ನಾಡೋಜ ಕಣವಿಗೆ ಕೆಎಸ್ಎನ್ ಪ್ರಶಸ್ತಿ
Team Udayavani, Nov 22, 2018, 6:25 AM IST
ಧಾರವಾಡ: ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್ ನೀಡುವ 2018ನೇ ಸಾಲಿನ ಕೆಎಸ್ಎನ್ ಪ್ರಶಸ್ತಿಗೆ ಹಿರಿಯ ಕವಿ, ನಾಡೋಜ ಡಾ.ಚನ್ನವೀರ ಕಣವಿ ಹಾಗೂ ಕೆಎಸ್ಎನ್ ಕಾವ್ಯ ಗಾಯನ ಪ್ರಶಸ್ತಿಗೆ ಹಿರಿಯ ಗಾಯಕಿ, ಅನುರಾಧಾ ಧಾರೇಶ್ವರ ಭಾಜನರಾಗಿದ್ದಾರೆ.
ತಲಾ 25 ಸಾವಿರ ರೂ.ನಗದು ಬಹುಮಾನ, ಸ್ಮರಣಿಕೆ ಒಳಗೊಂಡ ಈ ಪ್ರಶಸ್ತಿ ಪ್ರದಾನ ಸಮಾರಂಭ ಧಾರವಾಡದ ಆಲೂರು ವೆಂಕಟರಾವ್ ಸಭಾಭವನದಲ್ಲಿ ನ.25ರಂದು ಸಂಜೆ 5:30ಕ್ಕೆ ನೆರವೇರಲಿದೆ.
ಬುಧವಾರ ಈ ಕುರಿತು ಮಾಹಿತಿ ನೀಡಿದ ಟ್ರಸ್ಟ್ ಕಾರ್ಯದರ್ಶಿ ಡಾ| ಕಿಕ್ಕೇರಿ ಕೃಷ್ಣಮೂರ್ತಿ,ಸಂಶೋಧಕ ಪ್ರೊ|ಷ.ಶೆಟ್ಟರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಟ್ರಸ್ಟ್ ಅಧ್ಯಕ್ಷ ಡಾ| ನರಹಳ್ಳಿ ಬಾಲ ಸುಬ್ರಹ್ಮಣ್ಯಂ ಅಧ್ಯಕ್ಷತೆ ವಹಿಸಲಿದ್ದು, ಕವಿಯತ್ರಿ ಹೇಮಾ ಪಟ್ಟಣಶೆಟ್ಟಿ ಹಾಗೂ ವಿಮರ್ಶಕ ಶ್ರೀಧರ ಹೆಗಡೆ ಭದ್ರನ್ ಅವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.
ಪ್ರಶಸ್ತಿ ಪುರಸ್ಕೃತರ ಕುರಿತು ಪರಿಚಯ ಪುಸ್ತಕಗಳು ಬಿಡುಗಡೆಗೊಳ್ಳಲಿದ್ದು, ಇವುಗಳ ಲೇಖಕರಾದ ವಿಕ್ರಮ ವಿಸಾಜಿ, ಪ್ರಜ್ಞಾ ಮತ್ತಿಹಳ್ಳಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ, ಕೆಎಸ್ನ ಕಾವ್ಯ ಗಾಯನ ನಡೆಯಲಿದ್ದು, ಶ್ರೀಕಾಂತ ಕುಲಕರ್ಣಿ, ಮಹಾನಂದ, ಚೈತ್ರ ಬೆಟಗೇರಿ, ಶ್ರೀನಿವಾಸ ಉಡುಪ ಸೇರಿದಂತೆ ತಂಡದವರಿಂದ ಗಾಯನ ಜರುಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ