ನೈಸ್ ವಿರುದ್ಧ ಮತ್ತೆ ಹೋರಾಟದ ಮುನ್ಸೂಚನೆ ನೀಡಿದ ಗೌಡರು
Team Udayavani, Nov 24, 2018, 6:55 AM IST
ಬೆಂಗಳೂರು: ನೈಸ್ ಅಕ್ರಮದ ವಿರುದ್ಧ ಮತ್ತೆ ಹೋರಾಟ ಪ್ರಾರಂಭಿಸುವ ಮುನ್ಸೂಚನೆ ನೀಡಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಶುಕ್ರವಾರ ಹೊಸಕೆರೆಹಳ್ಳಿ ನೈಸ್ ರಸ್ತೆ ಬಳಿಯ ಪ್ರಮೋದ್ ಬಡಾವಣೆ ನಿವಾಸಿಗಳ ಅಹವಾಲು ಸ್ವೀಕರಿಸಿದರು.
ಪ್ರಮೋದ್ ಬಡಾವಣೆಯಲ್ಲಿ 17 ಎಕರೆ ಮತ್ತು ಹೊಸಕೆರೆಹಳ್ಳಿಯಲ್ಲಿ 50 ಎಕರೆ ಜಮೀನು ನೈಸ್ ಯೋಜನೆಗೆ ಸ್ವಾಧೀನಪಡಿಸಿಕೊಂಡಿದ್ದು, ರಸ್ತೆ ಸೇರಿ ಮೂಲಸೌಕರ್ಯ ಕಲ್ಪಿಸಿಲ್ಲ. ನೈಸ್ ಸಂಸ್ಥೆಯವರು ನಿತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಈ ಸಂದರ್ಭದಲ್ಲಿ ದೂರಿದರು.
ಜಿಲ್ಲಾಧಿಕಾರಿ ವಿಜಯಶಂಕರ್ ಅವರನ್ನು ಸ್ಥಳಕ್ಕೆ ಕರೆಸಿಕೊಂಡ ದೇವೇಗೌಡರು ಸ್ಥಳೀಯ ನಿವಾಸಿಗಳ ದೂರುಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು. ನಂತರ ಸುದ್ದಿಗಾರರ ಜತೆ ಮಾತನಾಡಿದ ದೇವೇಗೌಡರು, ನೈಸ್ ವಿರುದ್ಧ ಹೋರಾಟ ಮಾಡಿ ಬಹಳ ದಿನವಾಗಿತ್ತು. ಯಾವ ಕಾಲದಲ್ಲಿ ಏನೇನು ಅಕ್ರಮ ನಡೆದಿದೆ ಎಂಬುದು ನನಗೆ ತಿಳಿದಿದೆ. ಸದನ ಸಮಿತಿ ವರದಿ ಮೇಲೆ ತಕ್ಷಣ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸೂಚಿಸುತ್ತೇನೆ. ಮೈತ್ರಿ ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುವಾಗಲಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ