಾಂತಿ ಪ್ರಿಯರು. ಅವರೆಂದೂ ಹಿಂಸೆಗೆ ಇಳಿಯುವುದಿಲ್ಲ ಎಂದಿದ್ದಾರೆ.

ಬೆಂಗಳೂರು ಕೃಷಿ ವಿವಿಯಲ್ಲಿ ಭಾನುವಾರ ಕೃಷಿ ಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಮೈತ್ರಿ ಸರ್ಕಾರ ರಚನೆಯಾಗಿ ಆರು ತಿಂಗಳೂ ಕಳೆದಿಲ್ಲ. ನಾಲ್ಕು ವರ್ಷದ ಹಿಂದಿನ ಸಮಸ್ಯೆಗೆ ಸರ್ಕಾರದ ವಿರುದ್ಧ ಹೋರಾಟ ಮಾಡುವುದೇಕೆ ಎಂದು ಪ್ರಶ್ನಿಸಿದರು.

ರೈತರು ಶಾಂತಿ ಪ್ರಿಯರು, ಹಳ್ಳಿಗಳಿಗೆ ಜನಪ್ರತಿನಿಧಿಗಳು ಭೇಟಿ ನೀಡಿದಾಗ ನೂರು ಮೀಟರ್‌ ದೂರದಲ್ಲಿ ತಮ್ಮ ಚಪ್ಪಲಿ ಕಳಚಿಟ್ಟು, ಹತ್ತಿರ ಬಂದು ನಮಸ್ಕರಿಸುವ ಔದಾರ್ಯ ರೈತರು ತೋರುತ್ತಾರೆ. ದರೋಡೆಕೋರ ಸಂಸ್ಕೃತಿ ಬೆಳೆಸಿಕೊಂಡವರು ಸುವರ್ಣ ಸೌಧದ ಗೇಟು ಒಡೆದಿದ್ದಾರೆ. ಇಂಥವರನ್ನು ರೈತ ಎಂದು ಕರೆಯಲು ಸಾಧ್ಯವಿಲ್ಲ. ನನ್ನ ತಾಳ್ಮೆಗೂ ಮಿತಿ ಇದೆ. ಇವರು ರೈತರ ಕುಲಕ್ಕೆ ಅವಮಾನ ಮಾಡುವ ಗೂಂಡಾಗಳು ಎಂದರು.

ರೈತರಿಗೆ ಹೊಸ ಬದುಕು ನೀಡಲು ಸರ್ಕಾರ ಇದೆಯೇ ಹೊರತು ಸಮಯ ವ್ಯರ್ಥ ಮಾಡಲು ವಿಧಾನಸೌಧದಲ್ಲಿ ಕುಳಿತಿಲ್ಲ. ಬೆಳಗಾವಿ ಪ್ರತಿಭಟನೆ ಸಂದರ್ಭದಲ್ಲಿ ಹಸಿರು ಶಾಲು ಹಾಕಿಕೊಂಡಿರುವ ಹೆಣ್ಣು ಮಗಳು ನನ್ನ ವಿರುದ್ಧ ಹೇಳಿಕೆ ನೀಡಿದ್ದಾಳೆ. ಅವಳು ಹೊಲಕ್ಕೆ ಹೋಗಿ ಕೆಲಸ ಮಾಡಿದ್ದಾಳ್ಳೋ ಗೊತ್ತಿಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲು ನಾಲಾಯಕ್‌ ಎಂದಿದ್ದಾಳೆ. ನಾಲ್ಕು ವರ್ಷದ ಹಿಂದೆ ಹಣ ನೀಡಿದ ಕಾರ್ಖಾನೆ ಮಾಲೀಕರಿಗೆ ಚುನಾವಣೆ ಸಮಯದಲ್ಲಿ ಓಟು ಕೊಟ್ಟು ಈಗ ಕುಮಾರಸ್ವಾಮಿ ರೈತರಿಗೆ ಹಣ ಕೊಡಸಿಲ್ಲ ಎಂದು ಬೀದಿಗೆ ಬಂದಿದ್ದೀಯಲ್ಲ ತಾಯಿ, ನಾಲ್ಕು ವರ್ಷದಿಂದ ಎಲ್ಲಿ ಮಲಗಿದ್ದೆ ಎಂದು ಹೋರಾಟಗಾರ್ತಿಯನ್ನು ಸಭೆಯಲ್ಲಿ ಪ್ರಶ್ನಿಸಿದರು.

ಮಾತನಾಡುವ ಚಟ, ಬಾಯಿ ಚಪಲ ಇದ್ದರೆ ಮಾತನಾಡಿ. ಸುವರ್ಣ ಸೌಧ, ವಿಧಾನ ಸೌಧದ ಗೇಟು ಮುರಿದವರ ಮೇಲೆ ಕ್ರಮ ತೆಗದುಕೊಳ್ಳುತ್ತೇವೆ. ರೈತರ ಮೇಲೆ ಈ ಸರ್ಕಾರ ಗದಾಪ್ರಹಾರ ಮಾಡಲ್ಲ. ರೈತರಿಗೆ ಸಕಲ ಗೌರವ ನೀಡುತ್ತೇವೆ. ರೈತರ ಹೆಸರು ದುರುಪಯೋಗ ಮಾಡಿಕೊಳ್ಳುವವರಿಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

ಕಾರ್ಖಾನೆ ಮಾಲೀಕರು ಎಫ್ಆರ್‌ಪಿ ಹಣ ನೀಡಿಲ್ಲ ಎಂದು ನನ್ನ ವಿರುದ್ಧ ಪ್ರತಿಭಟನೆ ಮಾಡುವುದು ಏಕೆ? ನಾಲ್ಕು ವರ್ಷದಿಂದ ಮಾಲೀಕರ ವಿರುದ್ಧ ಯಾಕೆ ಪ್ರತಿಭಟನೆ ಮಾಡಿಲ್ಲ. ಇದರಲ್ಲಿ ರಾಜಕೀಯ ಇದೆಯಾ? ಬೆಳೆಗಾವಿ, ಬಾಗಲಕೋಟೆ ಭಾಗದಲ್ಲಿ ರಾಜಕೀಯ ವ್ಯಕ್ತಿಗಳನ್ನು ಶಾಸಕರು, ಮಂತ್ರಿಗಳನ್ನು ಮಾಡಿದ್ದು ನಿಮ್ಮ ತಪ್ಪು, ಇದರಲ್ಲಿ ಕುಮರಸ್ವಾಮಿ ತಪ್ಪು ಏನಿದೆ?  ದುಡ್ಡು ಕೊಡಿಸಿಲ್ಲ ಎಂದು ಈಗ ನಿಮಗೆ ಕುಮಾರಸ್ವಾಮಿ ಜ್ಞಾಪಕಕ್ಕೆ ಬರುತ್ತಿದ್ದಾರೆ ಎಂದು ಪ್ರತಿಭಟನಾಕಾರರ ವಿರುದ್ಧ ವಾಗ್ಧಾಳಿ ನಡೆಸಿದರು.

ಸರ್ಕಾರಕ್ಕೆ ರೈತರ ಬಗ್ಗೆ ಬದ್ಧತೆ ಇದೆ. ಕೋಲಾರದಲ್ಲಿ ಮಾವಿಗೆ ಬೆಲೆ ಸಿಗದೇ ಇದ್ದಾಗ 10 ನಿಮಿಷದಲ್ಲಿ ಸಮಸ್ಯೆ ಪರಿಹಾರ ಮಾಡಿದ್ದೇವೆ. ಬೆಂಬಲ ಬೆಲೆಗಾಗಿ 25 ಕೋಟಿ ರೂ. ತಕ್ಷಣ ಬಿಡುಗಡೆ ಮಾಡಿದ್ದೇವೆ. ರೇಷ್ಮೆ ಬೆಳೆಯುವ ರೈತರಿಗೆ ಅನ್ಯಾಯ ಆದಾಗ ಸಹಾಯಕ್ಕೆ ಬಂದಿದ್ದೇವೆ. ಬಾಗಲಕೋಟೆಯಲ್ಲಿ  ಈರುಳ್ಳಿ ಬೆಲೆಗೆ ಕುಸಿದಾಗ ರೈತರ ಸಂಕಷ್ಟಕ್ಕೆ ಬಂದಿದ್ದೇವೆ ಎಂದರು.

ಮಾಧ್ಯಮದ ವಿರುದ್ಧ ಗರಂ
ಕೆಲವು ಮಾಧ್ಯಮ ಮಿತ್ರರ ಬಗ್ಗೆ ನೋವಿದೆ. ಈ ಸರ್ಕಾರ ಎಷ್ಟು ಬೇಗ ಬೀಳುತ್ತದೋ ಎಂದು ಕಾದು ಕುಳಿತಿದ್ದಾರೆ. 16 ಜನ ಈಗಾಗಲೇ ಹೊರಟಿದ್ದಾರೆ ಎಂದು ತೋರಿಸುತ್ತಿದ್ದಾರೆ. ಆದರೆ, ಆ ಶಾಸಕರ ಬಗ್ಗೆ ಜನರಿಗೆ ಏನು ಅಭಿಪ್ರಾಯ ಬರಬಹುದು. ಸರ್ಕಾರ ಇಳಿಸುವುದು ಬೇರೆ, ಶಾಸಕರು ಜನರ ಮುಂದೆ ಹೋಗದಂತೆ ಮಾಡುತ್ತಿದ್ದೀರಿ. ಹಳ್ಳಿಯ ರೈತರ ಜತೆ ಕೂತು ಅವರ ಸಮಸ್ಯೆ ಬಗೆಹರಿಸಲು ಹೊರಟಿರುವ ಸರ್ಕಾರ ಇದು. ನಾನೇ ಪ್ರತಿಭಟನಾಕಾರರಿಗೆ ದೂರವಾಣಿ ಕರೆ ಮಾಡಿದ್ದೆ, ಯಾರೋ 20-30 ಜನ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಲಾರಿ ಕೆಳಗೆ ಮಲಗಿ ಎಂದು ಮಾಧ್ಯಮದವರೇ ಹೇಳಿ ಸರ್ಕಾರ ವಿರುದ್ಧ ಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಹೆದರುವುದಿಲ್ಲ. ಜನರ ವಿಶ್ವಾಸಕ್ಕಾಗಿ ರಾಜಕಾರಣ ಮಾಡುತ್ತೇವೆ ಎಂದು ಹೇಳಿದರು.

ಕೋಟ್‌ಗಳು ಎಲ್ಲದ್ದಕ್ಕೂ ಹೋಗಿ ಕುಮಾರಸ್ವಾಮಿ ಅವರನ್ನು ಹಿಡಿದುಕೊಂಡರೆ, ಅವರೇನು ಪ್ರಿಂಟ್‌ ಮಾಡುವ ಮೆಷಿನ್‌ ಇಟ್ಟು ಕೊಂಡಿಲ್ಲ. ಕಾರ್ಖಾನೆಗೆ ರೈತರು ತೆಗೆದುಕೊಂಡು ಹೋಗುವ ಕಬ್ಬನ್ನು ತಡೆಯುವುದು ಸರಿಯಲ್ಲ, ಕೇಂದ್ರ ಸರ್ಕಾರ ಮಧ್ಯೆ ಪ್ರವೇಶ ಮಾಡಿ ಬೆಂಬಲ ಬೆಲೆ ನೀಡಲಿ.  
– ಎಚ್‌.ಡಿ. ರೇವಣ್ಣ , ಲೋಕೋಪಯೋಗಿ ಸಚಿವ   

ಕಬ್ಬಿಗೆ ಬೆಂಬಲ ಬೆಲೆ ಬೇಡಿಕೆ ಇಟ್ಟು ಪ್ರತಿಭಟನೆ ಮಾಡಿದ ರೈತರ ಮೇಲೆ ದೌರ್ಜನ್ಯ ಎಸಗಿ, ಬಂಧಿಸಿ, ಜಾಮೀನು ರಹಿತ ಪ್ರಕರಣ ದಾಖಲಿಸುತ್ತಿರುವುದು ಖಂಡನೀಯ. ಕೂಡಲೇ ರೈತರ ಸಮಸ್ಯೆ ಬಗೆಹರಿಸದಿದ್ದರೆ ಬಿಜೆಪಿಯೂ ಬೀದಿಗಿಳಿದು ಹೋರಾಟ ಮಾಡಲಿದೆ.
– ಬಿ.ಎಸ್‌.ಯಡಿಯೂರಪ್ಪ, ಪ್ರತಿಪಕ್ಷ ನಾಯಕ 

ಕಬ್ಬು ಬೆಳೆಗಾರರ ಪ್ರತಿಭಟನೆ ಹಿನ್ನೆಲೆಯಲ್ಲಿ ಸಿಎಂ ಮಂಗಳವಾರ ಬೆಂಗಳೂರಿನಲ್ಲಿ ಸಭೆ ಕರೆದಿದ್ದಾರೆ. ಎಲ್ಲ ರೈತರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸುವಂತೆ ಸಚಿವರು ಹಾಗೂ ಜಿÇÉಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಾವೇನು ಹಿಂದಿನ ಬಿಜೆಪಿ ಸರಕಾರದಂತೆ ರೈತರ ಮೇಲೆ ಗೋಲಿಬಾರ್‌ ಮಾಡಿಲ್ಲ.
-ಎಚ್‌.ಡಿ.ದೇವೇಗೌಡ, ಜೆಡಿಎಸ್‌ ವರಿಷ್ಠ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.