ಕಾವೇರಿ ಪ್ರತಿಮೆ ಸ್ಥಾಪನೆ ಅಪಾಯಕಾರಿ


Team Udayavani, Nov 21, 2018, 6:00 AM IST

w-28.jpg

ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟೆ ಸಮೀಪ ಬೃಹತ್‌ ಕಾವೇರಿ ಪ್ರತಿಮೆ ಸ್ಥಾಪಿಸುವ ರಾಜ್ಯ ಸರ್ಕಾರದ ಪ್ರಸ್ತಾವ ಅವೈಜ್ಞಾನಿಕ ಹಾಗೂ ಅಪಾಯಕಾರಿ ಎಂಬುದು ತಜ್ಞರ ಅಭಿಮತ. ಕೆಆರ್‌ಎಸ್‌ನ ಸುತ್ತ 20 ಕಿ.ಮೀ.ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದ ಈಗಾಗಲೇ ಅಣೆಕಟ್ಟೆಗೆ ಅಪಾಯವಿರುವ ಮುನ್ಸೂಚನೆಯನ್ನು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತನ್ನ ವರದಿಯಲ್ಲಿ ನೀಡಿದೆ. ಇದನ್ನು ಆಧರಿಸಿ ಜಿಲ್ಲಾಡಳಿತ 20 ಕಿ.ಮೀ. ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಣಿ ಚಟುವಟಿಕೆಗಳನ್ನು ಬಂದ್‌ ಮಾಡಿ, ನಿಷೇಧಾಜ್ಞೆ ಜಾರಿಗೊಳಿಸಿದೆ.

ಕೆಆರ್‌ಎಸ್‌ ಅಣೆಕಟ್ಟೆಯನ್ನು ಚಾವಣಿ ವಲಯ (ವಾಲ್ಟ್ ಝೋನ್‌) ಅಂದರೆ, ಭೂಕಂಪನ ವಲಯ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿದೆ. ಆದ್ದರಿಂದ ಯಾವುದೇ ಯೋಜನೆ ಕೈಗೊಳ್ಳುವುದಕ್ಕೂ ಮುಂಚೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅನುಮತಿ, ಸಲಹೆ ಅಗತ್ಯವಿದೆ. ಜೊತೆಗೆ,  ಭಾರತೀಯ ಭೌಗೋಳಿಕ ಸರ್ವೆ ಇಲಾಖೆಯ ಅನುಮತಿಯೂ ಕಡ್ಡಾಯವಾಗಿದೆ. ಸುಪ್ರೀಂಕೋರ್ಟ್‌ ತೀರ್ಪಿನಂತೆ ಜಲಾಶಯ ಈಗಾಗಲೇ ಕಾವೇರಿ ನೀರು ನಿರ್ವಹಣಾ ಮಂಡಳಿ ವ್ಯಾಪ್ತಿಗೆ ಒಳಪಟ್ಟಿದೆ. ಕೇಂದ್ರ ನೀರಾವರಿ ಇಲಾಖೆಯ ಅನುಮತಿಯೂ ಕಾವೇರಿ ಪ್ರತಿಮೆಗೆ ಅತ್ಯವಶ್ಯವಾಗಿದೆ.

“ಡ್ಯಾಮ್‌ ಬ್ರೇಕ್‌’ ಅವಲೋಕನ ನಡೆಸುವ ಅವಶ್ಯಕತೆ ಇದೆ. ಅಣೆಕಟ್ಟು 124 ಅಡಿ ತುಂಬಿದ ನಂತರ, ಎಲ್ಲಾ ಗೇಟ್‌ಗಳನ್ನು ತೆರೆದ ಮೇಲೆ ಹೆಚ್ಚಿನ ನೀರು ಡ್ಯಾಂಗೆ ಹರಿದು ಬಂದರೆ ಬೃಂದಾವನ ಪ್ರದೇಶಕ್ಕೆ ನೀರು ಸೇರುವುದರಿಂದ ಈ ಜಾಗವನ್ನು ಕೆರೆಯ ಅಂಗಳದಂತೆ ನಿರ್ಮಿಸಲಾಗಿದೆ. ಆ ಕಾರಣದಿಂದ ಇಲ್ಲಿ ಕಟ್ಟಡ ಸೇರಿದಂತೆ ಇನ್ನಿತರ ಯೋಜನೆಗಳನ್ನು ಕೈಗೆತ್ತಿಕೊಳ್ಳುವುದಕ್ಕೆ ಅವಕಾಶವೇ ಇರುವುದಿಲ್ಲ.

ಸೂಕ್ಷ್ಮ ಪ್ರದೇಶಕ್ಕೆ ಅಪಾಯ: ಕೆಆರ್‌ಎಸ್‌ ಬಳಿ 125 ಅಡಿಯ ಎತ್ತರದ ಪ್ರತಿಮೆ ನಿರ್ಮಿಸಬೇಕಾದರೆ ಕನಿಷ್ಠ 30 ಅಡಿ ಆಳಕ್ಕೆ ಅಸ್ಥಿಭಾರ ಹಾಕುವ ಅಗತ್ಯವಿದೆ. ಕೆಆರ್‌ಎಸ್‌ ಸುತ್ತಲಿರುವ ಪ್ರದೇಶ ಬಂಡೆಕಲ್ಲುಗಳಿಂದ ಕೂಡಿದ್ದು, ಅಸ್ಥಿಭಾರ ಹಾಕಲು ಬಂಡೆಕಲ್ಲುಗಳನ್ನು ಒಡೆಯಬೇಕು. ಕಲ್ಲು ಬಂಡೆಗಳನ್ನು ಒಡೆಯಬೇಕಾದರೆ ಸ್ಫೋಟಕಗಳನ್ನು ಸಿಡಿಸಲೇಬೇಕು. ಅದನ್ನು ಸಿಡಿಸುವಾಗ ಅಣೆಕಟ್ಟೆಗೆ ಅಪಾಯವಾಗುವುದು ನಿಶ್ಚಿತ. ಡ್ಯಾಂನ ಮೂಗಿನ ಭಾಗವನ್ನು ಜಾರ್ಜ್‌ ಎಂದು ಹೆಸರಿಸಲಾಗಿದ್ದು, ಈ ಭಾಗವು ಅಣೆಕಟ್ಟೆಯ ಕೆಳಭಾಗದಲ್ಲಿದೆ. ಕಾವೇರಿ ಪ್ರತಿಮೆಯಂತಹ ಯೋಜನೆಗಳನ್ನು ನಿರ್ಮಿಸುವುದರಿಂದ ಈ ಸೂಕ್ಷ್ಮ ಪ್ರದೇಶಕ್ಕೆ ಅಪಾಯ ಉಂಟಾಗುವ ಸಾಧ್ಯತೆಗಳು ಹೆಚ್ಚಿವೆ. ಅಲ್ಲದೆ, ಅಣೆಕಟ್ಟೆ ಭದ್ರತೆಯನ್ನು ನೋಡಿಕೊಳ್ಳುತ್ತಿರುವ ಕೇಂದ್ರ ಕೈಗಾರಿಕಾ ವಿಶೇಷ ಪಡೆ ಒಂದು ತಿಂಗಳ ಹಿಂದೆಯಷ್ಟೇ ಕೇಂದ್ರದ ನೀರಾವರಿ ಇಲಾಖೆಗೆ ಪತ್ರ ಬರೆದಿದ್ದು, ಕೆಆರ್‌ಎಸ್‌ ನಿರ್ಬಂಧಿತ ಪ್ರದೇಶವಾಗಿರುವ ಕಾರಣ ಹೆಚ್ಚಿನ
ಜನರನ್ನು ಆಕರ್ಷಿಸುವ ಯೋಜನೆಯನ್ನು ರೂಪಿಸಬಾರದು ಎಂದು ಸಲಹೆ ರವಾನಿಸಿದೆ. ಈ ಎಲ್ಲಾ ಅಂಶಗಳನ್ನು ಕಡೆಗಣಿಸಿ, ಕಾವೇರಿ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿಲುವಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಇದೊಂದು ಜನಾಂದೋಲನವಾಗಿ ರೂಪುಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ.

ಯೋಜನೆ ಏನು?
ನರ್ಮದಾ ನದಿ ತೀರದಲ್ಲಿ ಐಕ್ಯತೆಯ ಪ್ರತೀಕವಾದ ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಪ್ರತಿಮೆ ನಿರ್ಮಿಸಿದ ಮಾದರಿಯಲ್ಲೇ
ರಾಜ್ಯ ಸರ್ಕಾರ ಕೆಆರ್‌ಎಸ್‌ ಬೃಂದಾವನ ಉದ್ಯಾನದಲ್ಲಿ ಕಾವೇರಿ ಪ್ರತಿಮೆ ನಿರ್ಮಾಣಕ್ಕೆ ಯೋಜನೆ ರೂಪಿಸಿದೆ. ಪ್ರತಿಮೆಗೆ ಐಫೆಲ್‌ ಟವರ್‌ನ ರೂಪ ನೀಡಲಾಗುವುದು. ಎಲಿವೇಟರ್‌ ಮೂಲಕ ಪ್ರವಾಸಿಗರನ್ನು ಪ್ರತಿಮೆಯ ಹಂತಕ್ಕೆ ಕರೆದೊಯ್ದು ಸುತ್ತಲಿನ ರಮಣೀಯ ದೃಶ್ಯಾವಳಿ ಹಾಗೂ ಪ್ರತಿಮೆಯ ಮೇಲಿಂದ ನೀರು ಕೆಳಕ್ಕೆ ಬೀಳುವ ಅಪೂರ್ವ ಸೌಂದರ್ಯವನ್ನು ಪ್ರವಾಸಿಗರು ಕಣ್ತುಂಬಿಕೊಳ್ಳುವಂತೆ
ಯೋಜನೆ ರೂಪಿಸಲಾಗಿದೆ. ಮ್ಯೂಸಿಯಂ ಕಾಂಪ್ಲೆಕ್ಸ್‌ ಹಾಗೂ ಅಕ್ಷಿಪಟಲ ಮಾದರಿಯ ಎರಡು ಗಾಜಿನ ಟವರ್‌ಗಳಿಂದ ಕೆಆರ್‌ಎಸ್‌ ಜಲಾಶಯದ ಸೌಂದರ್ಯ ವೀಕ್ಷಣೆಗೆ ಅವಕಾಶ ವನ್ನು ನೀಡಲಾಗುವುದು. ಈ ಯೋಜನೆಯ ಅಂದಾಜು ವೆಚ್ಚ 1,200 ಕೋಟಿ ರೂ. ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ. ಕಾವೇರಿ ಮೇಲೆ ಅಭಿಮಾನವಿದ್ದರೆ ಕೆಆರ್‌ಎಸ್‌ ಅಣೆಕಟ್ಟೆಯಿಂದ ದೂರ ಪ್ರತಿಮೆ ನಿರ್ಮಾಣ ಮಾಡಲಿ. ಕೆಆರ್‌ಎಸ್‌ ಬುಡದಲ್ಲೇ ಮಾಡಲುದ್ದೇಶಿಸಿರುವ
ಯೋಜನೆ ಮೂರ್ಖತನದ್ದು. ಮೂರ್ತಿ ಸ್ಥಾಪಿಸಲು ಅಸ್ಥಿಭಾರಕ್ಕೆ ಬಂಡೆಗಳನ್ನು ಒಡೆಯಬೇಕು. ಸ್ಫೋಟಕಗಳನ್ನು ಸಿಡಿಸದೆ
ಬಂಡೆಗಳನ್ನು ಒಡೆಯಲಾಗದು. ಅದರಿಂದ ಅಣೆಕಟ್ಟೆಗೆ ಅಪಾಯವಾಗುವುದು ಖಚಿತ.
● ಎಂ.ಲಕ್ಷ್ಮಣ್‌, ಕಾವೇರಿ ತಾಂತ್ರಿಕ ಸಲಹಾ ಸಮಿತಿ.

ಇದು ಜನಸಾಮಾನ್ಯರ ಬೇಡಿಕೆಯಲ್ಲ. ಇದಕ್ಕೆ ತಗಲುವ ವೆಚ್ಚವನ್ನು ಕಾವೇರಿ ಕಣಿವೆ ಪ್ರದೇಶದ ಕೆರೆಗಳನ್ನು ತುಂಬಿಸಲು ಬಳಸಲಿ. ತಮಿಳುನಾಡಿಗೆ ವ್ಯರ್ಥವಾಗಿ ಹರಿಯುವ ನೀರನ್ನು ಹಿಡಿದಿಡುವುದರಿಂದ ಅಂತರ್ಜಲ ವೃದಿಟಛಿಯಾಗುತ್ತದೆ. ಒಳಚರಂಡಿ ನೀರು ಸೇರಿ ಮಲಿನಗೊಳ್ಳುತ್ತಿರುವ ಕಾವೇರಿಯನ್ನು ಶುದ್ಧಿಕರಣಗೊಳಿಸಲು ಯೋಜನೆಗಳು ರೂಪುಗೊಳ್ಳಬೇಕು.
● ಪ್ರೊ.ಹೆಚ್‌.ಟಿ.ಬಸವರಾಜಪ್ಪ, ಅರ್ಥ್ಸೈನ್ಸ್‌ ವಿಭಾಗದ ಮುಖ್ಯಸ್ಥರು, ಮಾನಸಗಂಗೋತ್ರಿ

ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.