ಬೆಂಗಳೂರಿನ ಟೆಕ್‌ ಸಮಿಟ್‌ನಲ್ಲಿ ಡ್ರೋಣ್‌ ರೇಸ್‌


Team Udayavani, Nov 21, 2018, 6:00 AM IST

w-16.jpg

ಬೆಂಗಳೂರು: ಕಾರು ರೇಸ್‌, ಬೈಕ್‌ ರೇಸ್‌ನಂತೆಯೇ ಈಗ ಬೆಂಗಳೂರಿನಲ್ಲಿ ಡ್ರೋಣ್‌ಗಳ ರೇಸ್‌ ನಡೆಯಲಿದೆ. ಅರಮನೆ ಮೈದಾನದಲ್ಲಿ ನ.29ರಂದು ಮಿಂಚುಹುಳುಗಳಂತೆ ಸುಮಾರು 30 ಡ್ರೋಣ್‌ಗಳು ಸ್ಪರ್ಧೆ ನಡೆಸಲಿವೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಈ ರೀತಿ ಡ್ರೋಣ್‌ ರೇಸ್‌ ನಡೆಯುತ್ತಿದ್ದು, ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ ಡ್ರೋಣ್‌ ತಯಾರಿಕಾ ಕಂಪೆನಿಗಳು ಇದರಲ್ಲಿ ಭಾಗವಹಿಸಲಿವೆ.

ನ.29ರಿಂದ ಡಿ.1ರವರೆಗೆ “ಬೆಂಗಳೂರು ಟೆಕ್‌ ಸಮಿಟ್‌’ ಅಂಗವಾಗಿ ಈ ರೇಸ್‌ ನಡೆಯುತ್ತಿದೆ. ಮೊದಲ ದಿನ ಪ್ರಾಯೋಗಿಕವಾಗಿ ಡ್ರೋಣ್‌ಗಳು ಹಾರಾಟ ನಡೆಸಲಿದ್ದು, ಇದರಲ್ಲಿ 4 ಡ್ರೋಣ್‌ಗಳು ಸೆಮಿಫೈನಲ್‌ಗೆ ಪ್ರವೇಶ ಪಡೆಯುತ್ತವೆ. 30ರಂದು ಅಂತಿಮ ಸುತ್ತಿನ ರೇಸ್‌ ಇರುತ್ತದೆ. ಯುವಕರನ್ನು ಆಕರ್ಷಿಸುವ ಉದ್ದೇಶದಿಂದ ಇದನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ನಿರ್ದೇಶಕಿ ಆರ್‌. ವಿನೋತ್‌ ಪ್ರಿಯಾ ಮಾಹಿತಿ ನೀಡಿದರು. 

ಗಂಟೆಗೆ 120 ಕಿ.ಮೀ. ವೇಗದಲ್ಲಿ ಹಾರಾಟ: ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐಟಿ-ಬಿಟಿ ಇಲಾಖೆ ಸಲಹೆಗಾರ ರಾಜಕುಮಾರ್‌ ಶ್ರೀವಾಸ್ತವ, ರೇಸ್‌ ನಲ್ಲಿ ಭಾಗವಹಿಸುವ ನ್ಯಾನೋ ಡ್ರೋಣ್‌ಗಳು 250 ಗ್ರಾಂಕ್ಕಿಂತ ಕಡಿಮೆ ತೂಕ ಇರಲಿವೆ. ಗಂಟೆಗೆ 120 ಕಿ.ಮೀ. ವೇಗದಲ್ಲಿ ಹಾರಾಟ ನಡೆಸಬಲ್ಲವು. ಪ್ರತಿ ಡ್ರೋಣ್‌ಗೆ 2ರಿಂದ 3 ನಿಮಿಷ ಕಾಲಾವಕಾಶ ನೀಡಲಾಗಿರುತ್ತದೆ.
ಅಷ್ಟರಲ್ಲಿ ಅವುಗಳು ತಮ್ಮ ಸಾಮರ್ಥ್ಯ ಪ್ರದರ್ಶಿಸಲಿವೆ. ಸಾಮಾನ್ಯವಾಗಿ ಒಳಾಂಗಣದಲ್ಲಿ ಡ್ರೋಣ್‌ ರೇಸ್‌ ನಡೆಯತ್ತದೆ. ಹೊರಾಂಗಣದಲ್ಲಿ ಈ ರೀತಿ ನಡೆಯುತ್ತಿರುವುದು ಇದೇ ಮೊದಲು. ಹಾಗಾಗಿ, ತುಂಬಾ ಅದ್ಭುತ ಅನುಭವ ನೀಡಲಿದೆ. ದೂರದರ್ಶನದಲ್ಲಿ ಇದರ ನೇರ ಪ್ರಸಾರ ಕೂಡ ಇರಲಿದೆ ಎಂದು ತಿಳಿಸಿದರು. ಸ್ವಿಡ್ಜರ್‌ಲ್ಯಾಂಡ್‌ನ‌ ನಾಲ್ಕು ಕಂಪೆನಿಗಳು, ಇಸ್ರೇಲ್‌
ಮತ್ತು ಭಾರತದ ತಲಾ ಒಂದು ಕಂಪೆನಿಗಳು ಇದರಲ್ಲಿ ಭಾಗವಹಿಸಲಿವೆ. ಡ್ರೋಣ್‌ ತಯಾರಿಕೆಯಲ್ಲಿ ಜರ್ಮನಿ, ಫ್ರಾನ್ಸ್‌, ಅಮೆರಿಕ, ಚೀನಾ ಮತ್ತಿತರ ದೇಶಗಳು ಕೂಡ ಮುಂಚೂಣಿಯಲ್ಲಿವೆ. ವಿಜೇತರಿಗೆ ಬಹುಮಾನ ಕೂಡ ಇರಲಿದೆ. ಡ್ರೋಣ್‌ಗಳಲ್ಲಿ ಹತ್ತಾರು ಪ್ರಕಾರಗಳಿದ್ದು, ಅವುಗಳ ತೂಕ 250 ಗ್ರಾಂ.ಗಿಂತ ಕಡಿಮೆ ಹಾಗೂ 150 ಕೆಜಿಗಿಂತ ಅಧಿಕವೂ ಆಗಿರುತ್ತವೆ. ವಿವಿಧ ಉದ್ದೇಶಗಳಿಗೆ
ಇವುಗಳನ್ನು ಬಳಸಲಾಗುತ್ತದೆ ಎಂದು ಹೇಳಿದರು. 

ಐಟಿ-ಬಿಟಿ ಮತ್ತು ವಿಜ್ಞಾನ ತಂತ್ರಜ್ಞಾನ ಸಚಿವ ಕೆ.ಜೆ. ಜಾರ್ಜ್‌ ಮಾತನಾಡಿ, ಟೆಕ್‌ ಸಮಿಟ್‌ನಲ್ಲಿ ನೀರು ನಿರ್ವಹಣೆ, ಆರೋಗ್ಯ ಸೇರಿ ಹಲವು ಸವಾಲುಗಳಿಗೆ ತಂತ್ರಜ್ಞಾನಗಳ ಮೂಲಕ ಪರಿಹಾರ ಹುಡುಕುವ ಪ್ರಯತ್ನ ಇದಾಗಿದೆ. ಜತೆಗೆ ನಮ್ಮಲ್ಲಿನ ತಂತ್ರಜ್ಞಾನಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಮೇಳವೂ ಆಗಿದೆ ಎಂದರು. ಇದೇ ವೇಳೆ ಕೇಂದ್ರದಿಂದ ಡ್ರೋಣ್‌ ಕಾರ್ಯಾಚರಣೆಗೆ 
ಸಂಬಂಧಿಸಿದಂತೆ ನೂತನ ನೀತಿ ಬಿಡುಗಡೆ ಆಗಲಿದೆ. ಅದರಲ್ಲಿ ಡ್ರೋಣ್‌ ಬಳಕೆ ಕುರಿತು ಮಾರ್ಗಸೂಚಿಗಳನ್ನು ಸರ್ಕಾರ ನೀಡಲಿದೆ. ಈ ಸ್ಪರ್ಧೆ ಅದರ ದ್ಯೋತಕವಾಗಿ ನಡೆಯಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.