ಕಾಮುಕ ಶಿಕ್ಷಕ ಕೊನೆಗೂ ಆದ ಜೈಲು ಪಾಲು
Team Udayavani, Nov 22, 2018, 6:05 AM IST
ಕೊಪ್ಪಳ: ಮಕ್ಕಳಿಗೆ ತಿದ್ದಿ ಬುದ್ಧಿ ಹೇಳಬೇಕಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನೀಡಿ ಪೋಕೊÕà ಪ್ರಕರಣದಲ್ಲಿ ಜೈಲು ಕಂಬಿ ಎಣಿಸುತ್ತಿದ್ದಾನೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗೆದಗೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಶಿಧರ ಹಿರೇಮಠ, ವಿದ್ಯಾರ್ಥಿನಿಯರಿಗೆ ದೈಹಿಕ ಕಿರುಕುಳ ನೀಡುತ್ತಿದ್ದ ಆರೋಪ ಎದುರಿಸುತ್ತಿದ್ದ. ಈ ಮಾಹಿತಿ ಅರಿತ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ತಂಡವು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರಿಂದ ಹಾಗೂ ಶಾಲಾ ಶಿಕ್ಷಕ ವರ್ಗದಿಂದ ಮಾಹಿತಿ ಪಡೆದು ಜಿಲ್ಲಾಡಳಿತ, ರಾಜ್ಯ ಮಕ್ಕಳ ರಕ್ಷಣಾ ಘಟಕಕ್ಕೆ ವರದಿ ನೀಡಿತ್ತು. ಇಷ್ಟಾದರೂ ಶಿಕ್ಷಕನ ಮೇಲೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಯಲಬುರ್ಗಾ ಬಿಇಒ ಕೇವಲ ಒಂದೇ ದಿನ ಈತನನ್ನು ಅಮಾನತು ಮಾಡಿ ಮತ್ತೆ ವಿದ್ಯಾರ್ಥಿನಿಯರು ಇರುವ ಚಿಕ್ಕ ಮ್ಯಾಗೇರಿ ಶಾಲೆಗೆ ನಿಯೋಜನೆ ಮಾಡಿದ್ದರು. ಗಂಭೀರವಾಗಿ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣಾ ಘಟಕವು ರಾಜ್ಯ ಮಕ್ಕಳ ರಕ್ಷಣಾ ಆಯೋಗಕ್ಕೆ ವರದಿ ಮಾಡಿತ್ತು.
ವರದಿಯಿಂದ ಎಚ್ಚೆತ್ತ ಆಯೋಗವು ಬಿಇಒ ಮೂಲಕ ಶಿಕ್ಷಕನ ಮೇಲೆ ಪ್ರಕರಣ ದಾಖಲಿಸಿದೆ. ಪೊಲೀಸರು ಶಿಕ್ಷಕ ಶಶಿಧರಯ್ಯ ಹಿರೇಮಠ ನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
ಹಲವು ವಿದ್ಯಾರ್ಥಿನಿಯರಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಮಾಹಿತಿ ಸ್ಥಳಕ್ಕೆ ಭೇಟಿ ನೀಡಿದ ವೇಳೆ ತಿಳಿದು ಬಂದಿದೆ. ವಿವಿಧ ಮಾಹಿತಿಯ ಆಧಾರದ ಮೇಲೆ ನಾವು ಜಿಲ್ಲಾಧಿಕಾರಿ ಸೇರಿದಂತೆ ಆಯೋಗಕ್ಕೆ ಪತ್ರ ಬರೆದು ಕ್ರಮಕ್ಕೆ ಒತ್ತಾಯಿಸಿದ್ದೆವು.
– ನಿಲೋಪರ್ ರಾಂಪೂರಿ, ಮಕ್ಕಳ ಕಲ್ಯಾಣ
ಸಮಿತಿ ಅಧ್ಯಕ್ಷೆ, ಕೊಪ್ಪಳ