ಮಣ್ಣಿನಡಿ ಕೊನೆಗೂ ಸಿಕ್ತು ಹಣ, ಚಿನ್ನಾಭರಣ
Team Udayavani, Nov 23, 2018, 6:45 AM IST
ಮಡಿಕೇರಿ: ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡ ನೂರಾರು ಕುಟುಂಬಗಳು ಇಂದಿಗೂ ಬದುಕು ಕಟ್ಟಿಕೊಳ್ಳಲು ಹರಸಾಹಸ ಪಡುತ್ತಿವೆ. ಮಹಾಮಳೆಗೆ ಕುಸಿದ ಬೆಟ್ಟದ ಮಣ್ಣಿನ ರಾಶಿಯಡಿ ಸಿಲುಕಿಕೊಂಡ ಮನೆಗಳ ಅವಶೇಷಗಳಡಿಯಲ್ಲಿ ಹೂತುಹೋಗಿರುವ ವಸ್ತುಗಳಿಗಾಗಿ ಹುಡುಕಾಟ ನಡೆಯುತ್ತಲೇ ಇದೆ.
ಹೆಬ್ಬೆಟ್ಟಗೇರಿ ಗ್ರಾಮದಲ್ಲಿ ಆಗಸ್ಟ್ 16ರ ಬೆಳಗ್ಗೆ 7.45 ಸುಮಾರಿಗೆ ಜಲಸ್ಫೋಟದೊಂದಿಗೆ ಭಾರೀ ಬೆಟ್ಟ ಕುಸಿದು ಮನೆಯೊಂದರ ಮೇಲೆ ಬಿದ್ದ ಪರಿಣಾಮ ಮನೆಯೊಳಗಿದ್ದ ವೃದೆಟಛಿಯೊಬ್ಬರು ಭೂ ಸಮಾಧಿಯಾಗಿದ್ದರು. ಇದೇ ಮನೆಯೊಳಗಿದ್ದ ಮಿನ್ನಂಡ ಗಣಪತಿ ಮತ್ತವರ ಕುಟುಂಬ ಸದಸ್ಯರು ಪವಾಡದ ರೀತಿಯಲ್ಲಿ ಜೀವ ಉಳಿಸಿಕೊಂಡಿದ್ದರು. ಆದರೆ ಕಣ್ಣೇದುರೇ ಹೂತು ಹೋದಹೆತ್ತಾಕೆಯನ್ನು ಹೊರಗೆಳೆಯಲು 40 ಅಡಿ ಎತ್ತರದ ಕೆಸರಿನ ಪ್ರವಾಹ ಬಿಡಲಿಲ್ಲ. ಈ ದುರ್ಘಟನೆ ನಡೆದ 7 ದಿನಗಳ ಬಳಿಕ ರಕ್ಷಣಾ ಕಾರ್ಯಚರಣೆ ನಡೆಸಿ ಉಮ್ಮವ್ವ ಅವರ ದೇಹವನ್ನು ಹೊರ ತೆಗೆಯಲಾಗಿತ್ತು.
ಆದರೆ ಕಳೆದ 6 ತಿಂಗಳ ಹಿಂದೆ ಗೃಹ ಪ್ರವೇಶವಾಗಿದ್ದ ಮಿನ್ನಂಡ ಗಣಪತಿ ಅವರ 15 ಲಕ್ಷ ರೂ. ಮನೆ ಸಂಪೂರ್ಣ ನೆಲಕಚ್ಚಿತ್ತು. ಉಟ್ಟ ಬಟ್ಟೆ, ಖಾಲಿ ಹೊಟ್ಟೆಯಲ್ಲೇ ಬಂಧುಗಳ ಮನೆಯಲ್ಲಿ ಆಶ್ರಯ ಪಡೆದ ಗಣಪತಿ ಕುಟುಂಬ ಕಳೆದೆರಡು ದಿನಗಳಿಂದ ಜೆಸಿಬಿ ಯಂತ್ರದಲ್ಲಿ ನಾಮಾವಶೇಷಗೊಂಡ ಮನೆಯಿಂದ ಅಳಿದುಳಿದ ವಸ್ತುಗಳನ್ನು ಹುಡುಕುವ ಪ್ರಯತ್ನ ನಡೆಸಿತು.
ನೀರು ಪಾಲಾದ ಸ್ಥಿತಿಯಲ್ಲಿದ್ದ 2 ಕ್ವಿಂಟಾಲ್ ಕರಿಮೆಣಸು, ಹರಿದ ಬಟ್ಟೆಗಳು,ಮುರಿದ ಮಂಚ, ಕೆಸರು ಮೆತ್ತಿಕೊಂಡ ಕೆಲವು ದಾಖಲೆಗಳು ಸಿಕ್ಕಿದ್ದವು. ಶೋಧ ಮುಂದುವರಿಸುತ್ತಿದ್ದಂತೆಯೇ ಅಮ್ಮವ್ವ ಅವರ 1 ಚಿನ್ನದ ಉಂಗುರ, 1 ಜೊತೆ ಓಲೆ,ತಿಂಗಳ ಖರ್ಚಿಗೆಂದು ಮನೆಯಲ್ಲಿಟ್ಟದ್ದ 10 ಸಾವಿರ ರೂ. ನಗದು ಕೆಸರು ಮೆತ್ತಿದ ಸ್ಥಿತಿಯಲ್ಲಿ ಮಣ್ಣಿನಡಿಯಲ್ಲಿ ಪತ್ತೆಯಾದವು.
ಕೊಡವ ಸಂಪ್ರದಾಯದ ತೆಂಗಿನ ಎಣ್ಣೆಯ 2 ಬಟ್ಟಲು, ಮುರಿದು ತುಂಡರಿಸಲ್ಪಟ್ಟ ಸ್ಥಿತಿಯಲ್ಲಿದ್ದ ಜೋಡಿ ನಳಿಕೆಯ 1 ಜಮ್ಮಾ ಬಂದೂಕು, ಅಡುಗೆ ಸಿಲಿಂಡರ್ ಮತ್ತು ಬೆಳ್ಳಿಯ ಪೀಚೆಕತ್ತಿ ಮಾತ್ರ ಈ ಬಡ ನಿರ್ವಸತಿಕ ಕುಟುಂಬದ ಪಾಲಾಯಿತು. ಈ ಸಂದರ್ಭ ಮಾತನಾಡಿದ ಉಮ್ಮವ್ವ ಅವರ ಪುತ್ರ ಮಿನ್ನಂಡ ಗಣಪತಿ. “ನಮಗೆ ಬಂದಂತ ಸ್ಥಿತಿ ಮತ್ತಾರಿಗೂ ಬಾರದಿರಲಿ. ಕಣ್ಣ ಮುಂದೆಮಣ್ಣಿನಡಿ ಹೂತು ಹೋದ ತಾಯಿಯ ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ, ದುಡಿದು ಕಟ್ಟಿದ ಮನೆಯೂ ಉಳಿಯಲಿಲ್ಲ.
ಮನೆ ನಾಶವಾದ ಹಿನ್ನೆಲೆಯಲ್ಲಿ ಸರಕಾರ 1.2 ಲಕ್ಷ ರೂ. ಹಣ, ಗಂಜಿ ಕೇಂದ್ರದಲ್ಲಿದ್ದ ಸಂದರ್ಭ 3,800ರೂ. ಪರಿಹಾರ ಮತ್ತು ವಿವಿಧ ಸಂಘ-ಸಂಸ್ಥೆಗಳು ನಮ್ಮ ನೆರವಿಗೆ ಬಂದಿವೆ. ಸರಕಾರ ಸಾಧ್ಯವಾದಷ್ಟು ಬೇಗ ನಮ್ಮಂತ ನಿರಾಶ್ರಿತರಿಗೆ ಮನೆ ಕಟ್ಟಿಕೊಡಬೇಕು’ ಎಂದು ಹೇಳಿದರು.
ಮಹಾಮಳೆಗೆ ಸಿಲುಕಿ ಬೀದಿಪಾಲಾದ ನೂರಾರು ಕುಟುಂಬಗಳು ಇಂದಿಗೂ ಅತಂತ್ರ ಸ್ಥಿತಿಯಲ್ಲೇ ಜೀವನ ಸಾಗಿಸುತ್ತಿದ್ದು,ಕಳೆದು ಹೋದ ಬದುಕನ್ನು ಹುಡುಕುವ ಪ್ರಯತ್ನದಲ್ಲೇ ದಿನ ದೂಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ