ಶೃಂಗೇರಿ ಶಾರದಾಪೀಠದಲ್ಲಿ ಲಕ್ಷ ದೀಪೋತ್ಸವ
Team Udayavani, Nov 25, 2018, 6:25 AM IST
ಶೃಂಗೇರಿ: ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಶುಕ್ರವಾರ ರಾತ್ರಿ ಲಕ್ಷ ದೀಪೋತ್ಸವ ಹಾಗೂ ತೆಪ್ಪೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಕಾರ್ತಿಕ ಶುದ್ಧ ಹುಣ್ಣಿಮೆಯ ದಿನ ಶ್ರೀ ಸ್ತಂಭಗಣಪತಿ, ಶ್ರೀಮಲಹಾನಿಕರೇಶ್ವರಸ್ವಾಮಿ, ಶ್ರೀಭವಾನಿ ಅಮ್ಮನವರ ಸನ್ನಿಧಿಯಲ್ಲಿ ರಂಗಪೂಜೆ, ಮಹಾಮಂಗಳಾರತಿ, ಅಷ್ಟವಧಾನ ಸೇವೆ ನೆರವೇರಿಸಲಾಯಿತು. ಬಳಿಕ ಪರಕಾಳಿಯನ್ನು ದಹಿಸಲಾಯಿತು.
ಬೆಟ್ಟದ ಶ್ರೀ ಮಲಹಾನಿಕರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿಗಳು ಮೊದಲ ದೀಪ ಬೆಳಗಿಸಿ ದಿಪೋತ್ಸವಕ್ಕೆ ಚಾಲನೆ ನೀಡಿದರು. ಶ್ರೀ ಮಠದಲ್ಲಿ ಶ್ರೀ ಶಾರದಾಂಬಾ ಬಂಗಾರದ ರಥೋತ್ಸವ, ಮಹಾಮಂಗಳಾರತಿ, ಅಷ್ಟಾವಧಾನ ಸೇವೆಗಳು ನಡೆದವು. ಬಳಿಕ ಶ್ರೀ ಶಾರದಾಂಬೆ, ಶ್ರೀ ಭವಾನಿಯಮ್ಮ, ಶ್ರೀ ಮಲಹಾನಿಕರೇಶ್ವರ ಸ್ವಾಮಿ, ಶ್ರೀ ವಿದ್ಯಾಶಂಕರ, ಶ್ರೀ ಶಂಕರಾಚಾರ್ಯರ ಉತ್ಸವ ಮೂರ್ತಿಗಳ ವಿಜೃಂಭಣೆಯ ತೆಪ್ಪೋತ್ಸವ ತುಂಗಾನದಿಯಲ್ಲಿ ನಡೆಯಿತು. ಶ್ರೀ ಮಠದ ಪುರೋಹಿತರು ತೆಪ್ಪೋತ್ಸವದಲ್ಲಿ ಪೂಜೆ ನೆರವೇರಿಸಿದರು. ಈ ವೇಳೆ ಋತ್ವಿಜರು ತುಂಗೆಗೆ ಆರತಿ ಬೆಳಗಿದರು. ಸುಮಂಗಲಿಯರು ತುಂಗೆಗೆ ಬಾಗಿನ ಸಮರ್ಪಿಸಿದರು. ಸಾವಿರಾರು ಭಕ್ತರು ಉತ್ಸವದಲ್ಲಿ ಭಾಗಿಯಾದರು.
ದೀಪೋತ್ಸವದ ಅಂಗವಾಗಿ ಮಠದ ಆವರಣದಲ್ಲಿ ಬಿಡಿಸಿದ್ದ ಬೃಹತ್ ರಂಗೋಲಿ ಜನಮನ ಸೆಳೆಯಿತು. ಶ್ರೀ ಚಂದ್ರಶೇಖರಭಾರತೀ ಸಭಾಂಗಣದಲ್ಲಿ ಶಂಕರ ಚರಿತ್ರಾಮೃತ ನೃತ್ಯರೂಪಕ ಹಾಗೂ ಯಕ್ಷಗಾನ ಪ್ರದರ್ಶನ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್