ತಾತ್ಕಾಲಿಕ ಶಮನ: ಕಬ್ಬು ಬಾಕಿ ಹಣ ಕೊಡುವ ಭರವಸೆ ನೀಡಿದ ಸರಕಾರ


Team Udayavani, Nov 21, 2018, 6:00 AM IST

w-30.jpg

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರಕಾರಕ್ಕೆ ದೊಡ್ಡ ತಲೆನೋವಾಗಿದ್ದ ಕಬ್ಬಿನ ಬಾಕಿ ಹಣ ಕೊಡಿಸುವ ವಿಚಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ತತ್‌ಕ್ಷಣಕ್ಕೆ ರೈತರನ್ನು ಸಮಾ ಧಾನ ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಕಾರ್ಖಾನೆ ಮಾಲಕರ ಪ್ರತಿನಿಧಿಗಳು ಬಾಕಿ ಕೊಡುವ ವಿಚಾರದಲ್ಲಿ ಸರಕಾರದ ಸೂಚನೆಗೆ ಇನ್ನೂ ಸಮ್ಮತಿ ಸೂಚಿಸಿಲ್ಲ. ಈ ಹಿನ್ನೆಲೆಯಲ್ಲಿ ಗುರುವಾರ (ನಾಡಿದ್ದು ) ಮತ್ತೂಮ್ಮೆ ಕಾರ್ಖಾನೆ ಮಾಲಕರ ಜತೆ ಸಭೆ ನಡೆಸಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹೋರಾಟದಿಂದ ಹಿಂದೆ ಸರಿಯುವ ಬಗ್ಗೆ ರೈತರು ಭರವಸೆ ನೀಡಿದ್ದಾರೆ. 

ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲಕರ ಪ್ರತಿನಿಧಿಗಳ ಜತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸತತ ಆರು ಗಂಟೆಗಳ ಕಾಲ ಚರ್ಚೆ ನಡೆಸಿದರು. ಸಭೆಯಲ್ಲಿ ಕಳೆದ ವರ್ಷ ಕಾರ್ಖಾನೆ ಮಾಲಕರು ನೀಡಿದ ಭರವಸೆಯಂತೆ ಪ್ರತಿ ಟನ್‌ಗೆ 2,900 ರೂ. ದರ ಕೊಡಿಸು ವಂತೆ ರೈತರು ಪಟ್ಟು ಹಿಡಿದರು. ಆದರೆ ರೈತರ ವಾದ ಒಪ್ಪದ ಸಕ್ಕರೆ ಕಾರ್ಖಾನೆ ಮಾಲಕರ ಪ್ರತಿನಿಧಿಗಳು ಈ ಬಗ್ಗೆ ಯಾವುದೇ ಒಪ್ಪಂದವಾಗಿಲ್ಲ. ಕಾರ್ಖಾನೆಗಳು ನಷ್ಟದಲ್ಲಿರುವುದರಿಂದ ಹೆಚ್ಚಿನ ಹಣ ನೀಡಲು ಆಗುವುದಿಲ್ಲ ಎಂದು ಹೇಳಿದರು. 

ಮಾತಿನ ಚಕಮಕಿ
ರೈತರು ಮತ್ತು ಕಾರ್ಖಾನೆ ಮಾಲಕರ ನಡುವೆ ಕಬ್ಬು ಕಟಾವು ಸಂದರ್ಭದಲ್ಲಿ ಮಾತುಕತೆಯ ಮೂಲಕ ಒಪ್ಪಂದ ಆಗಿದೆ. ಮಾಲಕರ ಮೇಲಿನ ನಂಬಿಕೆ ಮೇಲೆ ಆಗಿರುವ ಮಾತುಕತೆ ಇದಾಗಿದ್ದು, ಕೊಟ್ಟ ಮಾತಿನಂತೆ ನಡೆದುಕೊಳ್ಳ ಬೇಕು ಎಂದು ರೈತರು ಆಗ್ರಹಿಸಿದರು. ಈ ಸಂದರ್ಭದಲ್ಲಿ ರೈತರು ಮತ್ತು ಮಾಲಕರ ಪ್ರತಿನಿಧಿಗಳ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ತಿಳಿದು ಬಂದಿದೆ. ಆಗ ಮುಖ್ಯಮಂತ್ರಿ ಕುಮಾರಸ್ವಾಮಿ ಮಧ್ಯ ಪ್ರವೇಶಿಸಿ, ರೈತರು ಹಾಗೂ ಕಾರ್ಖಾನೆ ಮಾಲಕರ ನಡುವೆ ಆಗಿರುವ ಒಪ್ಪಂದದಂತೆ ರೈತರಿಗೆ ಬಾಕಿ ಹಣ ಕೊಡುವಂತೆ ಕಾರ್ಖಾನೆ ಮಾಲಕರಿಗೆ ಸೂಚಿಸಿದರು. ಇದಕ್ಕೆ ಉತ್ತರಿಸಿದ ಕಾರ್ಖಾನೆ ಪ್ರತಿನಿಧಿಗಳು ತಾವು ಇಲ್ಲಿಯೇ ತೀರ್ಮಾನ ತೆಗೆದುಕೊಳ್ಳಲು ಆಗುವುದಿಲ್ಲ. ಮಾಲಕರ ಜತೆ ಚರ್ಚಿಸಿ ನಿರ್ಧರಿಸಬೇಕಾಗುತ್ತದೆ ಎಂದು ಜಾರಿಕೊಂಡರು.

ಸರಕಾರದ ವಿರುದ್ಧ ಬಿಜೆಪಿಯವರು ಪ್ರತಿಭಟನೆ ಮಾಡಿದರೆ ಸ್ವಾಗತಿಸುತ್ತೇನೆ. ಸರಕಾರದ ಸಭೆಗೆ ಕಾರ್ಖಾನೆ ಮಾಲಕರು ಗೈರು ಹಾಜರಾದರೆ ಕ್ರಮ ಕೈಗೊಳ್ಳುವ ಶಕ್ತಿ ಸರಕಾರಕ್ಕಿದೆ. ಕಳೆದ 8 ವರ್ಷಗಳಿಂದ ಪ್ರತಿಭಟನೆ ನಡೆಸಿದ ರೈತರ ಮೇಲಿನ ಪ್ರಕರಣಗಳನ್ನು ವಾಪಸ್‌ ಪಡೆಯಲು ಸಂಪುಟದಲ್ಲಿ ನಿರ್ಧರಿಸಲಾಗುವುದು. 
ಎಚ್‌.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ.

ಸಿಎಂ ಕುಮಾರಸ್ವಾಮಿ ರೈತರ ಬೇಡಿಕೆಗಳಿಗೆ ಸ್ಪಂದಿಸಿ ಬಾಕಿ ಹಣ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ಕೇಂದ್ರ ಸರಕಾರ ಕಬ್ಬಿನ ಇಳುವರಿ ಪ್ರಮಾಣವನ್ನು 9.5 ರಿಂದ 10ಕ್ಕೆ ಏರಿಸಿ ಎಫ್ಆರ್‌ಪಿ ದರ ನಿಗದಿ ಮಾಡಿರುವುದರಿಂದ ರೈತರಿಗೆ ನಷ್ಟವಾಗುತ್ತದೆ. ಅದನ್ನು ಕೈ ಬಿಡುವಂತೆ ಪ್ರಧಾನಿ ಬಳಿ ನಿಯೋಗ ತೆಗೆದುಕೊಂಡು ಹೋಗಬೇಕು.
ಕೆ.ಟಿ ಗಂಗಾಧರ, ರೈತ ಮುಖಂಡ

ಪ್ರಮುಖರ ಗೈರು 
ಬೆಳಗಾವಿ ಸುವರ್ಣಸೌಧ ಮುಂದೆ ಪ್ರತಿಭಟನೆ ಮಾಡಿದ್ದ ರೈತರು ಮುಖ್ಯಮಂತ್ರಿ ಕರೆದಿದ್ದ ಸಭೆಗೆ ಗೈರು ಹಾಜರಾಗಿದ್ದರು. ವಿಧಾನಸೌಧದ ಸಭೆಯಲ್ಲಿ ಭಾಗವಹಿಸುವಂತೆ ಅಲ್ಲಿನ ಜಿಲ್ಲಾಧಿಕಾರಿಗಳು ಮನವಿ ಮಾಡಿದರೂ ಮುಖ್ಯಮಂತ್ರಿಯವರೇ ಇಲ್ಲಿಗೆ ಬಂದು ನಮ್ಮ ಜತೆ ಮಾತನಾಡಲಿ ಎಂದು ಬರಲು ನಿರಾಕರಿಸಿದರು ಎಂದು ಹೇಳಲಾಗಿದೆ. ಸಭೆಗೆ ಶಾಸಕ ಸೀಮಂತ್‌ ಪಾಟೀಲ್‌ ಹೊರತುಪಡಿಸಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್‌ ಜಾರಕಿಹೊಳಿ ಸಹಿತ ಬಹುತೇಕ ಜನಪ್ರತಿನಿಧಿಗಳು ಗೈರು ಹಾಜರಾಗಿದ್ದರು. ಸಕ್ಕರೆ ಕಾರ್ಖಾನೆ ಮಾಲಕರು ಹಾಜರಾಗದೇ ತಮ್ಮ ಪ್ರತಿನಿಧಿಗಳನ್ನು ಸಭೆಗೆ ಕಳುಹಿಸಿದ್ದರು.

ಪ್ರಮುಖ ನಿರ್ಣಯಗಳು
ಕಳೆದ ವರ್ಷದ ಬಾಕಿ ಹಣ ಕೊಡಿಸುವುದು.
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ರೈತರೊಂದಿಗೆ ಮತ್ತೂಂದು ಸಭೆ ನಡೆಸುವುದು.
ಕಾರ್ಖಾನೆ ಮಾಲಕರ ನಿಯಂತ್ರಣಕ್ಕೆ ಸೂಕ್ತ ಕಾನೂನು ತಿದ್ದುಪಡಿ
ಈ ವರ್ಷದ ಬೆಲೆ 2,750 ಎಫ್ಆರ್‌ಪಿ ದರ ಮೊದಲ ಕಂತಿನಲ್ಲಿ ನೀಡುವುದು.
22ರಂದು ಈರುಳ್ಳಿ, ಭತ್ತ, ಜೋಳಕ್ಕೆ ಬೆಂಬಲ ಬೆಲೆ ಘೋಷಣೆ. 
ಮಹಾರಾಷ್ಟ್ರ, ಗುಜರಾತ್‌ ಮಾದರಿ ಅಧ್ಯಯನಕ್ಕೆ ತಂಡ ಕಳಿಸಲು ನಿರ್ಧಾರ

ಟಾಪ್ ನ್ಯೂಸ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.