ರೈತರ ಆತ್ಮಹತ್ಯೆ: ತಂದೆ ರಕ್ಷಿಸಲು ಮುಂದಾದ ಮಗನೂ ನೀರುಪಾಲು
Team Udayavani, Nov 23, 2018, 6:50 AM IST
ಎನ್.ಆರ್.ಪುರ/ಬಂಕಾಪುರ: ರಾಜ್ಯದ ವಿವಿಧೆಡೆ ಸಾಲಬಾಧೆಗೆ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ತಂದೆಯನ್ನು ರಕ್ಷಿಸಲು ಹೋದ ಯುವಕನೂ ನೀರು ಪಾಲಾದ ಘಟನೆ ನಡೆದಿದೆ.
ಎನ್.ಆರ್.ಪುರ ತಾಲೂಕಿನ ಹೊನ್ನೇಕುಡಿಗೆ ಗ್ರಾಮದ ತಿಮ್ಮಣ್ಣಗೌಡ (54) ಎಂಬುವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದಾಗ, ತಂದೆ ರಕ್ಷಿಸಲು ಹೋದ ಪುತ್ರ ಅಭಿಷೇಕ್ (24) ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ತಿಮ್ಮಣ್ಣ ಗೌಡ ಸಾಲೂರು ಗ್ರಾಮದಲ್ಲಿ 2 ಎಕರೆ ಜಮೀನು ಹೊಂದಿದ್ದು, ಕೃಷಿ ಕಾರ್ಯಕ್ಕಾಗಿ ಎನ್.ಆರ್. ಪುರದ ರಾಷ್ಟ್ರೀಕೃತ ಬ್ಯಾಂಕ್ವೊಂದರ ಶಾಖೆಯಲ್ಲಿ 3 ಲಕ್ಷ ರೂ. ಸಾಲ ಪಡೆದುಕೊಂಡಿದ್ದರು. ಜಮೀನಿನಲ್ಲಿ ಬಾಳೆ, ಶುಂಠಿ, ಭತ್ತ ಬೆಳೆದಿದ್ದರು. ಆದರೆ ಬೆಳೆ ನಷ್ಟವಾಗಿತ್ತು. ಬುಧವಾರ ರಾತ್ರಿ ಕುಟುಂಬದವರೊಂದಿಗೆ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಸಾಲದ ಬಗ್ಗೆ ಪ್ರಸ್ತಾಪಿಸಿದ ತಿಮ್ಮಣ್ಣಗೌಡ ಸಾಲ ತೀರಿಸಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿ ಏಕಾಏಕಿ ಎದ್ದು ಓಡಿ ಹೋಗಿದ್ದಾರೆ. ಇದರಿಂದ ಗಾಬರಿಗೊಂಡ
ಮಗ ಅಭಿಷೇಕ್ ಸಹ ತಂದೆಯನ್ನು ಹಿಂಬಾಲಿಸಿದ್ದಾರೆ.
ತಂದೆ ಕೆರೆಗೆ ಹಾರಿದ್ದನ್ನು ನೋಡಿದ ಅಭಿಷೇಕ್ ಅವರನ್ನು ರಕ್ಷಿಸಲು ತಾನೂ ಕೆರೆಗೆ ಹಾರಿದ್ದಾನೆ. ಹಾವೇರಿ ಜಿಲ್ಲೆ ಬಂಕಾಪುರ ಸಮೀಪದ ಹುಲಿಕಟ್ಟಿ ಗ್ರಾಮದ ರಮೇಶ ಬಸವಣ್ಣೆಪ್ಪ ಪೂಜಾರ (46) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ರೈತ 3 ಎಕರೆ ಜಮೀನು ಹೊಂದಿದ್ದ. ಈ ಬಾರಿ ಹತ್ತಿ, ಗೋವಿನಜೋಳ ಬೆಳೆದಿದ್ದ. ಇಲ್ಲಿಯ ಕೆನರಾ ಬ್ಯಾಂಕಿನಲ್ಲಿ 75 ಸಾವಿರ ಸಾಲ, ಕೆವಿಜಿ
ಬ್ಯಾಂಕಿನಲ್ಲಿ 1ಲಕ್ಷ ಸೇರಿದಂತೆ ಕೈಗಡ ಎರಡು ಲಕ್ಷಕ್ಕಿಂತ ಅಧಿಕ ಸಾಲ ಮಾಡಿರುವುದಾಗಿ ತಿಳಿದು ಬಂದಿದೆ.ಬಂಕಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ