ಕಡತ ವಿಲೇವಾರಿ ಸಪ್ತಾಹ ಯಶಸ್ವಿ: ಆರ್.ವಿ.ದೇಶಪಾಂಡೆ
Team Udayavani, Nov 19, 2018, 6:25 AM IST
ಬೆಂಗಳೂರು:ನೆನಗುದಿಗೆ ಬಿದ್ದಿದ್ದ ಕಡತಗಳ ವಿಲೇವಾರಿಗಾಗಿ ಇಲಾಖೆಯಲ್ಲಿ ಹಮ್ಮಿಕೊಂಡಿದ್ದ ಏಳು ದಿನಗಳ ಕಡತ ವಿಲೇವಾರಿ ಸಪ್ತಾಹ ಯಶಸ್ವಿಯಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಕಡತ ವಿಲೇವಾರಿ ಸಪ್ತಾಹ ಅಂಗವಾಗಿ ಭಾನುವಾರ ರಜಾ ದಿನವೂ ಸಚಿವರ ಕಚೇರಿ ಸೇರಿ ರಾಜ್ಯದ ಎಲ್ಲ ಪ್ರಾದೇಶಿಕ ಆಯುಕ್ತರು ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ, ತಾಲೂಕು ಕಚೇರಿ ಸೇರಿ ಕಂದಾಯ ಇಲಾಖೆಗೆ ಸಂಬಂಧಪಟ್ಟ ಎಲ್ಲ ಕಚೇರಿಗಳು ಕಾರ್ಯನಿರ್ವಹಿಸಿದವು. ಸರ್ಕಾರದ ಎಲ್ಲ ಇಲಾಖೆಗಳ ಆಧಾರ ಸ್ಥಂಭದಂತಿರುವ ಕಂದಾಯ ಇಲಾಖೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂಬ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿತ್ತು ಎಂದು ಹೇಳಿದ್ದಾರೆ.
ಕಡತ ವಿಲೇವಾರಿ ಸಪ್ತಾಹದಲ್ಲಿ ಎಷ್ಟು ಕಡತ ವಿಲೇವಾರಿಯಾಗಿವೆ, ಎಷ್ಟು ಉಳಿದಿವೆ ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಿ ಬಾಕಿ ಉಳಿದಿರುವ ಕಡತಗಳ ವಿಲೇವಾರಿಗೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ